Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...