HomeಮುಖಪುಟExplained : ಏನಿದು 'ಡಿಜಿಟಲ್ ಅರೆಸ್ಟ್' ವಂಚನೆ?

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ಕಳೆದ ಜನವರಿಯಿಂದ ಏಪ್ರಿಲ್ ನಡುವೆ ಡಿಜಿಟಲ್ ಅರೆಸ್ಟ್‌ ವಂಚನೆಯ ಮೂಲಕ ₹120 ಕೋಟಿ ಕಳೆದುಕೊಂಡಿರುವ ಭಾರತೀಯರು

- Advertisement -
- Advertisement -

‘ಡಿಜಿಟಲ್ ಬಂಧನ ಅಥವಾ ಡಿಜಿಟಲ್ ಅರೆಸ್ಟ್‌’ ಕೆಲ ದಿನಗಳಿಂದ ಭಾರೀ ಚರ್ಚೆಯಲ್ಲಿರುವ ವಿಷಯ. ಕಳೆದ ಭಾನುವಾರ (ಅ.27) 115ನೇ ಸಂಚಿಕೆಯ ‘ಮನ್‌ ಕಿ ಬಾತ್’ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ವಿಚಾರವನ್ನು ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರವಾಗಿರುವಂತೆ ದೇಶದ ಜನರಿಗೆ ಸಲಹೆ ನೀಡಿದ್ದರು.

ಬರೋಬ್ಬರಿ 140 ಕೋಟಿಗೂ ಅಧಿಕ ಜನಸಂಖ್ಯೆಯೊಂದಿಗೆ ಮೊದಲ ಸ್ಥಾನದಲ್ಲಿರುವ ಭಾರತದಲ್ಲಿ, ಡಿಜಿಟಲ್ ಸಾಧನಗಳ ಬಳಕೆ ದುಪ್ಪಟ್ಟಿದೆ. ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾದಂತೆ ಡಿಜಿಟಲ್ ಅಪರಾಧಗಳ ಅಥವಾ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೊಸ ಹೊಸ ಸೈಬರ್ ಅಪರಾಧಗಳು ನಡೆಯುತ್ತಿವೆ. ಅವುಗಳನ್ನು ಪತ್ತೆಹಚ್ಚಿ ಜನರಿಗೆ ಪರಿಹಾರ ಕೊಡುವುದು ಕಾನೂನು ಪಾಲಕರಿಗೂ ಸವಾಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿವಿಧ ಸಂಸ್ಥೆಗಳ ಅಧಿಕಾರಿಗಳಂತೆ ಸೋಗು ಹಾಕಿ ಆಡಿಯೋ, ವಿಡಿಯೋ ಮೂಲಕ ಭಯ ಹುಟ್ಟಿಸಿ ಹಣ ಕಸಿಯುವ ಹೊಸ ಡಿಜಿಟಲ್ ವಂಚನೆ ಹೆಚ್ಚಾಗುತ್ತಿದೆ. ಈ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ, ಕಾನೂನಿನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ. ಆ ಹೆಸರಿನಲ್ಲಿ ಯಾರಾದರು ನಿಮ್ಮನ್ನು ಸಂಪರ್ಕಿಸಿದರೆ, ಅದು ಖಂಡಿತವಾಗಿಯೂ ವಂಚನೆಯಾಗಿರುತ್ತದೆ ಎಂದಿದ್ದಾರೆ.

ಏನಿದು ಡಿಜಿಟಲ್ ಅರೆಸ್ಟ್‌?

ಸೈಬರ್ ವಂಚಕರು ಸಿಬಿಐ,ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ಇತ್ತೀಚಿನ ಒಂದು ಘಟನೆಯಲ್ಲಿ, ವರ್ಧಮಾನ್ ಗ್ರೂಪ್ ಅಧ್ಯಕ್ಷ ಎಸ್‌ಪಿ ಓಸ್ವಾಲ್ ಅವರನ್ನು ಎರಡು ದಿನಗಳ ಕಾಲ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿದ್ದ ವಂಚಕರು “ಡಿಜಿಟಲ್‌ನಲ್ಲಿ ಅರೆಸ್ಟ್‌” ಎಂದು ಹೆದರಿಸಿ ಅವರಿಂದ ಬರೋಬ್ಬರಿ 7 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಕಲಾಪ ಸೃಷ್ಟಿಸಿದ್ದ ವಂಚಕರು, ಮುಖ್ಯನ್ಯಾಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರಿನಲ್ಲಿ ಆದೇಶಗಳನ್ನೂ ನೀಡಿದ್ದರು.

ಅದೇ ರೀತಿ, ಹೈದರಾಬಾದ್‌ನ ಟೆಕ್ಕಿಯೊಬ್ಬರು ಅಕ್ಟೋಬರ್ 27ರಂದು 30 ಗಂಟೆಗಳ ಕಾಲ ಅಗ್ನಿಪರೀಕ್ಷೆಯನ್ನು ಎದರಿಸಿದ್ದರು. ಈ ಸಮಯದಲ್ಲಿ ಸೈಬರ್ ಅಪರಾಧಿಗಳು ಅವರ ಆಧಾರ್‌ ಕಾರ್ಡ್‌ಗೆ ಹಣ ಅಕ್ರಮ ವರ್ಗಾವಣೆಯ ಸುಳ್ಳು ಆರೋಪದ ಸಂಬಂಧ ಕಲ್ಪಿಸಿ ಲಾಡ್ಜ್‌ನಲ್ಲಿ ಉಳಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ವಂಚಕರ ಕೈಯಿಂದ ತಪ್ಪಿಸಿಕೊಂಡಿದ್ದ ಟೆಕ್ಕಿ ಸೈಬರ್ ಕ್ರೈಮ್ ಅಧಿಕಾರಿಗಳ ಸಹಾಯ ಕೋರಿದ್ದರು.

ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ವಂಚಕರು ಜನರನ್ನು ಮಾನಸಿಕವಾಗಿ ಭಯಪಡಿಸುವ ಮತ್ತು ತುರ್ತು, ಗಂಭೀರ ಪರಿಸ್ಥಿಗಳನ್ನು ಸೃಷ್ಟಿಸುತ್ತಾರೆ. ಬಲಿಪಶುಗಳಿಗೆ ಅನುಸರಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ ಎಂಬಂತೆ ಅನಿಸಬೇಕು ಆ ರೀತಿ ಮಾಡುತ್ತಾರೆ. ಹಾಗಾಗಿ, ಜನರು ಒಂದು ಕ್ಷಣ ನಿಂತು, ಯೋಚಿಸಿ ನಂತರ ಮುಂದಿನ ಹೆಜ್ಜೆಯಿಡಬೇಕು. ಆಗ ಮಾತ್ರ ಡಿಜಿಟಲ್ ಭದ್ರತೆ ಸಾಧ್ಯ ಎಂದು ಪ್ರಧಾನಿ ಮೋದಿ ಮನ್‌ ಕಿ ಬಾತ್‌ನಲ್ಲಿ ಹೇಳಿದ್ದಾರೆ.

“ನಿಮಗೆ ಅಪರಿಚಿತ ಕರೆ ಬಂದ ತಕ್ಷಣ ನಿಂತು ಯೋಚಿಸಿ, ಗಾಬರಿಯಾಗಬೇಡಿ, ಶಾಂತವಾಗಿರಿ, ಯಾವುದೇ ಆತುರದ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸಾಧ್ಯವಾದರೆ ಬಂದಿರುವ ಕರೆಯ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ. ಯಾವುದೇ ಸರ್ಕಾರಿ ಸಂಸ್ಥೆಯು ನಿಮಗೆ ಡಿಜಿಟಲ್ ಅರೆಸ್ಟ್‌ ಎಂದು ಬೆದರಿಕೆ ಹಾಕುವುದಿಲ್ಲ. ಏನಾದರು ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಬಂದರೆ ಏನೋ ಮೋಸ ನಡೆಯುತ್ತಿದೆ ಎಂದು ತಿಳಿಯಿರಿ” ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ ಎಂದಿದ್ದಾರೆ.

ಇದನ್ನೂ ಓದಿ : ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...