Homeಮುಖಪುಟಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

ಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಸ್ಪರ್ಧಿಸಿದ್ದರು. ಅವರ ಭವಿಷ್ಯವೇನಾಯಿತು? ಅವರು ಗೆಲುವು ಸಾಧಿಸಿದರೆ ಎಂಬುದರ ವಿವರ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಜೆಡಿಎಸ್ ಸೇರಿದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದರು. ಆದರೆ ಅವರು ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವು ಸಾಧಿಸಿದ್ದಾರೆ.
  2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಅವರು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಜಯ ಕಂಡರು.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದರು. ಆದರೆ ಅವರು ಕಾಂಗ್ರೆಸ್‌ನ ಅಜಯ್ ಸಿಂಗ್ ವಿರುದ್ಧ ಸೋಲು ಕಂಡರು.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ್ ಎದುರು ಸೋಲು ಅನುಭವಿಸಿದರು.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ಶಿವಲಿಂಗೇಗೌಡರ ಎದುರು ಸೋಲು ಕಂಡರು.

6. ವರುಣ: ಭಾರತೀ ಶಂಕರ್ – ಸಿದ್ದರಾಮಯ್ಯನವರ ಎದುರು ಸೋಲು ಕಂಡರು

7. ಅರಕಲಗೂಡು: ಎ.ಮಂಜುರವರು ಬಿಜೆಪಿ ತೊರೆದು ಬಂದು ಕಾಂಗ್ರೆಸ್‌ನ ಶ್ರೀಧರ್‌ ಗೌಡರ ಎದುರು ಜಯ ಸಾಧಿಸಿ ಶಾಸಕರಾಗಿದ್ದಾರೆ.

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪಯವರು ಕಾಂಗ್ರೆಸ್‌ನ ಶ್ರೀನಿವಾಸ್‌ರವರ ಎದುರು ಹೀನಾಯ ಸೋಲು ಕಂಡರು.

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್ ರವರು ಹಗರಿಬೊಮ್ಮನಹಳ್ಳಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ ಕಾಂಗ್ರೆಸ್‌ನ ರಹೀಂ ಖಾನ್ ಎದುರು ಸೋಲು ಕಂಡರು.

11. ಯಾದಗಿರಿ: ಎ.ಬಿ ಮಲಕರೆಡ್ಡಿಯವರು ಕಾಂಗ್ರೆಸ್‌ನ ಚನ್ನರೆಡ್ಡಿ ಪಾಟೀಲ್ ಎದುರು ಸೋಲು ಕಂಡರು.

12. ಶಹಾಪುರ: ಗುರು ಪಾಟೀಲ್ ಸಿರವಾರ್‌ರವರು ಕಾಂಗ್ರೆಸ್‌ನ ಶರಣ ಬಸಪ್ಪ ಎದುರು ಸೋಲು ಕಂಡರು.

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್ ರವರು ಕಾಂಗ್ರೆಸ್‌ನ ಶಿವಾನಂದ ಪಾಟೀಲ್ ಎದುರು ಸೋಲು ಕಂಡರು.

14. ಕಾರವಾರ: ಚೈತ್ರ ಕೋಟೇಕಾರ್ ಕಾಂಗ್ರೆಸ್‌ನ ಸತೀಶ್ ಸೈಲ್ ಎದುರು ಸೋಲು ಕಂಡರು.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಅಲಿ ರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಅಲ್ಲಿ ಬಿಜೆಪಿಯ ಭರತ್ ಶೆಟ್ಟಿಯವರ ಎದರು ಸೋಲು ಕಂಡರು.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ವಿರೇಂದ್ರ ಪಪ್ಪಿಯವರ ಎದುರು ಸೋಲು ಕಂಡರು.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್‌ ಕೆ.ಎಸ್ ಆನಂದ್ ಎದುರು ಸೋಲು ಕಂಡರು.

4. ಬಳ್ಳಾರಿ ನಗರ: ಅನಿಲ್ ಲಾಡ್ ಜೆಡಿಎಸ್ ಅಭ್ಯರ್ಥಿಯಾದರು. ಆದರೆ ನಾರಾ ಭರತ್ ರೆಡ್ಡಿ ಎದುರು ಹೀನಾಯ ಸೋಲು ಕಂಡರು.

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ವೈ.ಎಚ್ ಮೇಟಿ ಎದುರು ಸೋಲು ಕಂಡರು.

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ ಜೆಡಿಎಸ್ ಸೇರಿದರು. ಆದರೆ ಬಿಜೆಪಿ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡರು.

7. ಹಾನಗಲ್: ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದರೂ ಸಹ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಎದುರು ಹೀನಾಯ ಸೋಲು ಕಂಡರು.

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್ ಜೆಡಿಎಸ್ ಸೇರಿದರು. ಆದರೆ ಗುರು ದೇಶಪಾಂಡೆ ವಿರುದ್ಧ ಸೋಲು ಕಂಡರು.

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿರೆಡ್ಡಿಯವರು ಕಾಂಗ್ರೆಸ್‌ನ ಕೋನರೆಡ್ಡಿಯವರ ಎದುರು ಸೋತರು.

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ ಜೆಡಿಎಸ್ ಸೇರಿ ಕಾಂಗ್ರೆಸ್‌ನ ವಿಶ್ವಾಸ್ ವಸಂತ್ ವೈದ್ಯರ ಎದುರು ಸೋತರು.

11. ರಾಯಬಾಗ: ಪ್ರದೀಪ್ ಮಾಳಗಿ ಜೆಡಿಎಸ್ ಸೇರಿ ಬಿಜೆಪಿಯ ಐಹೋಳೆ ಮಹಾಲಿಂಗಪ್ಪನವರ ಎದುರು ಸೋಲು ಕಂಡರು.

12. ಕುಡಚಿ: ಆನಂದ್ ಮಾಳಗಿ ಕಾಂಗ್ರೆಸ್‌ನ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಎದುರು ಸೋತರು.

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು ಸೋತರು.

ಒಟ್ಟಾರೆಯಾಗಿ 27 ಜನ ಕಡೆಯ ಕ್ಷಣದಲ್ಲಿ ಜೆಡಿಎಸ್ ಪಕ್ಷಕ್ಕೆ ಧುಮುಕಿ ಟಿಕೆಟ್ ಗಿಟ್ಟಿಸಿಕೊಂಡರು. ಆದರೆ ಕೇವಲ ಇಬ್ಬರು ಮಾತ್ರ ಗೆಲುವು ಸಾಧಿಸಿದರು. ಉಳಿದ 25 ಮಂದಿ ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...