Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....