Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...