Homeನ್ಯಾಯ ಪಥರೈತರಿಗೆ ಬೇಕಿರುವುದು ನೀರು, ಬೆಲೆ - ಸಾಲ, ವಿಮೆ

ರೈತರಿಗೆ ಬೇಕಿರುವುದು ನೀರು, ಬೆಲೆ – ಸಾಲ, ವಿಮೆ

- Advertisement -
- Advertisement -

ಈ ಹೊತ್ತಿನ ಸುದ್ದಿ ಏನೆಂದರೆ ದೆಹಲಿ ಹಾಗೂ ಬೆಂಗಳೂರಿನಲ್ಲಿರುವ ಘನ ಸರಕಾರಗಳು ಪ್ರವಾಹಪೀಡಿತ ರೈತರ ಹಸಿದ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕೋದಕ್ಕಿಂತ `ಪೀಕು ವಿಮೆ’ (ಅಗ್ರಿಕಲ್ಚರ್ ಇನ್ಷುರನ್ಸ್) ನ ಮೊರೆ ಹೊಗತಾರಂತ.

ಇದು ಹೆಂಗ ಅಂದರ, “ಮೂರು ದಿನದಿಂದ ಕೂಳು ಕಂಡಿಲ್ಲ ಯಪ್ಪಾ, ನಮ್ಮ ಗೋಳು ಕಳಿಯೋ ದೊರಿಯೇ” ಅಂತ ರಾಜಾನ್ನ ಕೇಳಾಕ ಹೋದರ, “ನಿಮ್ಮೂರ ಸಾವುಕಾರನ ಮನಿ ಮಗಳ ಲಗ್ನ ಐತಿ, ಅಲ್ಲಿ ಉಣ್ಣು ಹೋಗರಿ” ಅಂದರಂತ, ಹಂಗ. ನಮ್ಮಿಂದ ಗೆದ್ದ ಹೋದ ಸರಕಾರ ಅನ್ನೋದು ತನ್ನ ಜವಾಬುದಾರಿ ನಿಭಾಯಿಸೋದು ಬಿಟ್ಟು ಬ್ಯಾರೆಯವರ ಮ್ಯಾಲೆ ಹಾಕಿದರ ಮಾಡೋದೇನು? ಏನು ಮಾಡಲಿಕ್ಕೆ ಆಗತೆತಿ? ಏನು ಬರತದ ಅದನ್ನ ನೋಡಿಕೋತ ಹೋಗೋದು, ಅಷ್ಟ.

ಕನ್ನಡಮ್ಮನ ಮೆಚ್ಚಿನ ಮಗನಾಗಿದ್ದ ಡಾ.ಡಿ.ಎಂ. ನಂಜುಂಡಪ್ಪ ಅವರು “ರಾಜ್ಯದ ರೈತನಿಗೆ ಬೇಕಾಗಿದ್ದು ಎರಡೇ- ಒಂದು ನೀರು ಮತ್ತೊಂದು ಬೆಲೆ. ಇಷ್ಟು ಸಿಕ್ಕರೆ ಅವನು ಬೇರೆ ಎಲ್ಲ ನೋಡಿಕೊಳ್ಳುತ್ತಾನೆ”, ಅಂತ ಹೇಳುತ್ತಿದ್ದರು. ಈ ಕಾಲದ ಅಗತ್ಯಗಳಿಗೆ ತಕ್ಕಂಗ ಅದಕ್ಕ ನಾವು `ಸುಲಭ ಸಾಲ’ ಹಾಗೂ `ಬೆಳೆ ವಿಮೆ’ ಅಂತ ಸೇರಿಸಿಗೋಬಹುದು.

ಈ ನಾಲ್ಕನ್ನ ರೈತರಿಗೆ ಕೊಡಲಿಕ್ಕೆ ಯಾವುದಾದರೂ ಬಣ್ಣದ, ಝಂಡಾದ, ಘೋಷಣೆಯ, ಪಕ್ಷದ ಸರಕಾರ ಪ್ರಯತ್ನ ಮಾಡ್ಯಾವೇನು? ಅನ್ನುವ ಪ್ರಶ್ನೆಗೆ ಜೋರು ದನಿಯಿಂದ `ಇಲ್ಲ’ ಅನ್ನೋದ ಉತ್ತರ. ಇವಿಷ್ಟರ ಒಳಗ ರಾಜಕಾರಣಿಗಳ ಹೃದಯಕ್ಕ ಹತ್ತಿರವಾಗಿರೋ ವಿಷಯ ಅಂದರ ನೀರು ಕೊಡುವುದು ಅರ್ಥಾತ್ ನೀರಾವರಿ. ಹಿಂಗಾಗಿ ಅದನ್ನ ಕಡೀಕೆ ನೋಡೋಣ. (ರಾಜಕಾರಣಿಗಳಿಗೆ ಹೃದಯ ಅದ ಏನು ಅಂತ ಕೇಳಬ್ಯಾಡಿರಿ, ಅದು ಬ್ಯಾರೆ ವಿಷಯ).

ಮೊದಲಿಗೆ ಬೆಲೆ. ಇದು ಜಾಗತಿಕ ಸಮಸ್ಯೆ. ದೇಶದಿಂದ ದೇಶಕ್ಕ ಸಾಮಾನು ಹಾಗೂ ಸೇವೆ ತಡೆ ಇಲ್ಲದ ಓಡಾಡಬಹುದು ಅಂತ ಹೇಳಿದ ಮ್ಯಾಲೆ ಇದು ಹೆಚ್ಚಾತು.

ಅದರಾಗೂನು ನಮ್ಮ ದೇಶದಾಗ ಮನಮೋಹನಾಮಿಕ್ಸ್ ಶುರು ಆದಮ್ಯಾಲೆ ಅಂತೂ ಇದು ಇನ್ನೂ ಹೆಚ್ಚಾಗೇದ. ಒಂದು ಕಡೆ ಸಮಸ್ಯೆ ಆದರ ಇನ್ನೊಂದು ಕಡೆನೂ ಹಬ್ಬೋ ಹಂಗ. ಒಂದು ಕಡೆ ಗಾಯ ಆದರ ಅದರ ರಸಾ ಸೋರಿ ಇನ್ನೊಂದು ಕಡೆ ಹುಣ್ಣು ಆಗತದಲ್ಲಾ ಹಂಗ. ಇವೆಲ್ಲಾ ನಮ್ಮ ಬಡ ಬೋರೇಗೌಡನಿಗೆ ತಿಳಿಯಂಗಿಲ್ಲಾ. ಯಾವ ದೇಶದಾಗ ಚುನಾವಣೆಗೆ ಮುಂಚೆ ಹುದ್ದರಿಗಳು ನಮ್ಮ ಚಿನ್ನೆ ಕೈ, ಹೂವು ಅಲ್ಲ. ನಮ್ಮ ಕೈ ಹುಲ್ಲಿನ ಹೊರೆ ಹೊತ್ತ ನಿಮ್ಮಂತಾ ಮಹಿಳೆ, ಕೈ ಅಲ್ಲಾ, ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಹೇಳಿ ಕೊಡಬೇಕಾಗತದೋ, ಆ ದೇಶದಾಗ “ದಕ್ಷಿಣ ಅಮೇರಿಕಾದಾಗ ಬಹಳ ಸೋಯಾ ಬೆಳದಿದ್ದಕ್ಕ ನಮ್ಮಲ್ಲಿ ರೇಟು ಬಿದ್ದದ” ಅಂತ ಹೇಳಲಿಕ್ಕೆ ಆಗತದೇನು?

ಬ್ಯಾರೆ ಬ್ಯಾರೆ ದೇಶದಾಗ ಇದಕ್ಕ ಬ್ಯಾರೆ ಬ್ಯಾರೆ ಉತ್ತರ ಕಂಡುಕೊಂಡಾರ. ನಮ್ಮಲಿನೂ ಪ್ರಯತ್ನ ನಡದಾವು. ಆದರ ಅವು ಲಾಟರಿ ಇದ್ದಂಗ. ಬಂದರ ಬಂತು, ಹೋದರ ಹೋತು. ಬೀಜ ಬಿತ್ತೋಕ್ಕಿಂತಾ ಮುಂಚೆ ಬೆಳೀ ಬೆಲೆ ತಿಳಕೊಳ್ಳೋ ಹಂಗ ಏನಾದರೂ ಮಾಡಲಿಕ್ಕೆ ಸಾಧ್ಯ ಆದರ ಅದರಂಥಾದು ಮತ್ತೊಂದಿಲ್ಲ. ಇಡೀ ಜಗತ್ತಿಗೇ ಹೊಸ ತಂತ್ರಜ್ಞಾನ ಕೊಡೋ ಐಟೀ ಘಟಗಳು, ಇಪ್ಪತ್ತು- ಮೂವತ್ತು ಉಪಗ್ರಹ ಒಟ್ಟಿಗೇ ಹಾರಿಸುವ ಇಸ್ರೋ, ಹತ್ತು ಸಾವಿರ ಜನ ನೂರು ವರ್ಷದೊಳಗ ಮಾಡೋ ಲೆಕ್ಕಾ ಒಂದು ಕ್ಷಣದಾಗ ಮಾಡೋ ಸುಪರ್ ಕಂಪ್ಯೂಟರ್ ತಯಾರು ಮಾಡಿದ ನಮ್ಮ ವಿಜ್ಞಾನಿಗಳು ಇದನ್ನ ಮಾಡಲಾರರೇನು? ಇಂತಹ ದೊಡ್ಡ ಪ್ರಶ್ನೆಗೆ ಉತ್ತರವನ್ನ ದೊಡ್ಡ ಸ್ಥಾನದಾಗ ಇರೋರು ತಮಗ ತಾವ ಕೇಳಿಕೊಳ್ಳಬೇಕು.

ಇನ್ನು ಸಾಲ. ಯಾವ ದೇಶದಲ್ಲಿ 8.5 ಲಕ್ಷ ಸಹಕಾರಿ ಸಂಸ್ಥೆಗಳು ಮತ್ತ 2,000 ಕ್ಕೂ ಹೆಚ್ಚು ಬ್ಯಾಂಕುಗಳು ಇದ್ದಾವೋ ಆ ದೇಶದಲ್ಲಿ ಸಾಲ ಸುಲಭವಾಗಿರದೇ ಕಷ್ಟವಾಗಿರಬಾರದಿತ್ತು. ಆದರ ಅದು ಹಂಗಿಲ್ಲ. ಯಾಕ? ಎಲ್ಲೆ ತಪ್ಪ ಐತಿ? ಸಹಕಾರಿಗಳ ರಾಜಕೀಕರಣ ಅಥವಾ ರಾಜಕಾರಣಿಗಳ ಸಹಕಾರೀಕರಣದಿಂದಾಗಿ ತಪ್ಪಾಗೇತಿ ಅಂತ ಕೆಲವರು ವಾದಸಾಕ ಹತ್ಯಾರ. ಹೌದೇನು? ಇದರಿಂದ ರೈತರು ದಲ್ಲಾಳಿಗಳ ಕೈಯೊಳಗ ಸಿಗಲಾರದ ಹಂಗ ಮಾಡಿ, ರೈತರಿಗೆ ಬೆಲೆ ಸಿಗಬಹುದು ಅನ್ನೋ ಉದ್ದೇಶದಿಂದ ಶುರು ಮಾಡಿದ ಭಾರತೀಯ ಸರಕು ವಿನಿಮಯ ಕೇಂದ್ರ (ಕಮಾಡಿಟಿಸ್ ಎಕ್ಸಚೇಂಜ್) ಯಾಕ ಬೇಕಾಗಿದ ಕೆಲಸ ಮಾಡವಲ್ಲತು? ಅದು ಭಾರತದ ಸರ್ವ ದಲ್ಲಾಳಿಗಳ ಶಕ್ತಿ ಕೇಂದ್ರ ಆಗಿಬಿಟ್ಟಿದ್ದು ಹೆಂಗ ಅಂತ ಯಾರರ ವಿಚಾರ ಮಾಡಾಕ ಹತ್ಯಾರೇನು?

ಭಾರತದಿಂದ ಹೋದ ತಜ್ಞರು ಇಡೀ ವಿಶ್ವಕ್ಕೆ ಇಂಥಾ ವಿಷಯಗಳ ಬಗ್ಗೆ ಸಲಹೆ ಕೊಡಲಿಕ್ಕೆ ಹತ್ಯಾರ. ಹಂಗಾರ ನಮಗ ಯಾಕ ಕೊಟ್ಟಿಲ್ಲ? ಅವರು ನಮ್ಮ ದೇಶದಾಗ ಯಾಕ ನಿಲ್ಲವಲ್ಲರು? ಇಲ್ಲೇ ನಿಂತವರು ಯಾಕ ನಮಗೇನೂ ಹೇಳವಲ್ಲರು? ಇದರ ಬಗ್ಗೆ ಸಹ ಚರ್ಚೆ ಆಗಬೇಕಾಗೇದ.

ಇನ್ನು ಬೆಳೆ ವಿಮೆ, ಕೃಷಿ ವಿಮೆ ಅಥವಾ ಪೀಕು ವಿಮೆ. ಬೆಳೆ ವಿಮೆ ಅಂತಿದ್ದದ್ದನ್ನ ಕೇಂದ್ರದ ಅಧಿಕಾರಿಗಳು ಕೃಷಿ ವಿಮೆ ಅಂತ ಮಾಡ್ಯಾರ. ಯಾಕೋ ಗೊತ್ತಿಲ್ಲ. ಹಂಗ ಜನತಾ ಜನಾ ಆರ್ ದನಾ ರಿಗೆ ಗೊತ್ತಾಗದಂಥಾವು ಈ ಸರಕಾರದಾಗ ಭಾಳ ಅವ. ಹೋಗಲಿ ಬಿಡರಿ.

ಖರೆ ಅಂದರೆ ಅದು ಪೀಕು ವಿಮೆ. ಅಂದರ ರೈತರ ಹತ್ತರ ರೊಕ್ಕ ಪೀಕಿ ಆಮ್ಯಾಲೆ ಕೇಳಾಕ ಹೋದರ ತೊಗೋರಿ ಈ ಪೀಪೀ, ಊದರಿ ಪುಂಗಿ ಅಂತ ಕೊಡತಾರಲ್ಲಾ ಅದಕ್ಕ.

ರೈತರ ಕಲ್ಯಾಣ ಆಗಬೇಕು ಅಂತ ಮಾಡಿದ ಈ ಸಂಸ್ಥಾ ರೈತರನ್ನು ಬಿಟ್ಟು ವಿಮಾ ಕಂಪನಿಗಳ ಕಲ್ಯಾಣ ಕ್ಕ ನಿಂತು ಬಿಟ್ಟದ್ದು ಯಾಕ?

ಮೊದಲನೇದಾಗಿ ನೂರರಾಗ ಬರೇ ಮೂವತ್ತು ಮಂದಿ ಅಷ್ಟ ವಿಮಾದಾಗ ಬರತಾರ. ಅದೂ ಅವರು ಶೇಕಡಾ ಒಂದು ರೊಕ್ಕ ಕೊಟ್ಟಿದ್ದರ. ಇಲ್ಲಾ ಸಾಲಾ ತೊಗೊಂಡಿದ್ದರ. ಇನ್ನ ಅದರ ಪರಿಹಾರ ಅವರ ನಷ್ಟ ಭರ್ತಿಗೆ ಸಾಕಾಗಂಗಿಲ್ಲ. ಮುಂದಿನ ಪೀಕಿನ ಖರ್ಚು ಕಳಿಲಿಕ್ಕೆ ಅವರಿಗೆ ಸಾಕಾಗತದ ಅಷ್ಟ. ವಿಮಾ ಕಂಪನಿಗಳು ನೂರು ರೂಪಾಯಿ ರೈತರು ಹಾಗೂ ಸರಕಾರದ ಕಡೆ ಇಸಗೊಂಡು 73 ರೂಪಾಯಿ ರೈತರಿಗೆ ಕೊಟ್ಟಾವು. ಅತ್ಯಂತ ಘೋರ ಬರಗಾಲ, ಪ್ರವಾಹದಾಗ ಸಹ ಅವರು ಕೊಡೋ ಮೊತ್ತ ಹೆಚ್ಚಾಗಿಲ್ಲ. ಇನ್ನ ನಮ್ಮ ಸರಕಾರ ಕಣ್ಣೀರಿನ್ಯಾಗ ಕೈ ತೊಳಕೊಂಡು ಗೋವಾಕ್ಕ ದುಡೀಲಿಕ್ಕೆ ಹೊಂಟಿರೋ ನಮ್ಮ ಉತ್ತರ ಕರ್ನಾಟಕದವರಿಗೆ ಅವರ ಬೆಳೆ ನಷ್ಟ ಪರಿಹಾರ ಮಾಡದೇ ಕಂಪನಿಗಳಿಗೆ ಹೇಳಿದರ ಯಾರನ್ನು ಅನ್ನೋಣು, ಯಾರನ್ನ ಬಿಡೋಣು?

ನೀರಾವರಿಯ ಬಗ್ಗೆ ಹೇಳಿದಷ್ಟೂ ಉಳೀತದ. ಅರವತ್ತರ ದಶಕದಾಗ ಇರೋ ಸಂಪನ್ಮೂಲ ಎಲ್ಲಾ ಡ್ಯಾಮುಗಳಿಗೆ ಹಾಕ್ರಿ. ಒಂದು ಸತೆ ನೀರಾವರಿ ಬಂತೂ ಅಂದರ ರೈತರು ಸುಬಧ್ರರಾಗತಾರ, ನಾಡು ಸುಭಿಕ್ಷ ಆಗತದ, ಬಡತನ ಹೋಗಿರತದ, ನಮ್ಮ ಆದಾಯನೂ ಹೆಚ್ಚು ಆಗತದ, ಇದ್ದ ಸಂಪನ್ಮೂಲ ಬ್ಯಾರೆ ಕಡೆ ಹಾಕಬಹುದು, ಅಂತ ನಮ್ಮ ದೇಶದ ಆರ್ಥಿಕ ತಜ್ಞರು ಹಾಗೂ ಪಂಚವಾರ್ಷಿಕ ಯೋಜನೆಗಳ ಕರ್ತಾರರು ನಿರ್ಧಾರ ಮಾಡಿದರಂತ. ಅದಕ್ಕ ಇತರ ಮೂಲಸೌಕರ್ಯಗಳಿಗಿಂತ ನೀರಾವರಿಗೆ ಹೆಚ್ಚಿನ ಬಜೆಟ್ಟಿನ ಬೆಂಬಲ ಸಿಗ್ತು. ಲಗೂ ನಿರ್ಣಯ ತಗೋಳೋ ಅನುಕೂಲ ಇರಲಿ ಅಂತ ಹೇಳಿ ನೀರಾವರಿ ಇಲಾಖೆ ವಿಕೇಂದ್ರೀಕರಣ ಆಗಲಿಲ್ಲ. ಆದರ 50 ವರ್ಷಗಳ ಅಂಧಾದುಂದಿ ಖರ್ಚಿನ ನಂತರ ಏನಾಗೇದ? ನೀರಾವರಿ ಪ್ರದೇಶ ಕೇವಲ 10 ಶೇಕಡಾ ಹೆಚ್ಚಾಗೇದ. ದೊಡ್ಡ ನೀರಾವರಿ ಯೋಜನೆಗಳಿಂದ ಮುಳುಗಡೆ, ಪ್ರವಾಹ ಮುಂತಾದ ಸಮಸ್ಸೆಗಳು ಹೆಚ್ಚಾಗ್ಯಾವು. ಬಡವರ ಬಸಿದ ಸುಂಕದಿಂದ ಕಟ್ಟಿಡ ಡ್ಯಾಮಿನ್ಯಾಗ ಹೂಳು ಹಾಗೂ ಸ್ಥಳೀಯ ರಾಜಕಾರಣಿ ರಾಜ್ಯ- ರಾಷ್ಟ್ರಮಟ್ಟಕ್ಕೆ ಬೆಳೆದ ರಹಸ್ಯದ ಧೂಳು ಮಾತ್ರ ತುಂಬೇದ. ರೈತರು ಅಭದ್ರರಾಗಿ, ನಾಡು ದುರ್ಭಿಕ್ಷ ವಾಗೇ ಉಳಿದದ.

ಸಾವಿರಾರು ಎಕರೆ ಮುಳುಗಿಸಿ ನೂರಾರು ಎಕರೆಗೆ ನೀರು ಹರಿಸುವ ದೊಡ್ಡ ಯೋಜನೆಗಳ ಮೇಲೆ ಕಣ್ಣು ಹರಿಸದೇ ಜಪಾನು ದೇಶದಂಗ ಕಮ್ಮೀ ಖರ್ಚಿನ ಸಣ್ಣಸಣ್ಣ ಯೋಜನೆಗಳನ್ನ, ಸ್ಥಳೀಯ ರೈತರ ಮೆಹರಬಾನಿಕೆಯೊಳಗ ನೀಟಾಗಿ ಮಾಡಿದ್ದರ ಹಳ್ಳೀ ಆರ್ಥಿಕತೆ ಕುಂಡದಾಗ ಹೂಬೆಳೆಸಿದಂಗ ನೀಟಾಗಿ ಇರ್ತಿತ್ತು. ಮರಿ ಪುಢಾರಿಗಳು ತಿಮಿಂಗಿಲುಗಳಾಗುವ ಸಾಧ್ಯತೆ ಕಮ್ಮಿ ಇರ್ತಿತ್ತು. ಆ ಅವಕಾಶ ಕಳಕೊಂಡೇವಿ ಅನ್ನಸಂಗಿಲ್ಲೇನು, ಮನೋಲ್ಲಾಸಿನಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...