Homeಮುಖಪುಟʼಯಡಿಯೂರಪ್ಪ ಯಾವ ಹೋರಾಟ ಮಾಡಿದ್ದಾರೆ?ʼ: ಸಂದರ್ಶನದಲ್ಲಿ ಕಾಗೋಡು ತಿಮ್ಮಪ್ಪ

ʼಯಡಿಯೂರಪ್ಪ ಯಾವ ಹೋರಾಟ ಮಾಡಿದ್ದಾರೆ?ʼ: ಸಂದರ್ಶನದಲ್ಲಿ ಕಾಗೋಡು ತಿಮ್ಮಪ್ಪ

ರೈತರ ಮನೆ ಬಾಗಿಲಿಗೆ ಬಂದು ದವಸಧಾನ್ಯ ಖರೀದಿ ಮಾಡುವುದರಿಂದ ಯಾವ ರೀತಿ ರೈತರಿಗೆ ಲಾಭವಾಗುತ್ತದೆ? ರೈತರಿಗೆ ಲಾಭ ಮಾಡಿಕೊಡುವ ದೃಷ್ಟಿ ಇದ್ದರೆ ಎ.ಪಿ.ಎಂ.ಸಿ.ಗಳ ಶಾಖೆಗಳನ್ನು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾಡಲಿ.

- Advertisement -
- Advertisement -

ಈಗ ವಿವಾದಕ್ಕೆ ಗುರಿಯಾಗಿರುವ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯ ಮೂಲ ಕಾಯ್ದೆಗೆ ಒಂದು ದೊಡ್ಡ ಇತಿಹಾಸವೇ ಇದೆ. ಗೇಣಿದಾರರ ಪರವಾಗಿ ಆರಂಭವಾದ ಹೋರಾಟವು ನಂತರದ ದಿನಗಳಲ್ಲಿ ರೈತರ ಭೂಮಿಯು ಉಳ್ಳವರ ಪಾಲಾಗದಂತೆ ತಡೆಯುವ ಕಾಯ್ದೆಯವರೆಗೆ ವಿವಿಧ ಘಟ್ಟಗಳಲ್ಲಿ ಹಾದು ಬಂದಿತು. ಗೇಣಿದಾರರ ಪರವಾದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸಾಗರದ ಕಾಗೋಡು ತಿಮ್ಮಪ್ಪನವರು ನಂತರ ಕಾಯ್ದೆಯು ಜಾರಿಗೆ ಬರುವ ಹೊತ್ತಿಗೆ ಶಾಸಕರಾಗಿದ್ದರು. ಹಾಗಾಗಿ ಕಾಯ್ದೆ ತಿದ್ದುಪಡಿಯಾಗುತ್ತಿರುವ ಹೊತ್ತಿನಲ್ಲಿ ಅವರನ್ನೇ ಮಾತಾಡಿಸುವುದು ಸೂಕ್ತವಾಗಿದ್ದುದರಿಂದ, ಸಾಗರದ ಜನಪರ ಹೋರಾಟಗಾರ, ಪತ್ರಕರ್ತ ಕಬಸೆ ಅಶೋಕ ಮೂರ್ತಿಯವರು ನ್ಯಾಯಪಥಕ್ಕಾಗಿ ಕಾಗೋಡು ತಿಮ್ಮಪ್ಪನವರನ್ನು ಸಂದರ್ಶಿಸಿದ್ದಾರೆ.

ಪ್ರಶ್ನೆ: ಭೂ ಸುಧಾರಣಾ ಕಾಯ್ದೆಗೆ ಈಗಿನ ಸರ್ಕಾರ ತರಲಿರುವ ತಿದ್ದುಪಡಿ ಸಣ್ಣ ತಿದ್ದುಪಡಿಯೇ ಅಥವಾ ಭೂ ಸುಧಾರಣಾ ಕಾನೂನನ್ನೇ ಕಿತ್ತು ಹಾಕುವ ಪ್ರಮಾಣದ್ದಾ?

ಉ. ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಯಾವುದೇ ಮಸೂದೆ ಮಂಡಿಸಿಲ್ಲ. ಆದರೂ ಇವರ ಯೋಚನೆ ಶ್ರೀಮಂತರು, ವ್ಯಾಪಾರಸ್ಥರು ಹಣವಂತರಿಗೆ ಲಾಭಮಾಡಿಕೊಡುವ ಉದ್ದೇಶದಿಂದ ಕೂಡಿದೆ.

ಪ್ರಶ್ನೆ: ನಾವು ಬದಲಾವಣೆಗೆ ಹೊಂದಿಕೊಳ್ಳಬೇಕು, ವಿರೋಧಕ್ಕೆ ವಿರೋಧ ಮಾಡಬಾರದು ಅಂತ ಈಗಿನ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರಲ್ಲ ಇದರ ಕುರಿತು ನಿಮ್ಮ ಅನಿಸಿಕೆ?

ಉ. ದೇವರಾಜ ಅರಸು ಕಾಲದಲ್ಲಿ ತಂದ ತಿದ್ದುಪಡಿಯಿಂದ ಗೇಣಿ ರೈತರಿಗೆ ಶೇ.100 ಅನುಕೂಲ ಆಗಿತ್ತು. ಹಿಡುವಳಿ ದೃಷ್ಟಿಯಿಂದ ಸಮಾಜವಾದಿಗಳ ಆಲೋಚನೆ ಈಡೇರಿಲ್ಲ. ಒಬ್ಬರಿಗೆ 50 ಎಕರೆ ಮಿತಿ ಎಂದು ಯೋಚಿಸಿ ಒಂದು ಕುಟುಂಬದಲ್ಲಿ 3 ಜನ ಇದ್ದರೆ 150 ಎಕರೆ ಜಮೀನು ಬರುತ್ತಿತ್ತು. ಅದು ಸರಿಯಲ್ಲವೆಂದು ಆ ಸಮಿತಿಯಲ್ಲಿದ್ದ ನಾನೂ ಸೇರಿದಂತೆ ಎಲ್ಲರೂ ವಿರೋಧಿಸಿದ್ದೆವು. ಹಿಡುವಳಿ ದೃಷ್ಟಿಯಿಂದ ಅರಸುರವರು ನಮ್ಮ ಸಲಹೆ ಒಪ್ಪಲಿಲ್ಲ. ಆದರೆ ಗೇಣಿ ರೈತರ ದೃಷ್ಟಿಯಿಂದ ನಮ್ಮ ಸಲಹೆ ಒಪ್ಪಿದ್ದರು. ಈಗಿನ ಸರ್ಕಾರದ ಉದ್ದೇಶ ಗೊತ್ತಾಗಿಲ್ಲ. ಮೇಲ್ನೋಟಕ್ಕೆ ಕಂಡುಬರುವುದೇನೆಂದರೇ, ಬಂಡವಾಳಶಾಹಿಗಳಿಗೆ ಹಣವಂತರಿಗೆ, ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುವ ಉದ್ದೇಶ ಕಂಡುಬರುತ್ತಿದೆ. ಸರ್ಕಾರ ತನ್ನ ನಿರ್ದಿಷ್ಟ ಉದ್ದೇಶ ಖಚಿತಪಡಿಸುವವರೆಗೆ ವಿರೋಧಿಸುವುದು ಕಷ್ಟ. ಈ ಕಾನೂನಿಗೆ ತಿದ್ದುಪಡಿತರಲು ಹೊರಟಿರುವವರು ಗೇಣಿಶಾಸನ ಜಾರಿಗೆ ಬರುವ ಸಂದರ್ಭದಲ್ಲಿ ಗೇಣಿ ಶಾಸನ ಜಾರಿಗೆ ಬರುವಾಗ ಯಾವುದೇ ಸಲಹೆ ಸಹಕಾರ ನೀಡಿರಲಿಲ್ಲ. ಆಗ ಇವರುಗಳು ಗೇಣಿದಾರರ ವಿರೋಧಿಯಾಗಿದ್ದರು.

ಪ್ರಶ್ನೆ: ಈ ಕಾಯ್ದೆ ಬಂದು ಮೂರುವರೆ ದಶಕಕ್ಕೂ ಹೆಚ್ಚು ಕಾಲವಾಗಿದೆ. ಹಾಗಾದರೆ ಏನೂ ಬದಲಾವಣೆ ಬೇಕಿರಲಿಲ್ಲವಾ?

ಉ. ಭೂಸುಧಾರಣೆ ಕಾನೂನು ಜಾರಿಗೆ ಬಂದಿದ್ದರಿಂದ ಗೇಣಿದಾರರಿಗೆ ಭೂಮಿ ಸಿಕ್ಕಿದೆ. ಹತ್ತಾರು ವರ್ಷಗಳಿಂದ ಗೇಣಿದಾರರಾಗಿದ್ದವರು ಭೂ ಮಾಲೀಕರಾಗಿದ್ದಾರೆ. ಆರ್ಥಿಕವಾಗಿ ಸಬಲರಾಗಿ ಸ್ವತಂತ್ರರಾಗಿ ಬದುಕು ಕಟ್ಟಿಕೊಂಡಿದ್ದಾರೆ.

ಪ್ರಶ್ನೆ: ದಕ್ಷಿಣ ಭಾರತದ ಉಳಿದ ರಾಜ್ಯಗಳು ಸೇರಿದಂತೆ ಹಲವಾರು ಕಡೆ ಇರದೇ ಇದ್ದ ನಿರ್ಬಂಧಗಳನ್ನು ಕರ್ನಾಟಕದಲ್ಲಿ ಹಾಕಲಾಗಿತ್ತು; ಅದನ್ನಷ್ಟೇ ತೆಗೆದಿದೆ ಎಂದು ಹೇಳುತ್ತಾರೆ. ಅದರ ಬಗ್ಗೆ ನಿಮ್ಮ ಅನಿಸಿಕೆ ಏನು?

ಉ. ವಾಸ್ತವವಾಗಿ ಕರ್ನಾಟಕದಲ್ಲಿ ಬಂದಷ್ಟು ಪರಿಣಾಮಕಾರಿಯಾಗಿ ಭೂ ಸುಧಾರಣಾ ಕಾನೂನು ಭಾರತದ ಯಾವ ರಾಜ್ಯದಲ್ಲಿಯೂ ಬಂದಿಲ್ಲ; ಇವರಿಗೆ ಸುಧಾರಣೆ ತರಬೇಕೆಂದು ಅನ್ನಿಸಿದ್ದರೆ, ಈಗ ಅತ್ಯಧಿಕ ಭೂಮಿ ಹೊಂದಿದವರಿಂದ ಭೂಮಿಯನ್ನು ಕಿತ್ತುಕೊಂಡು ಭೂ ರಹಿತರಿಗೆ ಹಂಚುವ ಕೆಲಸ ಮಾಡಬೇಕಿತ್ತು.

ಪ್ರಶ್ನೆ: ನಾವು ತಿದ್ದುಪಡಿ ಮಾಡದಿದ್ದರೂ ಎಸಿ.ಗಳಿಗೆ ದುಡ್ಡುಕೊಟ್ಟು ಭೂಮಿ ಕೊಂಡುಕೊಳ್ಳುವುದು ನಡೆಯುತ್ತಲೇ ಇತ್ತು. ಅದನ್ನು ಈಗ ಕಾನೂನು ಬದ್ಧಗೊಳಿಸಿದ್ದೇವೆ ಎಂಬದು ಸರ್ಕಾರದ ಇನ್ನೊಂದು ಸಮಜಾಯಿಷಿ. ಇದಕ್ಕೇನು ಹೇಳುತ್ತೀರಿ?

ಉ. ಭೂ ನ್ಯಾಯ ಮಂಡಳಿಯಲ್ಲಿ ಎ.ಸಿ.ಯವರು ಅಧ್ಯಕ್ಷರಾಗಿರುತ್ತಾರೆ. ಶಾಸಕರು ಆ ಸಮಿತಿಯಲ್ಲಿರುತ್ತಾರೆ. ಅಂತಹಾ ಅವ್ಯವಹಾರ ಕಂಡು ಬಂದರೆ ಸರಿಯಾದ ತನಿಖೆ ನಡೆಸಿ ಅಂತಹವರಿಂದ ಭೂಮಿ ಕಿತ್ತುಕೊಳ್ಳುವ ಕೆಲಸ ಮಾಡಲಿ.

ಪ್ರಶ್ನೆ: ಎ.ಪಿ.ಎಂ.ಸಿ. ಕಾಯ್ದೆಗೆ ತಂದ ತಿದ್ದುಪಡಿಯು ಗುತ್ತಿಗೆ ಕೃಷಿಗೆ ಅನುಕೂಲ ಮಾಡಿಕೊಡುವ ತಿದ್ದುಪಡಿಯಾಗಿದೆಯೆಂದು ಹೇಳಲಾಗುತ್ತದೆ. ಇವೆಲ್ಲವೂ ಭಾರತದ/ ಕರ್ನಾಟಕದ ಕೃಷಿ ಕ್ಷೇತ್ರ ಉಂಟು ಮಾಡುವ ಪರಿಣಾಮಗಳೇನು?

ಉ. ರೈತರ ಮನೆ ಬಾಗಿಲಿಗೆ ಬಂದು ದವಸಧಾನ್ಯ ಖರೀದಿ ಮಾಡುವುದರಿಂದ ಯಾವ ರೀತಿ ರೈತರಿಗೆ ಲಾಭವಾಗುತ್ತದೆ? ರೈತರಿಗೆ ಲಾಭ ಮಾಡಿಕೊಡುವ ದೃಷ್ಟಿ ಇದ್ದರೆ ಎ.ಪಿ.ಎಂ.ಸಿ.ಗಳ ಶಾಖೆಗಳನ್ನು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾಡಲಿ. ಭೂ ಹಿಡುವಳಿ ಹೊಂದಿದವರು ಹೆಚ್ಚಿನ ಹಣದಾಸೆಗಾಗಿ ಭೂಮಿ ಮಾರಿಕೊಂಡು ಭೂ ರಹಿತರಾಗುತ್ತಾರೆ, ಹಣವಂತರು, ಕೈಗಾರಿಕೋದ್ಯಮಿಗಳ ಕೈಗೆ ಕೃಷಿ ಭೂಮಿ ಹೋಗುತ್ತದೆ, ಸಮಾಜದಲ್ಲಿ ಮತ್ತೆ ಅಸಮಾನತೆ ಮೂಡುತ್ತದೆ.

ಪ್ರಶ್ನೆ: ಯಡಿಯೂರಪ್ಪನವರೂ ರೈತರ ಪರ ಕೆಲವು ಹೋರಾಟಗಳನ್ನು ನಡೆಸಿದವರು, ಇದೇ ಜಿಲ್ಲೆಯವರು. ಅವರೇಕೆ ಇಂತಹ ತೀರ್ಮಾನಗಳಿಗೆ ಮುಂದಾಗುತ್ತಿದ್ದಾರೆ?

ಉ. ಯಡಿಯೂರಪ್ಪನವರು ಯಾವ ಹೋರಾಟ ಮಾಡಿದ್ದಾರೆ?

ಪ್ರಶ್ನೆ: ಕಾಂಗ್ರೆಸ್ ಪಕ್ಷದ ನಾಯಕರು ವಿರೋಧ ಮಾಡಿದ್ದಾರೆ. ಆದರೆ ಈ ರೀತಿ ಹೇಳಿಕೆಗಳನ್ನಷ್ಟೇ ನೀಡಿ ಸುಮ್ಮನಾಗಿ ಬಿಟ್ಟರೆ ಸಾಕೇ? ಕಾಂಗ್ರೆಸ್ ಇನ್ನೂ ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಲ್ಲವೇ?

ಉ. ಡಿ.ಕೆ.ಶಿವಕುಮಾರ್‌ರವರು ಈಗಷ್ಟೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷ ಸಭೆ ಸೇರಿ ಸೂಕ್ತ ತೀರ್ಮಾನ ಕೈಗೊಂಡು ಭೂ ಸುಧಾರಣೆ ತಿದ್ದುಪಡಿಯ ಬಗ್ಗೆ ಪರಿಣಾಮಕಾರಿ ಹೋರಾಟ ಮಾಡುತ್ತದೆ.

ಪ್ರಶ್ನೆ: ಗೇಣಿದಾರರ ಪರವಾಗಿ ಹೋರಾಟ ಮಾಡಿದ ನೀವು ಈ ಸಂದರ್ಭದಲ್ಲಿ ಏನು ಮಾಡುತ್ತೀರಿ ಸುಮ್ಮನಿರುವುದು ಸರಿಯೇ?

ಭೂ ಸುಧಾರಣಾ ತಿದ್ದುಪಡಿಯ ಬಗ್ಗೆ ನನ್ನ ವಿರೋಧ ಇದ್ದೇ ಇದೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಪ್ರಶ್ನೆ: ಭೂಮಿಯನ್ನು ಪಡೆದು ಉಳುಮೆ ಮಾಡಬೇಕೆಂದು ಆಸಕ್ತಿ ಹೊಂದಿದವರಿಗೆ ಈ ಕಾನೂನಿನಿಂದ ಅನುಕೂಲವಾಗುತ್ತದಲ್ಲವೇ?

ಉ. ಭೂಮಿ ಹೊಂದಿ ಕೃಷಿ ಮಾಡಬೇಕೆಂದು ಆಸಕ್ತಿ ಹೊಂದಿದವರಿಗೆ ಭೂಮಿ ನೀಡುವ ಅಭಿಲಾಷೆ ಸರ್ಕಾರಕ್ಕಿದ್ದರೆ ಭೂ ತಿದ್ದುಪಡಿಯನ್ನು ಮಾಡುವ ಅಗತ್ಯವಿಲ್ಲ. ಸರ್ಕಾರದ ಹತ್ತಿರ ಇರುವ ಭೂಮಿಯನ್ನು ಅಂತಹವರಿಗೆ ನೀಡಬಹುದಲ್ಲ.

ಸಂದರ್ಶಕರು: ಕಬಸೆ ಅಶೋಕಮೂರ್ತಿ ಮತ್ತು ನಾಗರಾಜ


ಇದನ್ನೂ ಓದಿ: ಹಳೆ ಕಾಂಗ್ರೆಸ್ ಸಂಸ್ಕೃತಿ ಮತ್ತು ದುಡ್ಡು ಎಂಬ ಡಿಕೆಶಿ ಮಾದರಿ ವರ್ಕ್‌ಔಟ್ ಆಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...