HomeಮುಖಪುಟExplained : ಏನಿದು 'ಡಿಜಿಟಲ್ ಅರೆಸ್ಟ್' ವಂಚನೆ?

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ಕಳೆದ ಜನವರಿಯಿಂದ ಏಪ್ರಿಲ್ ನಡುವೆ ಡಿಜಿಟಲ್ ಅರೆಸ್ಟ್‌ ವಂಚನೆಯ ಮೂಲಕ ₹120 ಕೋಟಿ ಕಳೆದುಕೊಂಡಿರುವ ಭಾರತೀಯರು

- Advertisement -
- Advertisement -

‘ಡಿಜಿಟಲ್ ಬಂಧನ ಅಥವಾ ಡಿಜಿಟಲ್ ಅರೆಸ್ಟ್‌’ ಕೆಲ ದಿನಗಳಿಂದ ಭಾರೀ ಚರ್ಚೆಯಲ್ಲಿರುವ ವಿಷಯ. ಕಳೆದ ಭಾನುವಾರ (ಅ.27) 115ನೇ ಸಂಚಿಕೆಯ ‘ಮನ್‌ ಕಿ ಬಾತ್’ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ವಿಚಾರವನ್ನು ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರವಾಗಿರುವಂತೆ ದೇಶದ ಜನರಿಗೆ ಸಲಹೆ ನೀಡಿದ್ದರು.

ಬರೋಬ್ಬರಿ 140 ಕೋಟಿಗೂ ಅಧಿಕ ಜನಸಂಖ್ಯೆಯೊಂದಿಗೆ ಮೊದಲ ಸ್ಥಾನದಲ್ಲಿರುವ ಭಾರತದಲ್ಲಿ, ಡಿಜಿಟಲ್ ಸಾಧನಗಳ ಬಳಕೆ ದುಪ್ಪಟ್ಟಿದೆ. ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾದಂತೆ ಡಿಜಿಟಲ್ ಅಪರಾಧಗಳ ಅಥವಾ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೊಸ ಹೊಸ ಸೈಬರ್ ಅಪರಾಧಗಳು ನಡೆಯುತ್ತಿವೆ. ಅವುಗಳನ್ನು ಪತ್ತೆಹಚ್ಚಿ ಜನರಿಗೆ ಪರಿಹಾರ ಕೊಡುವುದು ಕಾನೂನು ಪಾಲಕರಿಗೂ ಸವಾಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿವಿಧ ಸಂಸ್ಥೆಗಳ ಅಧಿಕಾರಿಗಳಂತೆ ಸೋಗು ಹಾಕಿ ಆಡಿಯೋ, ವಿಡಿಯೋ ಮೂಲಕ ಭಯ ಹುಟ್ಟಿಸಿ ಹಣ ಕಸಿಯುವ ಹೊಸ ಡಿಜಿಟಲ್ ವಂಚನೆ ಹೆಚ್ಚಾಗುತ್ತಿದೆ. ಈ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ, ಕಾನೂನಿನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ. ಆ ಹೆಸರಿನಲ್ಲಿ ಯಾರಾದರು ನಿಮ್ಮನ್ನು ಸಂಪರ್ಕಿಸಿದರೆ, ಅದು ಖಂಡಿತವಾಗಿಯೂ ವಂಚನೆಯಾಗಿರುತ್ತದೆ ಎಂದಿದ್ದಾರೆ.

ಏನಿದು ಡಿಜಿಟಲ್ ಅರೆಸ್ಟ್‌?

ಸೈಬರ್ ವಂಚಕರು ಸಿಬಿಐ,ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ಇತ್ತೀಚಿನ ಒಂದು ಘಟನೆಯಲ್ಲಿ, ವರ್ಧಮಾನ್ ಗ್ರೂಪ್ ಅಧ್ಯಕ್ಷ ಎಸ್‌ಪಿ ಓಸ್ವಾಲ್ ಅವರನ್ನು ಎರಡು ದಿನಗಳ ಕಾಲ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿದ್ದ ವಂಚಕರು “ಡಿಜಿಟಲ್‌ನಲ್ಲಿ ಅರೆಸ್ಟ್‌” ಎಂದು ಹೆದರಿಸಿ ಅವರಿಂದ ಬರೋಬ್ಬರಿ 7 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಕಲಾಪ ಸೃಷ್ಟಿಸಿದ್ದ ವಂಚಕರು, ಮುಖ್ಯನ್ಯಾಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರಿನಲ್ಲಿ ಆದೇಶಗಳನ್ನೂ ನೀಡಿದ್ದರು.

ಅದೇ ರೀತಿ, ಹೈದರಾಬಾದ್‌ನ ಟೆಕ್ಕಿಯೊಬ್ಬರು ಅಕ್ಟೋಬರ್ 27ರಂದು 30 ಗಂಟೆಗಳ ಕಾಲ ಅಗ್ನಿಪರೀಕ್ಷೆಯನ್ನು ಎದರಿಸಿದ್ದರು. ಈ ಸಮಯದಲ್ಲಿ ಸೈಬರ್ ಅಪರಾಧಿಗಳು ಅವರ ಆಧಾರ್‌ ಕಾರ್ಡ್‌ಗೆ ಹಣ ಅಕ್ರಮ ವರ್ಗಾವಣೆಯ ಸುಳ್ಳು ಆರೋಪದ ಸಂಬಂಧ ಕಲ್ಪಿಸಿ ಲಾಡ್ಜ್‌ನಲ್ಲಿ ಉಳಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ವಂಚಕರ ಕೈಯಿಂದ ತಪ್ಪಿಸಿಕೊಂಡಿದ್ದ ಟೆಕ್ಕಿ ಸೈಬರ್ ಕ್ರೈಮ್ ಅಧಿಕಾರಿಗಳ ಸಹಾಯ ಕೋರಿದ್ದರು.

ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ವಂಚಕರು ಜನರನ್ನು ಮಾನಸಿಕವಾಗಿ ಭಯಪಡಿಸುವ ಮತ್ತು ತುರ್ತು, ಗಂಭೀರ ಪರಿಸ್ಥಿಗಳನ್ನು ಸೃಷ್ಟಿಸುತ್ತಾರೆ. ಬಲಿಪಶುಗಳಿಗೆ ಅನುಸರಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ ಎಂಬಂತೆ ಅನಿಸಬೇಕು ಆ ರೀತಿ ಮಾಡುತ್ತಾರೆ. ಹಾಗಾಗಿ, ಜನರು ಒಂದು ಕ್ಷಣ ನಿಂತು, ಯೋಚಿಸಿ ನಂತರ ಮುಂದಿನ ಹೆಜ್ಜೆಯಿಡಬೇಕು. ಆಗ ಮಾತ್ರ ಡಿಜಿಟಲ್ ಭದ್ರತೆ ಸಾಧ್ಯ ಎಂದು ಪ್ರಧಾನಿ ಮೋದಿ ಮನ್‌ ಕಿ ಬಾತ್‌ನಲ್ಲಿ ಹೇಳಿದ್ದಾರೆ.

“ನಿಮಗೆ ಅಪರಿಚಿತ ಕರೆ ಬಂದ ತಕ್ಷಣ ನಿಂತು ಯೋಚಿಸಿ, ಗಾಬರಿಯಾಗಬೇಡಿ, ಶಾಂತವಾಗಿರಿ, ಯಾವುದೇ ಆತುರದ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸಾಧ್ಯವಾದರೆ ಬಂದಿರುವ ಕರೆಯ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ. ಯಾವುದೇ ಸರ್ಕಾರಿ ಸಂಸ್ಥೆಯು ನಿಮಗೆ ಡಿಜಿಟಲ್ ಅರೆಸ್ಟ್‌ ಎಂದು ಬೆದರಿಕೆ ಹಾಕುವುದಿಲ್ಲ. ಏನಾದರು ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಬಂದರೆ ಏನೋ ಮೋಸ ನಡೆಯುತ್ತಿದೆ ಎಂದು ತಿಳಿಯಿರಿ” ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ ಎಂದಿದ್ದಾರೆ.

ಇದನ್ನೂ ಓದಿ : ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...