Homeಮುಖಪುಟನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

ನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

- Advertisement -
- Advertisement -

ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಗುರುವಾರ (ಫೆ.13) ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

“ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಭಾವಿಸಿದ್ದೇವೆ. ಆದರೆ, ಅದು ಇದು ಪ್ರಜಾಪ್ರಭುತ್ವವಲ್ಲ. ನಮಗೆ, ಕೇಜ್ರಿವಾಲ್ ಅವರಿಗೆ ಮತ್ತು ಕಾಂಗ್ರೆಸ್‌ಗೆ ಏನಾಯಿತೋ, ಭವಿಷ್ಯದಲ್ಲಿ ನಿತೀಶ್, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೂ ಆಗಬಹುದು” ಎಂದು ಹೇಳಿದ್ದಾರೆ.

“ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸು. ಇದೇ ಅವರು ಪ್ರಜಾಪ್ರಭುತ್ವಕ್ಕೆ ಕೊಡುತ್ತಿರುವ ಕೊಡುಗೆ” ಎಂದಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರ ಭೇಟಿಯ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಇಂಡಿಯಾ ಒಕ್ಕೂಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸುವ ಅನೇಕ ಹಿರಿಯ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟದ ಜಂಟಿ ನಾಯಕತ್ವವನ್ನು ಹೊಂದಿದೆ. ಒಬ್ಬನೇ ಒಬ್ಬ ನಾಯಕನಲ್ಲ. ಇದು ಅಹಂಕಾರದ ಹೋರಾಟ ಅಥವಾ ಒಬ್ಬರ ಲಾಭಕ್ಕಾಗಿ ಅಲ್ಲ, ಬದಲಾಗಿ ದೇಶದ ಭವಿಷ್ಯಕ್ಕಾಗಿ ಹೋರಾಟ” ಎಂದಿದ್ದಾರೆ.

ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧದ ಹೋರಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.

ಕೆಲ ದಿನಗಳ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಶೇಷವಾಗಿ 2024ರ ಲೋಕಸಭೆ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ನಡುವೆ ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಲೋಕಸಭಾ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ಹೇಳಿದ್ದರು.

ಮತದಾರರ ನೋಂದಣಿ ಅಂಕಿ ಅಂಶಗಳಲ್ಲಿನ ವ್ಯತ್ಯಾಸಗಳನ್ನು ಅವರು ಪ್ರಶ್ನಿಸಿದ್ದರು. ನೋಂದಾಯಿತ ಮತದಾರರ ಸಂಖ್ಯೆ ಮಹಾರಾಷ್ಟ್ರದ ಒಟ್ಟು ವಯಸ್ಕ ಜನಸಂಖ್ಯೆಯನ್ನು ಮೀರಿದೆ ಎಂದು ಆರೋಪಿಸಿದ್ದರು.

ದೆಹಲಿ ಚುನಾವಣೆಯಲ್ಲಿ ಸೋಲು; ಯೂಟ್ಯೂಬರ್ ಆಗಿ ಬದಲಾದ ಎಎಪಿಯ ಸೌರಭ್ ಭಾರದ್ವಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...