Homeಕರ್ನಾಟಕಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು?

- Advertisement -
- Advertisement -

ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಕ್ಕಾಗಿ ಜೀವವನ್ನೇ ಬಲಿಕೊಟ್ಟ ಮಹಾನ್‌ ವ್ಯಕ್ತಿ ಭಗತ್‌ಸಿಂಗ್ ಕುರಿತ ಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ರಚನೆಯಾಗಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಹಲವು ಬದಲಾವಣೆಗಳನ್ನು ಮಾಡಿದೆ. ಕನ್ನಡ ಖ್ಯಾತ ಲೇಖಕರಾದ ಪಿ.ಲಂಕೇಶ್‌, ಸಾ.ರಾ.ಅಬೂಬುಕರ್‌ ಅವರ ಪಠ್ಯಗಳ ಜೊತೆಗೆ ಸರಳ ಸಜ್ಜನಿಕೆಗೆ ಹೆಸರಾದ ಡಾ.ಜಿ.ರಾಮಕೃಷ್ಣ ಅವರು ಬರೆದಿರುವ ‘ಭಗತ್‌ಸಿಂಗ್‌’ ಪಠ್ಯವನ್ನು ಹೊರಗಿಡಲಾಗಿದೆ.

ಜಾತಿವಾದ, ಮತೀಯವಾದವನ್ನು ಪ್ರತಿಪಾದಿಸಿದ, ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ‘ಧ್ವಜ’ (ಭಗವಾಧ್ವಜ)ದ ಕುರಿತು ಮಾತನಾಡುವ ಈ ಪಠ್ಯವನ್ನು ಸೇರಿಸಿಕೊಂಡು, ಆರ್‌ಎಸ್‌ಎಸ್‌ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಭಗತ್‌ಸಿಂಗ್ ಪಠ್ಯವನ್ನು ಕೈಬಿಡಲು ಕಾರಣವೇನು? ಎರಡು ಪುಟಗಳ ಈ ಪುಟ್ಟ ಪಾಠದಲ್ಲಿ ಅಂತಹ ಯಾವ ಆಕ್ಷೇಪಣೀಯ ಅಂಶಗಳಿವೆ? ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು? ನಾಡಿನ ಜನತೆಯೇ ಓದಿ ನಿರ್ಧರಿಸಬೇಕೆಂದು ಜಿ.ರಾಮಕೃಷ್ಣ ಅವರು ಬರೆದಿರುವ ಈ ಪಾಠವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಓದಿ….


ಪಠ್ಯಪೂರಕ ಅಧ್ಯಯನ; ಪುಟ ಸಂಖ್ಯೆ-169


೩. ಭಗತ್‌ಸಿಂಗ್‌‌

– ಡಾ. ಜಿ. ರಾಮಕೃಷ್ಣ

ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯ ಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.

ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್‌ ವಾಲಾಬಾಗ್‌ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು. ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.

ಏಪ್ರಿಲ್‌ ೧೩, ೧೯೧೯ ರಂದು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡಿದ್ದವರಿಗೆ ನಮನ ಸಲ್ಲಿಸಲು ಹೋಗಿದ್ದ ಆ ಬಾಲಕ ಭಗತ್‌ಸಿಂಗ್‌. ಇಂದು ಜಲಿಯನ್‌ ವಾಲಾಬಾಗ್‌ನಲ್ಲಿರುವ ಒಕ್ಕಣೆ ಹೀಗಿದೆ: “ಏಪ್ರಿಲ್‌- ೧೩- ೧೯೧೯ ರಂದು ಬ್ರಿಟೀಷರ ಗುಂಡುಗಳಿಗೆ ಆಹುತಿಯಾದ ಸುಮಾರು ೨೦೦೦ ಮುಗ್ಧ ಹಿಂದೂ, ಸಿಖ್‌ ಮತ್ತು ಮುಸಲ್ಮಾನರ ಸಮ್ಮಿಳಿತ ರಕ್ತದಿ೦ದ ಈ ಪ್ರದೇಶ ಪಾವನವಾಗಿದೆ.” ಭಗತ್‌ಸಿಂಗ್‌ ಅಲ್ಲಿಗೆ ಹೋಗಿ ಅಂತರ್ಮುಖಿಯಾಗಿ ನಿಂತಾಗ ಈ ಭಾವನೆ ಅವನ ಮನಸ್ಸಿನಲ್ಲಿ ಹಾಯುತ್ತಿರಬೇಕು.

ಜಲಿಯನ್‌ ವಾಲಾಬಾಗ್‌ನಲ್ಲಿ ನೆರೆದಿದ್ದ ಜನಕ್ಕೆ ತಾವೊಂದು ರಾಜಕೀಯ ಆಂದೋಳನದಲ್ಲಿ ಭಾಗಿಗಳಾಗಬೇಕೆಂಬ ಆಕಾಂಕ್ಷೆಯಾಗಲಿ ಹುತಾತ್ಮರಾಗಬೇಕೆಂಬ ಅಭಿಲಾಷೆಯಾಗಲಿ ಇದ್ದಿರಲಾರದು. ಜನರಲ್‌‌ ಡಯರ್‌ ಸಹ ತನ್ನ ಪೈಶಾಚಿಕ ಘಾತುಕತೆಯನ್ನುಳಿದ ಬೇರಾವ ಭಾವನೆಯಿಂದಲೂ ಪ್ರೇರಿತನಾಗಿದ್ದ ಎಂದು ನಂಬುವುದು ಕಷ್ಟ. ಕ್ರೂರ ಮಾರ್ಗದಿಂದ ಭಾರತೀಯರನ್ನೂ ಬಗ್ಗು ಬಡಿಯಬಹುದೆಂದು ಅವನ ಎಣಿಕೆ. ಬ್ರಿಟಷ್‌ ಸಾಮ್ರಾಜ್ಯದ ಅನವರತ ಏಳಿಗೆಗೆ ಇದಕ್ಕಿಂತಲೂ ಸುಲಭವಾದ ಮಾರ್ಗವನ್ನು ಚಿಂತಿಸಲು ಅವನು ಅಶಕ್ತನಾಗಿದ್ದ. ಒಟ್ಟು ೧೬೫೦ ಸುತ್ತುಗಳಷ್ಟು ಗುಂಡಿನ ಮಳೆ ಕರೆಯಿಸಿದ್ದ ಅವನು ಹೆಮ್ಮೆಯಿಂದ ಹೇಳಿಕೊಂಡದ್ದು ಇದು “ಒಂದೇ ಒಂದು ಗುಂಡು ಸಹ ದಂಡವಾಗಲಿಲ್ಲ”. ಅಂದು ಪ್ರಾಣ ಕಳೆದುಕೊಂಡವರ ಸಂಖ್ಯೆ ಇದನ್ನು ಖಚಿತಗೊಳಿಸಿತ್ತು.

ಜಲಿಯನ್‌ ವಾಲಾಬಾಗಿನ ರಕ್ತಸಿಕ್ತವಾಗಿದ್ದ ಮಣ್ಣನ್ನು ನಿಧಿಯಂತೆ ಕಾಪಾಡಿಕೊಂಡು ಬಂದಿದ್ದ ಬಾಲಕ ಭಗತ್‌ಸಿಂಗ್‌ ಮುಂದೆ ತನ್ನ ಕ್ರಾಂತಿಕಾರಿ ಗುಂಪಿನ ಸಹಾಯದಿಂದ ಬ್ರಿಟಿಷ್‌ ಸರ್ಕಾರದ ವಿರುದ್ಧ ತನ್ನ ಸೇಡನ್ನು
ತೀರಿಸಿಕೊಳ್ಳುತ್ತಾನೆ. ಇದರ ಫಲವಾಗಿ ಮರಣ ದಂಡನೆಗೆ ಈಡಾಗಿ ತನ್ನ ಸಹಚರರಾದ ಸುಖ್‌ದೇವ್‌, ರಾಜ್‌ಗುರು, ಭಟುಕೇಶ್ವರ ದತ್ತರೊಂದಿಗೆ ಹಸನ್ಮುಖಿಯಾಗಿ ತಾಯಿ ಭಾರತಾಂಬೆಯ ಸ್ವಾತಂತ್ರ್ಯದ ಹಣತೆಗೆ ತೈಲವೆಂಬಂತೆ ವೀರಯೋಧನಾಗಿ ಅಮರನಾದನು.

ಇಂಕ್ವಿಲಾಬ್‌ ಜಿಂದಾಬಾದ್‌…!

ಕೃತಿಕಾರರ ಪರಿಚಯ

ಡಾ. ಜಿ. ರಾಮಕೃಷ್ಣ : ಗಂಪಲಹಳ್ಳಿ ರಾಮಕೃಷ್ಣರವರು ಕ್ರಿ.ಶ. ೧೯೩೯ರಲ್ಲಿ ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿಯ ಕೆಂಪಸಾಗರದಲ್ಲಿ ಜನಿಸಿದರು. ಮಹಾರಾಷ್ಟ್ರದ ಅಂಬೇಡ್ಕರ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ದೇವಿಪ್ರಸಾದ್‌ ಮತ್ತು ಲೋಕಾಯತ ದರ್ಶನ, ಭಗತ್‌ಸಿಂಗ್‌, ಭೂಪೇಶಸುಪ್ತ, ಚೆಗೆವಾರ, ಲೆನಿನ್‌, ಅನುವಾದ – ಬಾ ನೊಣವೇ, ವಾನರನಿಂದ ಮಾನವ ದರ್ಶನ ಮತ್ತು ಹಲವಾರು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಪ್ರಸ್ತುತ ಪಾಠವನ್ನು ಜಿ. ರಾಮಕೃಷ್ಣರ ‘ಭಗತ್‌ಸಿಂಗ್‌’ ಎಂಬ ಜೀವನ ಚರಿತ್ರೆಯಿಂದ ಆರಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...