Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...