Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...