Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....