Homeಕರ್ನಾಟಕಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

- Advertisement -
- Advertisement -

“ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ… ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನಪ್ರಾಣ ಕುಟುಂಬವನ್ನು ಪಣಕಿಟ್ಟು ಸಂಸದನೊಬ್ಬ ನಡೆಸಿರುವ ಕಾಮಕೃತ್ಯ” ಎಂದು ಹೋರಾಟಗಾರ್ತಿ ರೂಪಾ ಹಾಸನ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಕೃತ್ಯವನ್ನು ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ ಮತ್ತೊಬ್ಬರಿಗೆ ಸಿಗುವಂತೆ ಮಾಡಿದ್ದು, ಹಾಗೂ ಚುನಾವಣಾ ದಾಳವಾಗಿ ಬಳಸಿಕೊಂಡು ಹಂಚಿದವರು, ಆ ವಿಡಿಯೋಗಳನ್ನು ಇಟ್ಟುಕೊಂಡು ಬೇಕಾದಂತೆ ಬಳಸಿಕೊಂಡವರು.. ಹೀಗೆ ಎಲ್ಲ ಹಂತಗಳನ್ನು ಖಂಡಿಸಬೇಕಿದೆ” ಎಂದರು.

“ಎಷ್ಟೆಲ್ಲ ಹಂತಗಳಲ್ಲಿ ವಿಡಿಯೋ ಹರಿಬಿಡಲಾಗ್ತಿದೆ ಅನ್ನೋದು ಇಲ್ಲಿನ ಹೋರಾಟಗಾರರು, ಜನತೆಗೆ ಗೊತ್ತಿದೆ. ಇಲ್ಲಿನ ಹೆಣ್ಣುಮಕ್ಕಳ ಸಮಾದಿ ಕಟ್ಟಲಾಗುತ್ತಿದ್ದು, ಹೆಣ್ಣುಮಕ್ಕಳ ಜರ್ಜರಿತರಾಗಿ ಸ್ಥಿತಿಯನ್ನು ನೋಡಿ ನೊಂದಿದ್ದೇವೆ. ಅತ್ಯಂತ ತಳಸಮುದಾಯದಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳನ್ನು ಪ್ರಜ್ವಲ್ ತನ್ನ ಕಾಮಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಹಾಗಾಗಿ, ನಿಮ್ಮೊಂದಿಗೆ ನಾವಿದ್ದೇವೆ, ನೊಂದ ಹೆಣ್ಣುಮಕ್ಕಳು ಧೈರ್ಯವಾಗಿ ಮನೆಯಿಂದ ಹೊರಬಂದು ಎಸ್ಐಟಿ ಮುಂದೆ ನಿಮ್ಮ ದೂರು ದಾಖಲಿಸಿ” ಎಂದು ಕರೆ ನೀಡಿದರು.

ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ

“ಪ್ರಕರಣ ಬೆಳಕಿಗೆ ಬಂದು ಐದು ವಾರಗಳಾದರು ಇನ್ನೂ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ರಾಜ್ಯ ಕೇಂದ್ರ ಸರ್ಕಾರಗಳು, ಪರಸ್ಪರ ಕೆಸರೆರಚಾಟ ನಡೆಸುತ್ತಿರು ರಾಜಕೀಯ ನಾಯಕರು ಅದನ್ನು ನಿಲ್ಲಿಸಿ ಇನ್ನಾದರೂ ಅದನ್ನೆಲ್ಲ ನಿಲ್ಲಿಸಿ. ತಕ್ಷಣ ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ. ಅಲ್ಲದೆ, ಇಂದಿಗೂ ಈ ಕ್ಷಣಕ್ಕೂ ವಿಡಿಯೋ ಹರಿಬಿಡುತ್ತಿರುವವರನ್ನು ಎಡೆಮುರಿಕಟ್ಟಿ, ಪ್ರಕರಣಕ್ಕೆ ಅಂತ್ಯ ಹಾಡಿ. ಇಲ್ಲದಿದ್ದರೆ ಸರ್ಕಾರಗಳ ಮೇಲೆ ನಂಬಿಕೆ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದರು.

“ನಿಮ್ಮ ರಾಜಕೀಯ ನಿಲ್ಲಿಸಿ, ಹೆಣ್ಣುಮಕ್ಕಳ ಸಮಾಧಿಯ ಮೇಲೆ ಭವ್ಯ ಬಂಗಲೆ ಕಟ್ಟುತ್ತಿರುವುದನ್ನು ನಿಲ್ಲಿಸಿ. ಸರ್ಕಾರಗಳು ಇನ್ನಾದರೂ ಜವಾಬ್ದಾರಿಯಿಂದ ವರ್ತಿಸದಿದ್ದರೆ ಅಂತಹ ಸರ್ಕಾರಗಳ ವಿರುದ್ಧ ಮತ್ತೊಂದು ರೀತಿಯ ಗಟ್ಟಿತನದ ಹೋರಾಟವನ್ನು ಕಟ್ಟಬೇಕಾಗುತ್ತದೆ” ಎಂದು ರೂಪಾ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...