Homeಕರ್ನಾಟಕಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು?

- Advertisement -
- Advertisement -

ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಕ್ಕಾಗಿ ಜೀವವನ್ನೇ ಬಲಿಕೊಟ್ಟ ಮಹಾನ್‌ ವ್ಯಕ್ತಿ ಭಗತ್‌ಸಿಂಗ್ ಕುರಿತ ಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ರಚನೆಯಾಗಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಹಲವು ಬದಲಾವಣೆಗಳನ್ನು ಮಾಡಿದೆ. ಕನ್ನಡ ಖ್ಯಾತ ಲೇಖಕರಾದ ಪಿ.ಲಂಕೇಶ್‌, ಸಾ.ರಾ.ಅಬೂಬುಕರ್‌ ಅವರ ಪಠ್ಯಗಳ ಜೊತೆಗೆ ಸರಳ ಸಜ್ಜನಿಕೆಗೆ ಹೆಸರಾದ ಡಾ.ಜಿ.ರಾಮಕೃಷ್ಣ ಅವರು ಬರೆದಿರುವ ‘ಭಗತ್‌ಸಿಂಗ್‌’ ಪಠ್ಯವನ್ನು ಹೊರಗಿಡಲಾಗಿದೆ.

ಜಾತಿವಾದ, ಮತೀಯವಾದವನ್ನು ಪ್ರತಿಪಾದಿಸಿದ, ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ‘ಧ್ವಜ’ (ಭಗವಾಧ್ವಜ)ದ ಕುರಿತು ಮಾತನಾಡುವ ಈ ಪಠ್ಯವನ್ನು ಸೇರಿಸಿಕೊಂಡು, ಆರ್‌ಎಸ್‌ಎಸ್‌ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಭಗತ್‌ಸಿಂಗ್ ಪಠ್ಯವನ್ನು ಕೈಬಿಡಲು ಕಾರಣವೇನು? ಎರಡು ಪುಟಗಳ ಈ ಪುಟ್ಟ ಪಾಠದಲ್ಲಿ ಅಂತಹ ಯಾವ ಆಕ್ಷೇಪಣೀಯ ಅಂಶಗಳಿವೆ? ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು? ನಾಡಿನ ಜನತೆಯೇ ಓದಿ ನಿರ್ಧರಿಸಬೇಕೆಂದು ಜಿ.ರಾಮಕೃಷ್ಣ ಅವರು ಬರೆದಿರುವ ಈ ಪಾಠವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಓದಿ….


ಪಠ್ಯಪೂರಕ ಅಧ್ಯಯನ; ಪುಟ ಸಂಖ್ಯೆ-169


೩. ಭಗತ್‌ಸಿಂಗ್‌‌

– ಡಾ. ಜಿ. ರಾಮಕೃಷ್ಣ

ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯ ಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.

ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್‌ ವಾಲಾಬಾಗ್‌ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು. ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.

ಏಪ್ರಿಲ್‌ ೧೩, ೧೯೧೯ ರಂದು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡಿದ್ದವರಿಗೆ ನಮನ ಸಲ್ಲಿಸಲು ಹೋಗಿದ್ದ ಆ ಬಾಲಕ ಭಗತ್‌ಸಿಂಗ್‌. ಇಂದು ಜಲಿಯನ್‌ ವಾಲಾಬಾಗ್‌ನಲ್ಲಿರುವ ಒಕ್ಕಣೆ ಹೀಗಿದೆ: “ಏಪ್ರಿಲ್‌- ೧೩- ೧೯೧೯ ರಂದು ಬ್ರಿಟೀಷರ ಗುಂಡುಗಳಿಗೆ ಆಹುತಿಯಾದ ಸುಮಾರು ೨೦೦೦ ಮುಗ್ಧ ಹಿಂದೂ, ಸಿಖ್‌ ಮತ್ತು ಮುಸಲ್ಮಾನರ ಸಮ್ಮಿಳಿತ ರಕ್ತದಿ೦ದ ಈ ಪ್ರದೇಶ ಪಾವನವಾಗಿದೆ.” ಭಗತ್‌ಸಿಂಗ್‌ ಅಲ್ಲಿಗೆ ಹೋಗಿ ಅಂತರ್ಮುಖಿಯಾಗಿ ನಿಂತಾಗ ಈ ಭಾವನೆ ಅವನ ಮನಸ್ಸಿನಲ್ಲಿ ಹಾಯುತ್ತಿರಬೇಕು.

ಜಲಿಯನ್‌ ವಾಲಾಬಾಗ್‌ನಲ್ಲಿ ನೆರೆದಿದ್ದ ಜನಕ್ಕೆ ತಾವೊಂದು ರಾಜಕೀಯ ಆಂದೋಳನದಲ್ಲಿ ಭಾಗಿಗಳಾಗಬೇಕೆಂಬ ಆಕಾಂಕ್ಷೆಯಾಗಲಿ ಹುತಾತ್ಮರಾಗಬೇಕೆಂಬ ಅಭಿಲಾಷೆಯಾಗಲಿ ಇದ್ದಿರಲಾರದು. ಜನರಲ್‌‌ ಡಯರ್‌ ಸಹ ತನ್ನ ಪೈಶಾಚಿಕ ಘಾತುಕತೆಯನ್ನುಳಿದ ಬೇರಾವ ಭಾವನೆಯಿಂದಲೂ ಪ್ರೇರಿತನಾಗಿದ್ದ ಎಂದು ನಂಬುವುದು ಕಷ್ಟ. ಕ್ರೂರ ಮಾರ್ಗದಿಂದ ಭಾರತೀಯರನ್ನೂ ಬಗ್ಗು ಬಡಿಯಬಹುದೆಂದು ಅವನ ಎಣಿಕೆ. ಬ್ರಿಟಷ್‌ ಸಾಮ್ರಾಜ್ಯದ ಅನವರತ ಏಳಿಗೆಗೆ ಇದಕ್ಕಿಂತಲೂ ಸುಲಭವಾದ ಮಾರ್ಗವನ್ನು ಚಿಂತಿಸಲು ಅವನು ಅಶಕ್ತನಾಗಿದ್ದ. ಒಟ್ಟು ೧೬೫೦ ಸುತ್ತುಗಳಷ್ಟು ಗುಂಡಿನ ಮಳೆ ಕರೆಯಿಸಿದ್ದ ಅವನು ಹೆಮ್ಮೆಯಿಂದ ಹೇಳಿಕೊಂಡದ್ದು ಇದು “ಒಂದೇ ಒಂದು ಗುಂಡು ಸಹ ದಂಡವಾಗಲಿಲ್ಲ”. ಅಂದು ಪ್ರಾಣ ಕಳೆದುಕೊಂಡವರ ಸಂಖ್ಯೆ ಇದನ್ನು ಖಚಿತಗೊಳಿಸಿತ್ತು.

ಜಲಿಯನ್‌ ವಾಲಾಬಾಗಿನ ರಕ್ತಸಿಕ್ತವಾಗಿದ್ದ ಮಣ್ಣನ್ನು ನಿಧಿಯಂತೆ ಕಾಪಾಡಿಕೊಂಡು ಬಂದಿದ್ದ ಬಾಲಕ ಭಗತ್‌ಸಿಂಗ್‌ ಮುಂದೆ ತನ್ನ ಕ್ರಾಂತಿಕಾರಿ ಗುಂಪಿನ ಸಹಾಯದಿಂದ ಬ್ರಿಟಿಷ್‌ ಸರ್ಕಾರದ ವಿರುದ್ಧ ತನ್ನ ಸೇಡನ್ನು
ತೀರಿಸಿಕೊಳ್ಳುತ್ತಾನೆ. ಇದರ ಫಲವಾಗಿ ಮರಣ ದಂಡನೆಗೆ ಈಡಾಗಿ ತನ್ನ ಸಹಚರರಾದ ಸುಖ್‌ದೇವ್‌, ರಾಜ್‌ಗುರು, ಭಟುಕೇಶ್ವರ ದತ್ತರೊಂದಿಗೆ ಹಸನ್ಮುಖಿಯಾಗಿ ತಾಯಿ ಭಾರತಾಂಬೆಯ ಸ್ವಾತಂತ್ರ್ಯದ ಹಣತೆಗೆ ತೈಲವೆಂಬಂತೆ ವೀರಯೋಧನಾಗಿ ಅಮರನಾದನು.

ಇಂಕ್ವಿಲಾಬ್‌ ಜಿಂದಾಬಾದ್‌…!

ಕೃತಿಕಾರರ ಪರಿಚಯ

ಡಾ. ಜಿ. ರಾಮಕೃಷ್ಣ : ಗಂಪಲಹಳ್ಳಿ ರಾಮಕೃಷ್ಣರವರು ಕ್ರಿ.ಶ. ೧೯೩೯ರಲ್ಲಿ ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿಯ ಕೆಂಪಸಾಗರದಲ್ಲಿ ಜನಿಸಿದರು. ಮಹಾರಾಷ್ಟ್ರದ ಅಂಬೇಡ್ಕರ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ದೇವಿಪ್ರಸಾದ್‌ ಮತ್ತು ಲೋಕಾಯತ ದರ್ಶನ, ಭಗತ್‌ಸಿಂಗ್‌, ಭೂಪೇಶಸುಪ್ತ, ಚೆಗೆವಾರ, ಲೆನಿನ್‌, ಅನುವಾದ – ಬಾ ನೊಣವೇ, ವಾನರನಿಂದ ಮಾನವ ದರ್ಶನ ಮತ್ತು ಹಲವಾರು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಪ್ರಸ್ತುತ ಪಾಠವನ್ನು ಜಿ. ರಾಮಕೃಷ್ಣರ ‘ಭಗತ್‌ಸಿಂಗ್‌’ ಎಂಬ ಜೀವನ ಚರಿತ್ರೆಯಿಂದ ಆರಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...