Homeಕರ್ನಾಟಕಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

- Advertisement -
- Advertisement -

“ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ… ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನಪ್ರಾಣ ಕುಟುಂಬವನ್ನು ಪಣಕಿಟ್ಟು ಸಂಸದನೊಬ್ಬ ನಡೆಸಿರುವ ಕಾಮಕೃತ್ಯ” ಎಂದು ಹೋರಾಟಗಾರ್ತಿ ರೂಪಾ ಹಾಸನ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಕೃತ್ಯವನ್ನು ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ ಮತ್ತೊಬ್ಬರಿಗೆ ಸಿಗುವಂತೆ ಮಾಡಿದ್ದು, ಹಾಗೂ ಚುನಾವಣಾ ದಾಳವಾಗಿ ಬಳಸಿಕೊಂಡು ಹಂಚಿದವರು, ಆ ವಿಡಿಯೋಗಳನ್ನು ಇಟ್ಟುಕೊಂಡು ಬೇಕಾದಂತೆ ಬಳಸಿಕೊಂಡವರು.. ಹೀಗೆ ಎಲ್ಲ ಹಂತಗಳನ್ನು ಖಂಡಿಸಬೇಕಿದೆ” ಎಂದರು.

“ಎಷ್ಟೆಲ್ಲ ಹಂತಗಳಲ್ಲಿ ವಿಡಿಯೋ ಹರಿಬಿಡಲಾಗ್ತಿದೆ ಅನ್ನೋದು ಇಲ್ಲಿನ ಹೋರಾಟಗಾರರು, ಜನತೆಗೆ ಗೊತ್ತಿದೆ. ಇಲ್ಲಿನ ಹೆಣ್ಣುಮಕ್ಕಳ ಸಮಾದಿ ಕಟ್ಟಲಾಗುತ್ತಿದ್ದು, ಹೆಣ್ಣುಮಕ್ಕಳ ಜರ್ಜರಿತರಾಗಿ ಸ್ಥಿತಿಯನ್ನು ನೋಡಿ ನೊಂದಿದ್ದೇವೆ. ಅತ್ಯಂತ ತಳಸಮುದಾಯದಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳನ್ನು ಪ್ರಜ್ವಲ್ ತನ್ನ ಕಾಮಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಹಾಗಾಗಿ, ನಿಮ್ಮೊಂದಿಗೆ ನಾವಿದ್ದೇವೆ, ನೊಂದ ಹೆಣ್ಣುಮಕ್ಕಳು ಧೈರ್ಯವಾಗಿ ಮನೆಯಿಂದ ಹೊರಬಂದು ಎಸ್ಐಟಿ ಮುಂದೆ ನಿಮ್ಮ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ

“ಪ್ರಕರಣ ಬೆಳಕಿಗೆ ಬಂದು ಐದು ವಾರಗಳಾದರು ಇನ್ನೂ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ರಾಜ್ಯ ಕೇಂದ್ರ ಸರ್ಕಾರಗಳು, ಪರಸ್ಪರ ಕೆಸರೆರಚಾಟ ನಡೆಸುತ್ತಿರು ರಾಜಕೀಯ ನಾಯಕರು ಅದನ್ನು ನಿಲ್ಲಿಸಿ ಇನ್ನಾದರೂ ಅದನ್ನೆಲ್ಲ ನಿಲ್ಲಿಸಿ. ತಕ್ಷಣ ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ. ಅಲ್ಲದೆ, ಇಂದಿಗೂ ಈ ಕ್ಷಣಕ್ಕೂ ವಿಡಿಯೋ ಹರಿಬಿಡುತ್ತಿರುವವರನ್ನು ಎಡೆಮುರಿಕಟ್ಟಿ, ಪ್ರಕರಣಕ್ಕೆ ಅಂತ್ಯ ಹಾಡಿ. ಇಲ್ಲದಿದ್ದರೆ ಸರ್ಕಾರಗಳ ಮೇಲೆ ನಂಬಿಕೆ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದರು.

“ನಿಮ್ಮ ರಾಜಕೀಯ ನಿಲ್ಲಿಸಿ, ಹೆಣ್ಣುಮಕ್ಕಳ ಸಮಾಧಿಯ ಮೇಲೆ ಭವ್ಯ ಬಂಗಲೆ ಕಟ್ಟುತ್ತಿರುವುದನ್ನು ನಿಲ್ಲಿಸಿ. ಸರ್ಕಾರಗಳು ಇನ್ನಾದರೂ ಜವಾಬ್ದಾರಿಯಿಂದ ವರ್ತಿಸದಿದ್ದರೆ ಅಂತಹ ಸರ್ಕಾರಗಳ ವಿರುದ್ಧ ಮತ್ತೊಂದು ರೀತಿಯ ಗಟ್ಟಿತನದ ಹೋರಾಟವನ್ನು ಕಟ್ಟಬೇಕಾಗುತ್ತದೆ” ಎಂದು ರೂಪಾ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...