Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....