Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ತಾನು ಬಿಜೆಪಿ ಬೆಂಬಲಿಸುವವಳಾಗಿದ್ದು, ಬಿಜೆಪಿ-ಶಿವಸೇನೆ ಮೈತ್ರಿಯಿಂದ ಬಲವಂತವಾಗಿ ಶಿವಸೇನೆಗೆ ಮತನೀಡುವಂತಾಯಿತು ಎಂದಿದ್ದರು.

- Advertisement -
- Advertisement -

ಸಧ್ಯ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌, ಮಹರಾಷ್ಟ್ರದ ಶಿವಸೇನೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವುದನ್ನು ಮುಂದುವರೆಸಿದ್ದು, ಇತ್ತೀಚೆಗೆ ಟೈಮ್ಸ್‌ ನೌ ಸಂದರ್ಶನವೊಂದರಲ್ಲಿ, ’ತಾನು ಮನಸ್ಸಿಲ್ಲದೆ ಬಲವಂತವಾಗಿ ಶಿವಸೇನೆಗೆ ಮತಚಲಾಯಿಸಿದ್ದೇನೆ’ ಎಂದು ಹೇಳಿದ್ದಾರೆ.

ಕಂಗನಾ ತನ್ನ ಸಂದರ್ಶನದಲ್ಲಿ, ನಾನು ಬಿಜೆಪಿಯನ್ನು ಬೆಂಬಲಿಸುವವಳು, ಆದರೆ ಶಿವಸೇನೆಗೆ ಯಾಕೆ ಮತ ಹಾಕಬೇಕು? ಶಿವಸೇನೆ ಮತ್ತು ಬಿಜೆಪಿ ಮೈತ್ರಿಯಾಗಿದ್ದರಿಂದ ಬಾಂದ್ರಾದಲ್ಲಿ ಬಿಜೆಪಿಯ ಆಯ್ಕೆ ಇಲ್ಲದೆ ಶಿವಸೇನೆಗೆ ಮತ ಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಫ್ಯಾಕ್ಟ್‌‌ಚೆಕ್

ಇಂಡಿಯಾ ಟುಡೆ ಉಪ ಸಂಪಾದಕ ಕಮಲೇಶ್ ಸುತಾರ್ ಕಂಗನಾ ಅವರ ಪ್ರತಿಪಾದನೆ ಸುಳ್ಳು ಎಂದು ಕೆಲವು ವಿಚಾರಗಳ ಬಗ್ಗೆ ಗಮನ ಸೆಳೆದಿದ್ದಾರೆ. “ಮಹಾರಾಷ್ಟ್ರ ಚುನಾವಣಾ ಆಯೋಗದ ಪ್ರಕಾರ, ಕಂಗನಾ ಬಾಂದ್ರಾ ಪಶ್ಚಿಮ ಕ್ಷೇತ್ರದ ಮತದಾರಾಗಿದ್ದಾರೆ. ಇಲ್ಲಿ 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಆಶಿಶ್ ಶೆಲಾರ್ ಶಿವಸೇನೆ-ಬಿಜೆಪಿ ಅಭ್ಯರ್ಥಿಯಾಗಿದ್ದರು. ಅಷ್ಟೇ ಅಲ್ಲದೆ ಲೋಕಸಭೆಯಲ್ಲಿ ಕೂಡಾ ಬಿಜೆಪಿಯ ಪೂನಂ ಮಹಾಜನ್ ಇಲ್ಲಿ ಸ್ಫರ್ಧಿಸಿ ಜಯಗಳಿಸಿದರು” ಎಂದು ಹೇಳಿದ್ದರು.

 

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಕಮಲೇಶ್‌ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಮಲೇಶ್‌ ಸುಳ್ಳು ಹರಡುತ್ತಿದ್ದಾರೆ, ಆದ್ದರಿಂದ ಕಾನೂನು ಕ್ರಮದ ನೋಟಿಸು ಕಳುಹಿಸುತ್ತೇನೆ ಎಂದ ಕಂಗನಾ, “ನಾನು ಲೋಕಸಭಾ ಚುನಾವಣೆಯ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿದ್ದೇನೆ ಆದರೆ ಅವರು ಉದ್ದೇಶಪೂರ್ವಕವಾಗಿ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಅವರು ಬರೆದಿದ್ದಾರೆ.

ಇದಾಗ್ಯೂ, ಕಂಗನಾ ಶಿವಸೇನೆಗೆ ಬಂಲವಂತವಾಗಿ ಮತ ಚಲಾಯಿಸಿದ್ದೇನೆ ಎಂಬ ಹೇಳಿಕೆಯು ನಿಜವಲ್ಲ. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳೆರಡರಲ್ಲೂ ಕಂಗನಾ ಮತ ಚಲಾಯಿಸಲು ನೋಂದಾಯಿಸಲಾಗಿರುವ ಕ್ಷೇತ್ರಗಳ ಅಭ್ಯರ್ಥಿಗಳು ಬಿಜೆಪಿಗೆ ಸೇರಿದವರಾಗಿದ್ದು, ಇಲ್ಲಿ ಚುನಾವಣೆಯ ವೇಳೆ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು.

ಲೋಕಸಭಾ ಚುನಾವಣೆ

2019 ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ಖಾರ್‌ನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದ್ದರು.

ಖಾರ್ ಮುಂಬೈನ ಉಪನಗರ ಜಿಲ್ಲೆಯಲ್ಲಿದ್ದು, ಇದು ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವಾಂಡ್ರೆ (ಬಾಂದ್ರಾ) ಪಶ್ಚಿಮ ವಿಧಾನಸಭಾ ಕ್ಷೇತ್ರದ ಭಾಗವಾಗಿದೆ. ‘General Information>List of Polling Stations’ ಅಡಿಯಲ್ಲಿ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಓದುಗರು ಇದನ್ನು ಸ್ವಯಂ ಪರಿಶೀಲಿಸಬಹುದು.

ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು ನಿಜವೆ?

ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ-ಶಿವಸೇನೆ ಮೈತ್ರಿಯ ಅಭ್ಯರ್ಥಿ ಬಿಜೆಪಿಯ ಪೂನಂ ಮಹಾಜನ್ ವಿಜಯಶಾಲಿಯಾಗಿದ್ದರು.

ಆದ್ದರಿಂದ ಮೈತ್ರಿಯಿಂದಾಗಿ ತಾನು ಮನಸ್ಸಿಲ್ಲದೆ ಶಿವಸೇನೆಗೆ ಮತ ಚಲಾಯಿಸಿದ್ದೇನೆ ಎಂದು ಕಂಗನಾ ರಾಣಾವತ್‌ ಹೇಳಿರುವುದು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ವಿಧಾನಸಭಾ ಚುನಾವಣೆ

ಅಮರ್ ಉಜಲಾ ವರದಿಯ ಪ್ರಕಾರ, 2019 ರ ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಂಗನಾ ಮುಂಬೈನಲ್ಲಿ ಇರಲಿಲ್ಲ. ಆದರೆ ಅವರು ಅಲ್ಲಿದ್ದು ಮತ ಚಲಾಯಿಸಿದ್ದರೂ ಅದು ಬಿಜೆಪಿಯ ರಾಜಕಾರಣಿಗೆ ಆಗಿರುತ್ತಿತ್ತು. ಅಂದು ಬಿಜೆಪಿಯ ಆಶಿಶ್ ಶೆಲಾರ್ ಬಾಂದ್ರಾ ವೆಸ್ಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ-ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿದ್ದರು ಹಾಗೂ ಗೆದ್ದರು.

ಕಂಗನಾ ಟಿವಿ ಸಂದರ್ಶನದಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಕೂಡಾ ಸುಳ್ಳು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...