Homeಮುಖಪುಟಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

ಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಸ್ಪರ್ಧಿಸಿದ್ದರು. ಅವರ ಭವಿಷ್ಯವೇನಾಯಿತು? ಅವರು ಗೆಲುವು ಸಾಧಿಸಿದರೆ ಎಂಬುದರ ವಿವರ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಜೆಡಿಎಸ್ ಸೇರಿದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದರು. ಆದರೆ ಅವರು ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವು ಸಾಧಿಸಿದ್ದಾರೆ.
  2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಅವರು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಜಯ ಕಂಡರು.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದರು. ಆದರೆ ಅವರು ಕಾಂಗ್ರೆಸ್‌ನ ಅಜಯ್ ಸಿಂಗ್ ವಿರುದ್ಧ ಸೋಲು ಕಂಡರು.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ್ ಎದುರು ಸೋಲು ಅನುಭವಿಸಿದರು.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ಶಿವಲಿಂಗೇಗೌಡರ ಎದುರು ಸೋಲು ಕಂಡರು.

6. ವರುಣ: ಭಾರತೀ ಶಂಕರ್ – ಸಿದ್ದರಾಮಯ್ಯನವರ ಎದುರು ಸೋಲು ಕಂಡರು

7. ಅರಕಲಗೂಡು: ಎ.ಮಂಜುರವರು ಬಿಜೆಪಿ ತೊರೆದು ಬಂದು ಕಾಂಗ್ರೆಸ್‌ನ ಶ್ರೀಧರ್‌ ಗೌಡರ ಎದುರು ಜಯ ಸಾಧಿಸಿ ಶಾಸಕರಾಗಿದ್ದಾರೆ.

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪಯವರು ಕಾಂಗ್ರೆಸ್‌ನ ಶ್ರೀನಿವಾಸ್‌ರವರ ಎದುರು ಹೀನಾಯ ಸೋಲು ಕಂಡರು.

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್ ರವರು ಹಗರಿಬೊಮ್ಮನಹಳ್ಳಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ ಕಾಂಗ್ರೆಸ್‌ನ ರಹೀಂ ಖಾನ್ ಎದುರು ಸೋಲು ಕಂಡರು.

11. ಯಾದಗಿರಿ: ಎ.ಬಿ ಮಲಕರೆಡ್ಡಿಯವರು ಕಾಂಗ್ರೆಸ್‌ನ ಚನ್ನರೆಡ್ಡಿ ಪಾಟೀಲ್ ಎದುರು ಸೋಲು ಕಂಡರು.

12. ಶಹಾಪುರ: ಗುರು ಪಾಟೀಲ್ ಸಿರವಾರ್‌ರವರು ಕಾಂಗ್ರೆಸ್‌ನ ಶರಣ ಬಸಪ್ಪ ಎದುರು ಸೋಲು ಕಂಡರು.

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್ ರವರು ಕಾಂಗ್ರೆಸ್‌ನ ಶಿವಾನಂದ ಪಾಟೀಲ್ ಎದುರು ಸೋಲು ಕಂಡರು.

14. ಕಾರವಾರ: ಚೈತ್ರ ಕೋಟೇಕಾರ್ ಕಾಂಗ್ರೆಸ್‌ನ ಸತೀಶ್ ಸೈಲ್ ಎದುರು ಸೋಲು ಕಂಡರು.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಅಲಿ ರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಅಲ್ಲಿ ಬಿಜೆಪಿಯ ಭರತ್ ಶೆಟ್ಟಿಯವರ ಎದರು ಸೋಲು ಕಂಡರು.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ವಿರೇಂದ್ರ ಪಪ್ಪಿಯವರ ಎದುರು ಸೋಲು ಕಂಡರು.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್‌ ಕೆ.ಎಸ್ ಆನಂದ್ ಎದುರು ಸೋಲು ಕಂಡರು.

4. ಬಳ್ಳಾರಿ ನಗರ: ಅನಿಲ್ ಲಾಡ್ ಜೆಡಿಎಸ್ ಅಭ್ಯರ್ಥಿಯಾದರು. ಆದರೆ ನಾರಾ ಭರತ್ ರೆಡ್ಡಿ ಎದುರು ಹೀನಾಯ ಸೋಲು ಕಂಡರು.

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ವೈ.ಎಚ್ ಮೇಟಿ ಎದುರು ಸೋಲು ಕಂಡರು.

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ ಜೆಡಿಎಸ್ ಸೇರಿದರು. ಆದರೆ ಬಿಜೆಪಿ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡರು.

7. ಹಾನಗಲ್: ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದರೂ ಸಹ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಎದುರು ಹೀನಾಯ ಸೋಲು ಕಂಡರು.

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್ ಜೆಡಿಎಸ್ ಸೇರಿದರು. ಆದರೆ ಗುರು ದೇಶಪಾಂಡೆ ವಿರುದ್ಧ ಸೋಲು ಕಂಡರು.

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿರೆಡ್ಡಿಯವರು ಕಾಂಗ್ರೆಸ್‌ನ ಕೋನರೆಡ್ಡಿಯವರ ಎದುರು ಸೋತರು.

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ ಜೆಡಿಎಸ್ ಸೇರಿ ಕಾಂಗ್ರೆಸ್‌ನ ವಿಶ್ವಾಸ್ ವಸಂತ್ ವೈದ್ಯರ ಎದುರು ಸೋತರು.

11. ರಾಯಬಾಗ: ಪ್ರದೀಪ್ ಮಾಳಗಿ ಜೆಡಿಎಸ್ ಸೇರಿ ಬಿಜೆಪಿಯ ಐಹೋಳೆ ಮಹಾಲಿಂಗಪ್ಪನವರ ಎದುರು ಸೋಲು ಕಂಡರು.

12. ಕುಡಚಿ: ಆನಂದ್ ಮಾಳಗಿ ಕಾಂಗ್ರೆಸ್‌ನ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಎದುರು ಸೋತರು.

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು ಸೋತರು.

ಒಟ್ಟಾರೆಯಾಗಿ 27 ಜನ ಕಡೆಯ ಕ್ಷಣದಲ್ಲಿ ಜೆಡಿಎಸ್ ಪಕ್ಷಕ್ಕೆ ಧುಮುಕಿ ಟಿಕೆಟ್ ಗಿಟ್ಟಿಸಿಕೊಂಡರು. ಆದರೆ ಕೇವಲ ಇಬ್ಬರು ಮಾತ್ರ ಗೆಲುವು ಸಾಧಿಸಿದರು. ಉಳಿದ 25 ಮಂದಿ ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...