Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...