Homeನ್ಯಾಯ ಪಥರೈತರಿಗೆ ಬೇಕಿರುವುದು ನೀರು, ಬೆಲೆ - ಸಾಲ, ವಿಮೆ

ರೈತರಿಗೆ ಬೇಕಿರುವುದು ನೀರು, ಬೆಲೆ – ಸಾಲ, ವಿಮೆ

- Advertisement -
- Advertisement -

ಈ ಹೊತ್ತಿನ ಸುದ್ದಿ ಏನೆಂದರೆ ದೆಹಲಿ ಹಾಗೂ ಬೆಂಗಳೂರಿನಲ್ಲಿರುವ ಘನ ಸರಕಾರಗಳು ಪ್ರವಾಹಪೀಡಿತ ರೈತರ ಹಸಿದ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕೋದಕ್ಕಿಂತ `ಪೀಕು ವಿಮೆ’ (ಅಗ್ರಿಕಲ್ಚರ್ ಇನ್ಷುರನ್ಸ್) ನ ಮೊರೆ ಹೊಗತಾರಂತ.

ಇದು ಹೆಂಗ ಅಂದರ, “ಮೂರು ದಿನದಿಂದ ಕೂಳು ಕಂಡಿಲ್ಲ ಯಪ್ಪಾ, ನಮ್ಮ ಗೋಳು ಕಳಿಯೋ ದೊರಿಯೇ” ಅಂತ ರಾಜಾನ್ನ ಕೇಳಾಕ ಹೋದರ, “ನಿಮ್ಮೂರ ಸಾವುಕಾರನ ಮನಿ ಮಗಳ ಲಗ್ನ ಐತಿ, ಅಲ್ಲಿ ಉಣ್ಣು ಹೋಗರಿ” ಅಂದರಂತ, ಹಂಗ. ನಮ್ಮಿಂದ ಗೆದ್ದ ಹೋದ ಸರಕಾರ ಅನ್ನೋದು ತನ್ನ ಜವಾಬುದಾರಿ ನಿಭಾಯಿಸೋದು ಬಿಟ್ಟು ಬ್ಯಾರೆಯವರ ಮ್ಯಾಲೆ ಹಾಕಿದರ ಮಾಡೋದೇನು? ಏನು ಮಾಡಲಿಕ್ಕೆ ಆಗತೆತಿ? ಏನು ಬರತದ ಅದನ್ನ ನೋಡಿಕೋತ ಹೋಗೋದು, ಅಷ್ಟ.

ಕನ್ನಡಮ್ಮನ ಮೆಚ್ಚಿನ ಮಗನಾಗಿದ್ದ ಡಾ.ಡಿ.ಎಂ. ನಂಜುಂಡಪ್ಪ ಅವರು “ರಾಜ್ಯದ ರೈತನಿಗೆ ಬೇಕಾಗಿದ್ದು ಎರಡೇ- ಒಂದು ನೀರು ಮತ್ತೊಂದು ಬೆಲೆ. ಇಷ್ಟು ಸಿಕ್ಕರೆ ಅವನು ಬೇರೆ ಎಲ್ಲ ನೋಡಿಕೊಳ್ಳುತ್ತಾನೆ”, ಅಂತ ಹೇಳುತ್ತಿದ್ದರು. ಈ ಕಾಲದ ಅಗತ್ಯಗಳಿಗೆ ತಕ್ಕಂಗ ಅದಕ್ಕ ನಾವು `ಸುಲಭ ಸಾಲ’ ಹಾಗೂ `ಬೆಳೆ ವಿಮೆ’ ಅಂತ ಸೇರಿಸಿಗೋಬಹುದು.

ಈ ನಾಲ್ಕನ್ನ ರೈತರಿಗೆ ಕೊಡಲಿಕ್ಕೆ ಯಾವುದಾದರೂ ಬಣ್ಣದ, ಝಂಡಾದ, ಘೋಷಣೆಯ, ಪಕ್ಷದ ಸರಕಾರ ಪ್ರಯತ್ನ ಮಾಡ್ಯಾವೇನು? ಅನ್ನುವ ಪ್ರಶ್ನೆಗೆ ಜೋರು ದನಿಯಿಂದ `ಇಲ್ಲ’ ಅನ್ನೋದ ಉತ್ತರ. ಇವಿಷ್ಟರ ಒಳಗ ರಾಜಕಾರಣಿಗಳ ಹೃದಯಕ್ಕ ಹತ್ತಿರವಾಗಿರೋ ವಿಷಯ ಅಂದರ ನೀರು ಕೊಡುವುದು ಅರ್ಥಾತ್ ನೀರಾವರಿ. ಹಿಂಗಾಗಿ ಅದನ್ನ ಕಡೀಕೆ ನೋಡೋಣ. (ರಾಜಕಾರಣಿಗಳಿಗೆ ಹೃದಯ ಅದ ಏನು ಅಂತ ಕೇಳಬ್ಯಾಡಿರಿ, ಅದು ಬ್ಯಾರೆ ವಿಷಯ).

ಮೊದಲಿಗೆ ಬೆಲೆ. ಇದು ಜಾಗತಿಕ ಸಮಸ್ಯೆ. ದೇಶದಿಂದ ದೇಶಕ್ಕ ಸಾಮಾನು ಹಾಗೂ ಸೇವೆ ತಡೆ ಇಲ್ಲದ ಓಡಾಡಬಹುದು ಅಂತ ಹೇಳಿದ ಮ್ಯಾಲೆ ಇದು ಹೆಚ್ಚಾತು.

ಅದರಾಗೂನು ನಮ್ಮ ದೇಶದಾಗ ಮನಮೋಹನಾಮಿಕ್ಸ್ ಶುರು ಆದಮ್ಯಾಲೆ ಅಂತೂ ಇದು ಇನ್ನೂ ಹೆಚ್ಚಾಗೇದ. ಒಂದು ಕಡೆ ಸಮಸ್ಯೆ ಆದರ ಇನ್ನೊಂದು ಕಡೆನೂ ಹಬ್ಬೋ ಹಂಗ. ಒಂದು ಕಡೆ ಗಾಯ ಆದರ ಅದರ ರಸಾ ಸೋರಿ ಇನ್ನೊಂದು ಕಡೆ ಹುಣ್ಣು ಆಗತದಲ್ಲಾ ಹಂಗ. ಇವೆಲ್ಲಾ ನಮ್ಮ ಬಡ ಬೋರೇಗೌಡನಿಗೆ ತಿಳಿಯಂಗಿಲ್ಲಾ. ಯಾವ ದೇಶದಾಗ ಚುನಾವಣೆಗೆ ಮುಂಚೆ ಹುದ್ದರಿಗಳು ನಮ್ಮ ಚಿನ್ನೆ ಕೈ, ಹೂವು ಅಲ್ಲ. ನಮ್ಮ ಕೈ ಹುಲ್ಲಿನ ಹೊರೆ ಹೊತ್ತ ನಿಮ್ಮಂತಾ ಮಹಿಳೆ, ಕೈ ಅಲ್ಲಾ, ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಹೇಳಿ ಕೊಡಬೇಕಾಗತದೋ, ಆ ದೇಶದಾಗ “ದಕ್ಷಿಣ ಅಮೇರಿಕಾದಾಗ ಬಹಳ ಸೋಯಾ ಬೆಳದಿದ್ದಕ್ಕ ನಮ್ಮಲ್ಲಿ ರೇಟು ಬಿದ್ದದ” ಅಂತ ಹೇಳಲಿಕ್ಕೆ ಆಗತದೇನು?

ಬ್ಯಾರೆ ಬ್ಯಾರೆ ದೇಶದಾಗ ಇದಕ್ಕ ಬ್ಯಾರೆ ಬ್ಯಾರೆ ಉತ್ತರ ಕಂಡುಕೊಂಡಾರ. ನಮ್ಮಲಿನೂ ಪ್ರಯತ್ನ ನಡದಾವು. ಆದರ ಅವು ಲಾಟರಿ ಇದ್ದಂಗ. ಬಂದರ ಬಂತು, ಹೋದರ ಹೋತು. ಬೀಜ ಬಿತ್ತೋಕ್ಕಿಂತಾ ಮುಂಚೆ ಬೆಳೀ ಬೆಲೆ ತಿಳಕೊಳ್ಳೋ ಹಂಗ ಏನಾದರೂ ಮಾಡಲಿಕ್ಕೆ ಸಾಧ್ಯ ಆದರ ಅದರಂಥಾದು ಮತ್ತೊಂದಿಲ್ಲ. ಇಡೀ ಜಗತ್ತಿಗೇ ಹೊಸ ತಂತ್ರಜ್ಞಾನ ಕೊಡೋ ಐಟೀ ಘಟಗಳು, ಇಪ್ಪತ್ತು- ಮೂವತ್ತು ಉಪಗ್ರಹ ಒಟ್ಟಿಗೇ ಹಾರಿಸುವ ಇಸ್ರೋ, ಹತ್ತು ಸಾವಿರ ಜನ ನೂರು ವರ್ಷದೊಳಗ ಮಾಡೋ ಲೆಕ್ಕಾ ಒಂದು ಕ್ಷಣದಾಗ ಮಾಡೋ ಸುಪರ್ ಕಂಪ್ಯೂಟರ್ ತಯಾರು ಮಾಡಿದ ನಮ್ಮ ವಿಜ್ಞಾನಿಗಳು ಇದನ್ನ ಮಾಡಲಾರರೇನು? ಇಂತಹ ದೊಡ್ಡ ಪ್ರಶ್ನೆಗೆ ಉತ್ತರವನ್ನ ದೊಡ್ಡ ಸ್ಥಾನದಾಗ ಇರೋರು ತಮಗ ತಾವ ಕೇಳಿಕೊಳ್ಳಬೇಕು.

ಇನ್ನು ಸಾಲ. ಯಾವ ದೇಶದಲ್ಲಿ 8.5 ಲಕ್ಷ ಸಹಕಾರಿ ಸಂಸ್ಥೆಗಳು ಮತ್ತ 2,000 ಕ್ಕೂ ಹೆಚ್ಚು ಬ್ಯಾಂಕುಗಳು ಇದ್ದಾವೋ ಆ ದೇಶದಲ್ಲಿ ಸಾಲ ಸುಲಭವಾಗಿರದೇ ಕಷ್ಟವಾಗಿರಬಾರದಿತ್ತು. ಆದರ ಅದು ಹಂಗಿಲ್ಲ. ಯಾಕ? ಎಲ್ಲೆ ತಪ್ಪ ಐತಿ? ಸಹಕಾರಿಗಳ ರಾಜಕೀಕರಣ ಅಥವಾ ರಾಜಕಾರಣಿಗಳ ಸಹಕಾರೀಕರಣದಿಂದಾಗಿ ತಪ್ಪಾಗೇತಿ ಅಂತ ಕೆಲವರು ವಾದಸಾಕ ಹತ್ಯಾರ. ಹೌದೇನು? ಇದರಿಂದ ರೈತರು ದಲ್ಲಾಳಿಗಳ ಕೈಯೊಳಗ ಸಿಗಲಾರದ ಹಂಗ ಮಾಡಿ, ರೈತರಿಗೆ ಬೆಲೆ ಸಿಗಬಹುದು ಅನ್ನೋ ಉದ್ದೇಶದಿಂದ ಶುರು ಮಾಡಿದ ಭಾರತೀಯ ಸರಕು ವಿನಿಮಯ ಕೇಂದ್ರ (ಕಮಾಡಿಟಿಸ್ ಎಕ್ಸಚೇಂಜ್) ಯಾಕ ಬೇಕಾಗಿದ ಕೆಲಸ ಮಾಡವಲ್ಲತು? ಅದು ಭಾರತದ ಸರ್ವ ದಲ್ಲಾಳಿಗಳ ಶಕ್ತಿ ಕೇಂದ್ರ ಆಗಿಬಿಟ್ಟಿದ್ದು ಹೆಂಗ ಅಂತ ಯಾರರ ವಿಚಾರ ಮಾಡಾಕ ಹತ್ಯಾರೇನು?

ಭಾರತದಿಂದ ಹೋದ ತಜ್ಞರು ಇಡೀ ವಿಶ್ವಕ್ಕೆ ಇಂಥಾ ವಿಷಯಗಳ ಬಗ್ಗೆ ಸಲಹೆ ಕೊಡಲಿಕ್ಕೆ ಹತ್ಯಾರ. ಹಂಗಾರ ನಮಗ ಯಾಕ ಕೊಟ್ಟಿಲ್ಲ? ಅವರು ನಮ್ಮ ದೇಶದಾಗ ಯಾಕ ನಿಲ್ಲವಲ್ಲರು? ಇಲ್ಲೇ ನಿಂತವರು ಯಾಕ ನಮಗೇನೂ ಹೇಳವಲ್ಲರು? ಇದರ ಬಗ್ಗೆ ಸಹ ಚರ್ಚೆ ಆಗಬೇಕಾಗೇದ.

ಇನ್ನು ಬೆಳೆ ವಿಮೆ, ಕೃಷಿ ವಿಮೆ ಅಥವಾ ಪೀಕು ವಿಮೆ. ಬೆಳೆ ವಿಮೆ ಅಂತಿದ್ದದ್ದನ್ನ ಕೇಂದ್ರದ ಅಧಿಕಾರಿಗಳು ಕೃಷಿ ವಿಮೆ ಅಂತ ಮಾಡ್ಯಾರ. ಯಾಕೋ ಗೊತ್ತಿಲ್ಲ. ಹಂಗ ಜನತಾ ಜನಾ ಆರ್ ದನಾ ರಿಗೆ ಗೊತ್ತಾಗದಂಥಾವು ಈ ಸರಕಾರದಾಗ ಭಾಳ ಅವ. ಹೋಗಲಿ ಬಿಡರಿ.

ಖರೆ ಅಂದರೆ ಅದು ಪೀಕು ವಿಮೆ. ಅಂದರ ರೈತರ ಹತ್ತರ ರೊಕ್ಕ ಪೀಕಿ ಆಮ್ಯಾಲೆ ಕೇಳಾಕ ಹೋದರ ತೊಗೋರಿ ಈ ಪೀಪೀ, ಊದರಿ ಪುಂಗಿ ಅಂತ ಕೊಡತಾರಲ್ಲಾ ಅದಕ್ಕ.

ರೈತರ ಕಲ್ಯಾಣ ಆಗಬೇಕು ಅಂತ ಮಾಡಿದ ಈ ಸಂಸ್ಥಾ ರೈತರನ್ನು ಬಿಟ್ಟು ವಿಮಾ ಕಂಪನಿಗಳ ಕಲ್ಯಾಣ ಕ್ಕ ನಿಂತು ಬಿಟ್ಟದ್ದು ಯಾಕ?

ಮೊದಲನೇದಾಗಿ ನೂರರಾಗ ಬರೇ ಮೂವತ್ತು ಮಂದಿ ಅಷ್ಟ ವಿಮಾದಾಗ ಬರತಾರ. ಅದೂ ಅವರು ಶೇಕಡಾ ಒಂದು ರೊಕ್ಕ ಕೊಟ್ಟಿದ್ದರ. ಇಲ್ಲಾ ಸಾಲಾ ತೊಗೊಂಡಿದ್ದರ. ಇನ್ನ ಅದರ ಪರಿಹಾರ ಅವರ ನಷ್ಟ ಭರ್ತಿಗೆ ಸಾಕಾಗಂಗಿಲ್ಲ. ಮುಂದಿನ ಪೀಕಿನ ಖರ್ಚು ಕಳಿಲಿಕ್ಕೆ ಅವರಿಗೆ ಸಾಕಾಗತದ ಅಷ್ಟ. ವಿಮಾ ಕಂಪನಿಗಳು ನೂರು ರೂಪಾಯಿ ರೈತರು ಹಾಗೂ ಸರಕಾರದ ಕಡೆ ಇಸಗೊಂಡು 73 ರೂಪಾಯಿ ರೈತರಿಗೆ ಕೊಟ್ಟಾವು. ಅತ್ಯಂತ ಘೋರ ಬರಗಾಲ, ಪ್ರವಾಹದಾಗ ಸಹ ಅವರು ಕೊಡೋ ಮೊತ್ತ ಹೆಚ್ಚಾಗಿಲ್ಲ. ಇನ್ನ ನಮ್ಮ ಸರಕಾರ ಕಣ್ಣೀರಿನ್ಯಾಗ ಕೈ ತೊಳಕೊಂಡು ಗೋವಾಕ್ಕ ದುಡೀಲಿಕ್ಕೆ ಹೊಂಟಿರೋ ನಮ್ಮ ಉತ್ತರ ಕರ್ನಾಟಕದವರಿಗೆ ಅವರ ಬೆಳೆ ನಷ್ಟ ಪರಿಹಾರ ಮಾಡದೇ ಕಂಪನಿಗಳಿಗೆ ಹೇಳಿದರ ಯಾರನ್ನು ಅನ್ನೋಣು, ಯಾರನ್ನ ಬಿಡೋಣು?

ನೀರಾವರಿಯ ಬಗ್ಗೆ ಹೇಳಿದಷ್ಟೂ ಉಳೀತದ. ಅರವತ್ತರ ದಶಕದಾಗ ಇರೋ ಸಂಪನ್ಮೂಲ ಎಲ್ಲಾ ಡ್ಯಾಮುಗಳಿಗೆ ಹಾಕ್ರಿ. ಒಂದು ಸತೆ ನೀರಾವರಿ ಬಂತೂ ಅಂದರ ರೈತರು ಸುಬಧ್ರರಾಗತಾರ, ನಾಡು ಸುಭಿಕ್ಷ ಆಗತದ, ಬಡತನ ಹೋಗಿರತದ, ನಮ್ಮ ಆದಾಯನೂ ಹೆಚ್ಚು ಆಗತದ, ಇದ್ದ ಸಂಪನ್ಮೂಲ ಬ್ಯಾರೆ ಕಡೆ ಹಾಕಬಹುದು, ಅಂತ ನಮ್ಮ ದೇಶದ ಆರ್ಥಿಕ ತಜ್ಞರು ಹಾಗೂ ಪಂಚವಾರ್ಷಿಕ ಯೋಜನೆಗಳ ಕರ್ತಾರರು ನಿರ್ಧಾರ ಮಾಡಿದರಂತ. ಅದಕ್ಕ ಇತರ ಮೂಲಸೌಕರ್ಯಗಳಿಗಿಂತ ನೀರಾವರಿಗೆ ಹೆಚ್ಚಿನ ಬಜೆಟ್ಟಿನ ಬೆಂಬಲ ಸಿಗ್ತು. ಲಗೂ ನಿರ್ಣಯ ತಗೋಳೋ ಅನುಕೂಲ ಇರಲಿ ಅಂತ ಹೇಳಿ ನೀರಾವರಿ ಇಲಾಖೆ ವಿಕೇಂದ್ರೀಕರಣ ಆಗಲಿಲ್ಲ. ಆದರ 50 ವರ್ಷಗಳ ಅಂಧಾದುಂದಿ ಖರ್ಚಿನ ನಂತರ ಏನಾಗೇದ? ನೀರಾವರಿ ಪ್ರದೇಶ ಕೇವಲ 10 ಶೇಕಡಾ ಹೆಚ್ಚಾಗೇದ. ದೊಡ್ಡ ನೀರಾವರಿ ಯೋಜನೆಗಳಿಂದ ಮುಳುಗಡೆ, ಪ್ರವಾಹ ಮುಂತಾದ ಸಮಸ್ಸೆಗಳು ಹೆಚ್ಚಾಗ್ಯಾವು. ಬಡವರ ಬಸಿದ ಸುಂಕದಿಂದ ಕಟ್ಟಿಡ ಡ್ಯಾಮಿನ್ಯಾಗ ಹೂಳು ಹಾಗೂ ಸ್ಥಳೀಯ ರಾಜಕಾರಣಿ ರಾಜ್ಯ- ರಾಷ್ಟ್ರಮಟ್ಟಕ್ಕೆ ಬೆಳೆದ ರಹಸ್ಯದ ಧೂಳು ಮಾತ್ರ ತುಂಬೇದ. ರೈತರು ಅಭದ್ರರಾಗಿ, ನಾಡು ದುರ್ಭಿಕ್ಷ ವಾಗೇ ಉಳಿದದ.

ಸಾವಿರಾರು ಎಕರೆ ಮುಳುಗಿಸಿ ನೂರಾರು ಎಕರೆಗೆ ನೀರು ಹರಿಸುವ ದೊಡ್ಡ ಯೋಜನೆಗಳ ಮೇಲೆ ಕಣ್ಣು ಹರಿಸದೇ ಜಪಾನು ದೇಶದಂಗ ಕಮ್ಮೀ ಖರ್ಚಿನ ಸಣ್ಣಸಣ್ಣ ಯೋಜನೆಗಳನ್ನ, ಸ್ಥಳೀಯ ರೈತರ ಮೆಹರಬಾನಿಕೆಯೊಳಗ ನೀಟಾಗಿ ಮಾಡಿದ್ದರ ಹಳ್ಳೀ ಆರ್ಥಿಕತೆ ಕುಂಡದಾಗ ಹೂಬೆಳೆಸಿದಂಗ ನೀಟಾಗಿ ಇರ್ತಿತ್ತು. ಮರಿ ಪುಢಾರಿಗಳು ತಿಮಿಂಗಿಲುಗಳಾಗುವ ಸಾಧ್ಯತೆ ಕಮ್ಮಿ ಇರ್ತಿತ್ತು. ಆ ಅವಕಾಶ ಕಳಕೊಂಡೇವಿ ಅನ್ನಸಂಗಿಲ್ಲೇನು, ಮನೋಲ್ಲಾಸಿನಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...