Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....