Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...