HomeಮುಖಪುಟExplained : ಏನಿದು 'ಡಿಜಿಟಲ್ ಅರೆಸ್ಟ್' ವಂಚನೆ?

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ಕಳೆದ ಜನವರಿಯಿಂದ ಏಪ್ರಿಲ್ ನಡುವೆ ಡಿಜಿಟಲ್ ಅರೆಸ್ಟ್‌ ವಂಚನೆಯ ಮೂಲಕ ₹120 ಕೋಟಿ ಕಳೆದುಕೊಂಡಿರುವ ಭಾರತೀಯರು

- Advertisement -
- Advertisement -

‘ಡಿಜಿಟಲ್ ಬಂಧನ ಅಥವಾ ಡಿಜಿಟಲ್ ಅರೆಸ್ಟ್‌’ ಕೆಲ ದಿನಗಳಿಂದ ಭಾರೀ ಚರ್ಚೆಯಲ್ಲಿರುವ ವಿಷಯ. ಕಳೆದ ಭಾನುವಾರ (ಅ.27) 115ನೇ ಸಂಚಿಕೆಯ ‘ಮನ್‌ ಕಿ ಬಾತ್’ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ವಿಚಾರವನ್ನು ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರವಾಗಿರುವಂತೆ ದೇಶದ ಜನರಿಗೆ ಸಲಹೆ ನೀಡಿದ್ದರು.

ಬರೋಬ್ಬರಿ 140 ಕೋಟಿಗೂ ಅಧಿಕ ಜನಸಂಖ್ಯೆಯೊಂದಿಗೆ ಮೊದಲ ಸ್ಥಾನದಲ್ಲಿರುವ ಭಾರತದಲ್ಲಿ, ಡಿಜಿಟಲ್ ಸಾಧನಗಳ ಬಳಕೆ ದುಪ್ಪಟ್ಟಿದೆ. ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾದಂತೆ ಡಿಜಿಟಲ್ ಅಪರಾಧಗಳ ಅಥವಾ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೊಸ ಹೊಸ ಸೈಬರ್ ಅಪರಾಧಗಳು ನಡೆಯುತ್ತಿವೆ. ಅವುಗಳನ್ನು ಪತ್ತೆಹಚ್ಚಿ ಜನರಿಗೆ ಪರಿಹಾರ ಕೊಡುವುದು ಕಾನೂನು ಪಾಲಕರಿಗೂ ಸವಾಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿವಿಧ ಸಂಸ್ಥೆಗಳ ಅಧಿಕಾರಿಗಳಂತೆ ಸೋಗು ಹಾಕಿ ಆಡಿಯೋ, ವಿಡಿಯೋ ಮೂಲಕ ಭಯ ಹುಟ್ಟಿಸಿ ಹಣ ಕಸಿಯುವ ಹೊಸ ಡಿಜಿಟಲ್ ವಂಚನೆ ಹೆಚ್ಚಾಗುತ್ತಿದೆ. ಈ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ, ಕಾನೂನಿನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ. ಆ ಹೆಸರಿನಲ್ಲಿ ಯಾರಾದರು ನಿಮ್ಮನ್ನು ಸಂಪರ್ಕಿಸಿದರೆ, ಅದು ಖಂಡಿತವಾಗಿಯೂ ವಂಚನೆಯಾಗಿರುತ್ತದೆ ಎಂದಿದ್ದಾರೆ.

ಏನಿದು ಡಿಜಿಟಲ್ ಅರೆಸ್ಟ್‌?

ಸೈಬರ್ ವಂಚಕರು ಸಿಬಿಐ,ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ಇತ್ತೀಚಿನ ಒಂದು ಘಟನೆಯಲ್ಲಿ, ವರ್ಧಮಾನ್ ಗ್ರೂಪ್ ಅಧ್ಯಕ್ಷ ಎಸ್‌ಪಿ ಓಸ್ವಾಲ್ ಅವರನ್ನು ಎರಡು ದಿನಗಳ ಕಾಲ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿದ್ದ ವಂಚಕರು “ಡಿಜಿಟಲ್‌ನಲ್ಲಿ ಅರೆಸ್ಟ್‌” ಎಂದು ಹೆದರಿಸಿ ಅವರಿಂದ ಬರೋಬ್ಬರಿ 7 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಕಲಾಪ ಸೃಷ್ಟಿಸಿದ್ದ ವಂಚಕರು, ಮುಖ್ಯನ್ಯಾಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರಿನಲ್ಲಿ ಆದೇಶಗಳನ್ನೂ ನೀಡಿದ್ದರು.

ಅದೇ ರೀತಿ, ಹೈದರಾಬಾದ್‌ನ ಟೆಕ್ಕಿಯೊಬ್ಬರು ಅಕ್ಟೋಬರ್ 27ರಂದು 30 ಗಂಟೆಗಳ ಕಾಲ ಅಗ್ನಿಪರೀಕ್ಷೆಯನ್ನು ಎದರಿಸಿದ್ದರು. ಈ ಸಮಯದಲ್ಲಿ ಸೈಬರ್ ಅಪರಾಧಿಗಳು ಅವರ ಆಧಾರ್‌ ಕಾರ್ಡ್‌ಗೆ ಹಣ ಅಕ್ರಮ ವರ್ಗಾವಣೆಯ ಸುಳ್ಳು ಆರೋಪದ ಸಂಬಂಧ ಕಲ್ಪಿಸಿ ಲಾಡ್ಜ್‌ನಲ್ಲಿ ಉಳಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ವಂಚಕರ ಕೈಯಿಂದ ತಪ್ಪಿಸಿಕೊಂಡಿದ್ದ ಟೆಕ್ಕಿ ಸೈಬರ್ ಕ್ರೈಮ್ ಅಧಿಕಾರಿಗಳ ಸಹಾಯ ಕೋರಿದ್ದರು.

ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ವಂಚಕರು ಜನರನ್ನು ಮಾನಸಿಕವಾಗಿ ಭಯಪಡಿಸುವ ಮತ್ತು ತುರ್ತು, ಗಂಭೀರ ಪರಿಸ್ಥಿಗಳನ್ನು ಸೃಷ್ಟಿಸುತ್ತಾರೆ. ಬಲಿಪಶುಗಳಿಗೆ ಅನುಸರಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ ಎಂಬಂತೆ ಅನಿಸಬೇಕು ಆ ರೀತಿ ಮಾಡುತ್ತಾರೆ. ಹಾಗಾಗಿ, ಜನರು ಒಂದು ಕ್ಷಣ ನಿಂತು, ಯೋಚಿಸಿ ನಂತರ ಮುಂದಿನ ಹೆಜ್ಜೆಯಿಡಬೇಕು. ಆಗ ಮಾತ್ರ ಡಿಜಿಟಲ್ ಭದ್ರತೆ ಸಾಧ್ಯ ಎಂದು ಪ್ರಧಾನಿ ಮೋದಿ ಮನ್‌ ಕಿ ಬಾತ್‌ನಲ್ಲಿ ಹೇಳಿದ್ದಾರೆ.

“ನಿಮಗೆ ಅಪರಿಚಿತ ಕರೆ ಬಂದ ತಕ್ಷಣ ನಿಂತು ಯೋಚಿಸಿ, ಗಾಬರಿಯಾಗಬೇಡಿ, ಶಾಂತವಾಗಿರಿ, ಯಾವುದೇ ಆತುರದ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸಾಧ್ಯವಾದರೆ ಬಂದಿರುವ ಕರೆಯ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ. ಯಾವುದೇ ಸರ್ಕಾರಿ ಸಂಸ್ಥೆಯು ನಿಮಗೆ ಡಿಜಿಟಲ್ ಅರೆಸ್ಟ್‌ ಎಂದು ಬೆದರಿಕೆ ಹಾಕುವುದಿಲ್ಲ. ಏನಾದರು ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಬಂದರೆ ಏನೋ ಮೋಸ ನಡೆಯುತ್ತಿದೆ ಎಂದು ತಿಳಿಯಿರಿ” ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ ಎಂದಿದ್ದಾರೆ.

ಇದನ್ನೂ ಓದಿ : ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...