Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...