Homeಮುಖಪುಟನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

ನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

- Advertisement -
- Advertisement -

ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಗುರುವಾರ (ಫೆ.13) ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

“ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಭಾವಿಸಿದ್ದೇವೆ. ಆದರೆ, ಅದು ಇದು ಪ್ರಜಾಪ್ರಭುತ್ವವಲ್ಲ. ನಮಗೆ, ಕೇಜ್ರಿವಾಲ್ ಅವರಿಗೆ ಮತ್ತು ಕಾಂಗ್ರೆಸ್‌ಗೆ ಏನಾಯಿತೋ, ಭವಿಷ್ಯದಲ್ಲಿ ನಿತೀಶ್, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೂ ಆಗಬಹುದು” ಎಂದು ಹೇಳಿದ್ದಾರೆ.

“ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸು. ಇದೇ ಅವರು ಪ್ರಜಾಪ್ರಭುತ್ವಕ್ಕೆ ಕೊಡುತ್ತಿರುವ ಕೊಡುಗೆ” ಎಂದಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರ ಭೇಟಿಯ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಇಂಡಿಯಾ ಒಕ್ಕೂಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸುವ ಅನೇಕ ಹಿರಿಯ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟದ ಜಂಟಿ ನಾಯಕತ್ವವನ್ನು ಹೊಂದಿದೆ. ಒಬ್ಬನೇ ಒಬ್ಬ ನಾಯಕನಲ್ಲ. ಇದು ಅಹಂಕಾರದ ಹೋರಾಟ ಅಥವಾ ಒಬ್ಬರ ಲಾಭಕ್ಕಾಗಿ ಅಲ್ಲ, ಬದಲಾಗಿ ದೇಶದ ಭವಿಷ್ಯಕ್ಕಾಗಿ ಹೋರಾಟ” ಎಂದಿದ್ದಾರೆ.

ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧದ ಹೋರಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.

ಕೆಲ ದಿನಗಳ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಶೇಷವಾಗಿ 2024ರ ಲೋಕಸಭೆ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ನಡುವೆ ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಲೋಕಸಭಾ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ಹೇಳಿದ್ದರು.

ಮತದಾರರ ನೋಂದಣಿ ಅಂಕಿ ಅಂಶಗಳಲ್ಲಿನ ವ್ಯತ್ಯಾಸಗಳನ್ನು ಅವರು ಪ್ರಶ್ನಿಸಿದ್ದರು. ನೋಂದಾಯಿತ ಮತದಾರರ ಸಂಖ್ಯೆ ಮಹಾರಾಷ್ಟ್ರದ ಒಟ್ಟು ವಯಸ್ಕ ಜನಸಂಖ್ಯೆಯನ್ನು ಮೀರಿದೆ ಎಂದು ಆರೋಪಿಸಿದ್ದರು.

ದೆಹಲಿ ಚುನಾವಣೆಯಲ್ಲಿ ಸೋಲು; ಯೂಟ್ಯೂಬರ್ ಆಗಿ ಬದಲಾದ ಎಎಪಿಯ ಸೌರಭ್ ಭಾರದ್ವಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...