Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...