Homeಮುಖಪುಟʼಯಡಿಯೂರಪ್ಪ ಯಾವ ಹೋರಾಟ ಮಾಡಿದ್ದಾರೆ?ʼ: ಸಂದರ್ಶನದಲ್ಲಿ ಕಾಗೋಡು ತಿಮ್ಮಪ್ಪ

ʼಯಡಿಯೂರಪ್ಪ ಯಾವ ಹೋರಾಟ ಮಾಡಿದ್ದಾರೆ?ʼ: ಸಂದರ್ಶನದಲ್ಲಿ ಕಾಗೋಡು ತಿಮ್ಮಪ್ಪ

ರೈತರ ಮನೆ ಬಾಗಿಲಿಗೆ ಬಂದು ದವಸಧಾನ್ಯ ಖರೀದಿ ಮಾಡುವುದರಿಂದ ಯಾವ ರೀತಿ ರೈತರಿಗೆ ಲಾಭವಾಗುತ್ತದೆ? ರೈತರಿಗೆ ಲಾಭ ಮಾಡಿಕೊಡುವ ದೃಷ್ಟಿ ಇದ್ದರೆ ಎ.ಪಿ.ಎಂ.ಸಿ.ಗಳ ಶಾಖೆಗಳನ್ನು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾಡಲಿ.

- Advertisement -
- Advertisement -

ಈಗ ವಿವಾದಕ್ಕೆ ಗುರಿಯಾಗಿರುವ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯ ಮೂಲ ಕಾಯ್ದೆಗೆ ಒಂದು ದೊಡ್ಡ ಇತಿಹಾಸವೇ ಇದೆ. ಗೇಣಿದಾರರ ಪರವಾಗಿ ಆರಂಭವಾದ ಹೋರಾಟವು ನಂತರದ ದಿನಗಳಲ್ಲಿ ರೈತರ ಭೂಮಿಯು ಉಳ್ಳವರ ಪಾಲಾಗದಂತೆ ತಡೆಯುವ ಕಾಯ್ದೆಯವರೆಗೆ ವಿವಿಧ ಘಟ್ಟಗಳಲ್ಲಿ ಹಾದು ಬಂದಿತು. ಗೇಣಿದಾರರ ಪರವಾದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸಾಗರದ ಕಾಗೋಡು ತಿಮ್ಮಪ್ಪನವರು ನಂತರ ಕಾಯ್ದೆಯು ಜಾರಿಗೆ ಬರುವ ಹೊತ್ತಿಗೆ ಶಾಸಕರಾಗಿದ್ದರು. ಹಾಗಾಗಿ ಕಾಯ್ದೆ ತಿದ್ದುಪಡಿಯಾಗುತ್ತಿರುವ ಹೊತ್ತಿನಲ್ಲಿ ಅವರನ್ನೇ ಮಾತಾಡಿಸುವುದು ಸೂಕ್ತವಾಗಿದ್ದುದರಿಂದ, ಸಾಗರದ ಜನಪರ ಹೋರಾಟಗಾರ, ಪತ್ರಕರ್ತ ಕಬಸೆ ಅಶೋಕ ಮೂರ್ತಿಯವರು ನ್ಯಾಯಪಥಕ್ಕಾಗಿ ಕಾಗೋಡು ತಿಮ್ಮಪ್ಪನವರನ್ನು ಸಂದರ್ಶಿಸಿದ್ದಾರೆ.

ಪ್ರಶ್ನೆ: ಭೂ ಸುಧಾರಣಾ ಕಾಯ್ದೆಗೆ ಈಗಿನ ಸರ್ಕಾರ ತರಲಿರುವ ತಿದ್ದುಪಡಿ ಸಣ್ಣ ತಿದ್ದುಪಡಿಯೇ ಅಥವಾ ಭೂ ಸುಧಾರಣಾ ಕಾನೂನನ್ನೇ ಕಿತ್ತು ಹಾಕುವ ಪ್ರಮಾಣದ್ದಾ?

ಉ. ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಯಾವುದೇ ಮಸೂದೆ ಮಂಡಿಸಿಲ್ಲ. ಆದರೂ ಇವರ ಯೋಚನೆ ಶ್ರೀಮಂತರು, ವ್ಯಾಪಾರಸ್ಥರು ಹಣವಂತರಿಗೆ ಲಾಭಮಾಡಿಕೊಡುವ ಉದ್ದೇಶದಿಂದ ಕೂಡಿದೆ.

ಪ್ರಶ್ನೆ: ನಾವು ಬದಲಾವಣೆಗೆ ಹೊಂದಿಕೊಳ್ಳಬೇಕು, ವಿರೋಧಕ್ಕೆ ವಿರೋಧ ಮಾಡಬಾರದು ಅಂತ ಈಗಿನ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರಲ್ಲ ಇದರ ಕುರಿತು ನಿಮ್ಮ ಅನಿಸಿಕೆ?

ಉ. ದೇವರಾಜ ಅರಸು ಕಾಲದಲ್ಲಿ ತಂದ ತಿದ್ದುಪಡಿಯಿಂದ ಗೇಣಿ ರೈತರಿಗೆ ಶೇ.100 ಅನುಕೂಲ ಆಗಿತ್ತು. ಹಿಡುವಳಿ ದೃಷ್ಟಿಯಿಂದ ಸಮಾಜವಾದಿಗಳ ಆಲೋಚನೆ ಈಡೇರಿಲ್ಲ. ಒಬ್ಬರಿಗೆ 50 ಎಕರೆ ಮಿತಿ ಎಂದು ಯೋಚಿಸಿ ಒಂದು ಕುಟುಂಬದಲ್ಲಿ 3 ಜನ ಇದ್ದರೆ 150 ಎಕರೆ ಜಮೀನು ಬರುತ್ತಿತ್ತು. ಅದು ಸರಿಯಲ್ಲವೆಂದು ಆ ಸಮಿತಿಯಲ್ಲಿದ್ದ ನಾನೂ ಸೇರಿದಂತೆ ಎಲ್ಲರೂ ವಿರೋಧಿಸಿದ್ದೆವು. ಹಿಡುವಳಿ ದೃಷ್ಟಿಯಿಂದ ಅರಸುರವರು ನಮ್ಮ ಸಲಹೆ ಒಪ್ಪಲಿಲ್ಲ. ಆದರೆ ಗೇಣಿ ರೈತರ ದೃಷ್ಟಿಯಿಂದ ನಮ್ಮ ಸಲಹೆ ಒಪ್ಪಿದ್ದರು. ಈಗಿನ ಸರ್ಕಾರದ ಉದ್ದೇಶ ಗೊತ್ತಾಗಿಲ್ಲ. ಮೇಲ್ನೋಟಕ್ಕೆ ಕಂಡುಬರುವುದೇನೆಂದರೇ, ಬಂಡವಾಳಶಾಹಿಗಳಿಗೆ ಹಣವಂತರಿಗೆ, ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುವ ಉದ್ದೇಶ ಕಂಡುಬರುತ್ತಿದೆ. ಸರ್ಕಾರ ತನ್ನ ನಿರ್ದಿಷ್ಟ ಉದ್ದೇಶ ಖಚಿತಪಡಿಸುವವರೆಗೆ ವಿರೋಧಿಸುವುದು ಕಷ್ಟ. ಈ ಕಾನೂನಿಗೆ ತಿದ್ದುಪಡಿತರಲು ಹೊರಟಿರುವವರು ಗೇಣಿಶಾಸನ ಜಾರಿಗೆ ಬರುವ ಸಂದರ್ಭದಲ್ಲಿ ಗೇಣಿ ಶಾಸನ ಜಾರಿಗೆ ಬರುವಾಗ ಯಾವುದೇ ಸಲಹೆ ಸಹಕಾರ ನೀಡಿರಲಿಲ್ಲ. ಆಗ ಇವರುಗಳು ಗೇಣಿದಾರರ ವಿರೋಧಿಯಾಗಿದ್ದರು.

ಪ್ರಶ್ನೆ: ಈ ಕಾಯ್ದೆ ಬಂದು ಮೂರುವರೆ ದಶಕಕ್ಕೂ ಹೆಚ್ಚು ಕಾಲವಾಗಿದೆ. ಹಾಗಾದರೆ ಏನೂ ಬದಲಾವಣೆ ಬೇಕಿರಲಿಲ್ಲವಾ?

ಉ. ಭೂಸುಧಾರಣೆ ಕಾನೂನು ಜಾರಿಗೆ ಬಂದಿದ್ದರಿಂದ ಗೇಣಿದಾರರಿಗೆ ಭೂಮಿ ಸಿಕ್ಕಿದೆ. ಹತ್ತಾರು ವರ್ಷಗಳಿಂದ ಗೇಣಿದಾರರಾಗಿದ್ದವರು ಭೂ ಮಾಲೀಕರಾಗಿದ್ದಾರೆ. ಆರ್ಥಿಕವಾಗಿ ಸಬಲರಾಗಿ ಸ್ವತಂತ್ರರಾಗಿ ಬದುಕು ಕಟ್ಟಿಕೊಂಡಿದ್ದಾರೆ.

ಪ್ರಶ್ನೆ: ದಕ್ಷಿಣ ಭಾರತದ ಉಳಿದ ರಾಜ್ಯಗಳು ಸೇರಿದಂತೆ ಹಲವಾರು ಕಡೆ ಇರದೇ ಇದ್ದ ನಿರ್ಬಂಧಗಳನ್ನು ಕರ್ನಾಟಕದಲ್ಲಿ ಹಾಕಲಾಗಿತ್ತು; ಅದನ್ನಷ್ಟೇ ತೆಗೆದಿದೆ ಎಂದು ಹೇಳುತ್ತಾರೆ. ಅದರ ಬಗ್ಗೆ ನಿಮ್ಮ ಅನಿಸಿಕೆ ಏನು?

ಉ. ವಾಸ್ತವವಾಗಿ ಕರ್ನಾಟಕದಲ್ಲಿ ಬಂದಷ್ಟು ಪರಿಣಾಮಕಾರಿಯಾಗಿ ಭೂ ಸುಧಾರಣಾ ಕಾನೂನು ಭಾರತದ ಯಾವ ರಾಜ್ಯದಲ್ಲಿಯೂ ಬಂದಿಲ್ಲ; ಇವರಿಗೆ ಸುಧಾರಣೆ ತರಬೇಕೆಂದು ಅನ್ನಿಸಿದ್ದರೆ, ಈಗ ಅತ್ಯಧಿಕ ಭೂಮಿ ಹೊಂದಿದವರಿಂದ ಭೂಮಿಯನ್ನು ಕಿತ್ತುಕೊಂಡು ಭೂ ರಹಿತರಿಗೆ ಹಂಚುವ ಕೆಲಸ ಮಾಡಬೇಕಿತ್ತು.

ಪ್ರಶ್ನೆ: ನಾವು ತಿದ್ದುಪಡಿ ಮಾಡದಿದ್ದರೂ ಎಸಿ.ಗಳಿಗೆ ದುಡ್ಡುಕೊಟ್ಟು ಭೂಮಿ ಕೊಂಡುಕೊಳ್ಳುವುದು ನಡೆಯುತ್ತಲೇ ಇತ್ತು. ಅದನ್ನು ಈಗ ಕಾನೂನು ಬದ್ಧಗೊಳಿಸಿದ್ದೇವೆ ಎಂಬದು ಸರ್ಕಾರದ ಇನ್ನೊಂದು ಸಮಜಾಯಿಷಿ. ಇದಕ್ಕೇನು ಹೇಳುತ್ತೀರಿ?

ಉ. ಭೂ ನ್ಯಾಯ ಮಂಡಳಿಯಲ್ಲಿ ಎ.ಸಿ.ಯವರು ಅಧ್ಯಕ್ಷರಾಗಿರುತ್ತಾರೆ. ಶಾಸಕರು ಆ ಸಮಿತಿಯಲ್ಲಿರುತ್ತಾರೆ. ಅಂತಹಾ ಅವ್ಯವಹಾರ ಕಂಡು ಬಂದರೆ ಸರಿಯಾದ ತನಿಖೆ ನಡೆಸಿ ಅಂತಹವರಿಂದ ಭೂಮಿ ಕಿತ್ತುಕೊಳ್ಳುವ ಕೆಲಸ ಮಾಡಲಿ.

ಪ್ರಶ್ನೆ: ಎ.ಪಿ.ಎಂ.ಸಿ. ಕಾಯ್ದೆಗೆ ತಂದ ತಿದ್ದುಪಡಿಯು ಗುತ್ತಿಗೆ ಕೃಷಿಗೆ ಅನುಕೂಲ ಮಾಡಿಕೊಡುವ ತಿದ್ದುಪಡಿಯಾಗಿದೆಯೆಂದು ಹೇಳಲಾಗುತ್ತದೆ. ಇವೆಲ್ಲವೂ ಭಾರತದ/ ಕರ್ನಾಟಕದ ಕೃಷಿ ಕ್ಷೇತ್ರ ಉಂಟು ಮಾಡುವ ಪರಿಣಾಮಗಳೇನು?

ಉ. ರೈತರ ಮನೆ ಬಾಗಿಲಿಗೆ ಬಂದು ದವಸಧಾನ್ಯ ಖರೀದಿ ಮಾಡುವುದರಿಂದ ಯಾವ ರೀತಿ ರೈತರಿಗೆ ಲಾಭವಾಗುತ್ತದೆ? ರೈತರಿಗೆ ಲಾಭ ಮಾಡಿಕೊಡುವ ದೃಷ್ಟಿ ಇದ್ದರೆ ಎ.ಪಿ.ಎಂ.ಸಿ.ಗಳ ಶಾಖೆಗಳನ್ನು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾಡಲಿ. ಭೂ ಹಿಡುವಳಿ ಹೊಂದಿದವರು ಹೆಚ್ಚಿನ ಹಣದಾಸೆಗಾಗಿ ಭೂಮಿ ಮಾರಿಕೊಂಡು ಭೂ ರಹಿತರಾಗುತ್ತಾರೆ, ಹಣವಂತರು, ಕೈಗಾರಿಕೋದ್ಯಮಿಗಳ ಕೈಗೆ ಕೃಷಿ ಭೂಮಿ ಹೋಗುತ್ತದೆ, ಸಮಾಜದಲ್ಲಿ ಮತ್ತೆ ಅಸಮಾನತೆ ಮೂಡುತ್ತದೆ.

ಪ್ರಶ್ನೆ: ಯಡಿಯೂರಪ್ಪನವರೂ ರೈತರ ಪರ ಕೆಲವು ಹೋರಾಟಗಳನ್ನು ನಡೆಸಿದವರು, ಇದೇ ಜಿಲ್ಲೆಯವರು. ಅವರೇಕೆ ಇಂತಹ ತೀರ್ಮಾನಗಳಿಗೆ ಮುಂದಾಗುತ್ತಿದ್ದಾರೆ?

ಉ. ಯಡಿಯೂರಪ್ಪನವರು ಯಾವ ಹೋರಾಟ ಮಾಡಿದ್ದಾರೆ?

ಪ್ರಶ್ನೆ: ಕಾಂಗ್ರೆಸ್ ಪಕ್ಷದ ನಾಯಕರು ವಿರೋಧ ಮಾಡಿದ್ದಾರೆ. ಆದರೆ ಈ ರೀತಿ ಹೇಳಿಕೆಗಳನ್ನಷ್ಟೇ ನೀಡಿ ಸುಮ್ಮನಾಗಿ ಬಿಟ್ಟರೆ ಸಾಕೇ? ಕಾಂಗ್ರೆಸ್ ಇನ್ನೂ ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಲ್ಲವೇ?

ಉ. ಡಿ.ಕೆ.ಶಿವಕುಮಾರ್‌ರವರು ಈಗಷ್ಟೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷ ಸಭೆ ಸೇರಿ ಸೂಕ್ತ ತೀರ್ಮಾನ ಕೈಗೊಂಡು ಭೂ ಸುಧಾರಣೆ ತಿದ್ದುಪಡಿಯ ಬಗ್ಗೆ ಪರಿಣಾಮಕಾರಿ ಹೋರಾಟ ಮಾಡುತ್ತದೆ.

ಪ್ರಶ್ನೆ: ಗೇಣಿದಾರರ ಪರವಾಗಿ ಹೋರಾಟ ಮಾಡಿದ ನೀವು ಈ ಸಂದರ್ಭದಲ್ಲಿ ಏನು ಮಾಡುತ್ತೀರಿ ಸುಮ್ಮನಿರುವುದು ಸರಿಯೇ?

ಭೂ ಸುಧಾರಣಾ ತಿದ್ದುಪಡಿಯ ಬಗ್ಗೆ ನನ್ನ ವಿರೋಧ ಇದ್ದೇ ಇದೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಪ್ರಶ್ನೆ: ಭೂಮಿಯನ್ನು ಪಡೆದು ಉಳುಮೆ ಮಾಡಬೇಕೆಂದು ಆಸಕ್ತಿ ಹೊಂದಿದವರಿಗೆ ಈ ಕಾನೂನಿನಿಂದ ಅನುಕೂಲವಾಗುತ್ತದಲ್ಲವೇ?

ಉ. ಭೂಮಿ ಹೊಂದಿ ಕೃಷಿ ಮಾಡಬೇಕೆಂದು ಆಸಕ್ತಿ ಹೊಂದಿದವರಿಗೆ ಭೂಮಿ ನೀಡುವ ಅಭಿಲಾಷೆ ಸರ್ಕಾರಕ್ಕಿದ್ದರೆ ಭೂ ತಿದ್ದುಪಡಿಯನ್ನು ಮಾಡುವ ಅಗತ್ಯವಿಲ್ಲ. ಸರ್ಕಾರದ ಹತ್ತಿರ ಇರುವ ಭೂಮಿಯನ್ನು ಅಂತಹವರಿಗೆ ನೀಡಬಹುದಲ್ಲ.

ಸಂದರ್ಶಕರು: ಕಬಸೆ ಅಶೋಕಮೂರ್ತಿ ಮತ್ತು ನಾಗರಾಜ


ಇದನ್ನೂ ಓದಿ: ಹಳೆ ಕಾಂಗ್ರೆಸ್ ಸಂಸ್ಕೃತಿ ಮತ್ತು ದುಡ್ಡು ಎಂಬ ಡಿಕೆಶಿ ಮಾದರಿ ವರ್ಕ್‌ಔಟ್ ಆಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...