Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...