Homeಕರ್ನಾಟಕಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು?

- Advertisement -
- Advertisement -

ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಕ್ಕಾಗಿ ಜೀವವನ್ನೇ ಬಲಿಕೊಟ್ಟ ಮಹಾನ್‌ ವ್ಯಕ್ತಿ ಭಗತ್‌ಸಿಂಗ್ ಕುರಿತ ಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ರಚನೆಯಾಗಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಹಲವು ಬದಲಾವಣೆಗಳನ್ನು ಮಾಡಿದೆ. ಕನ್ನಡ ಖ್ಯಾತ ಲೇಖಕರಾದ ಪಿ.ಲಂಕೇಶ್‌, ಸಾ.ರಾ.ಅಬೂಬುಕರ್‌ ಅವರ ಪಠ್ಯಗಳ ಜೊತೆಗೆ ಸರಳ ಸಜ್ಜನಿಕೆಗೆ ಹೆಸರಾದ ಡಾ.ಜಿ.ರಾಮಕೃಷ್ಣ ಅವರು ಬರೆದಿರುವ ‘ಭಗತ್‌ಸಿಂಗ್‌’ ಪಠ್ಯವನ್ನು ಹೊರಗಿಡಲಾಗಿದೆ.

ಜಾತಿವಾದ, ಮತೀಯವಾದವನ್ನು ಪ್ರತಿಪಾದಿಸಿದ, ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ‘ಧ್ವಜ’ (ಭಗವಾಧ್ವಜ)ದ ಕುರಿತು ಮಾತನಾಡುವ ಈ ಪಠ್ಯವನ್ನು ಸೇರಿಸಿಕೊಂಡು, ಆರ್‌ಎಸ್‌ಎಸ್‌ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಭಗತ್‌ಸಿಂಗ್ ಪಠ್ಯವನ್ನು ಕೈಬಿಡಲು ಕಾರಣವೇನು? ಎರಡು ಪುಟಗಳ ಈ ಪುಟ್ಟ ಪಾಠದಲ್ಲಿ ಅಂತಹ ಯಾವ ಆಕ್ಷೇಪಣೀಯ ಅಂಶಗಳಿವೆ? ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು? ನಾಡಿನ ಜನತೆಯೇ ಓದಿ ನಿರ್ಧರಿಸಬೇಕೆಂದು ಜಿ.ರಾಮಕೃಷ್ಣ ಅವರು ಬರೆದಿರುವ ಈ ಪಾಠವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಓದಿ….


ಪಠ್ಯಪೂರಕ ಅಧ್ಯಯನ; ಪುಟ ಸಂಖ್ಯೆ-169


೩. ಭಗತ್‌ಸಿಂಗ್‌‌

– ಡಾ. ಜಿ. ರಾಮಕೃಷ್ಣ

ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯ ಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.

ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್‌ ವಾಲಾಬಾಗ್‌ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು. ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.

ಏಪ್ರಿಲ್‌ ೧೩, ೧೯೧೯ ರಂದು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡಿದ್ದವರಿಗೆ ನಮನ ಸಲ್ಲಿಸಲು ಹೋಗಿದ್ದ ಆ ಬಾಲಕ ಭಗತ್‌ಸಿಂಗ್‌. ಇಂದು ಜಲಿಯನ್‌ ವಾಲಾಬಾಗ್‌ನಲ್ಲಿರುವ ಒಕ್ಕಣೆ ಹೀಗಿದೆ: “ಏಪ್ರಿಲ್‌- ೧೩- ೧೯೧೯ ರಂದು ಬ್ರಿಟೀಷರ ಗುಂಡುಗಳಿಗೆ ಆಹುತಿಯಾದ ಸುಮಾರು ೨೦೦೦ ಮುಗ್ಧ ಹಿಂದೂ, ಸಿಖ್‌ ಮತ್ತು ಮುಸಲ್ಮಾನರ ಸಮ್ಮಿಳಿತ ರಕ್ತದಿ೦ದ ಈ ಪ್ರದೇಶ ಪಾವನವಾಗಿದೆ.” ಭಗತ್‌ಸಿಂಗ್‌ ಅಲ್ಲಿಗೆ ಹೋಗಿ ಅಂತರ್ಮುಖಿಯಾಗಿ ನಿಂತಾಗ ಈ ಭಾವನೆ ಅವನ ಮನಸ್ಸಿನಲ್ಲಿ ಹಾಯುತ್ತಿರಬೇಕು.

ಜಲಿಯನ್‌ ವಾಲಾಬಾಗ್‌ನಲ್ಲಿ ನೆರೆದಿದ್ದ ಜನಕ್ಕೆ ತಾವೊಂದು ರಾಜಕೀಯ ಆಂದೋಳನದಲ್ಲಿ ಭಾಗಿಗಳಾಗಬೇಕೆಂಬ ಆಕಾಂಕ್ಷೆಯಾಗಲಿ ಹುತಾತ್ಮರಾಗಬೇಕೆಂಬ ಅಭಿಲಾಷೆಯಾಗಲಿ ಇದ್ದಿರಲಾರದು. ಜನರಲ್‌‌ ಡಯರ್‌ ಸಹ ತನ್ನ ಪೈಶಾಚಿಕ ಘಾತುಕತೆಯನ್ನುಳಿದ ಬೇರಾವ ಭಾವನೆಯಿಂದಲೂ ಪ್ರೇರಿತನಾಗಿದ್ದ ಎಂದು ನಂಬುವುದು ಕಷ್ಟ. ಕ್ರೂರ ಮಾರ್ಗದಿಂದ ಭಾರತೀಯರನ್ನೂ ಬಗ್ಗು ಬಡಿಯಬಹುದೆಂದು ಅವನ ಎಣಿಕೆ. ಬ್ರಿಟಷ್‌ ಸಾಮ್ರಾಜ್ಯದ ಅನವರತ ಏಳಿಗೆಗೆ ಇದಕ್ಕಿಂತಲೂ ಸುಲಭವಾದ ಮಾರ್ಗವನ್ನು ಚಿಂತಿಸಲು ಅವನು ಅಶಕ್ತನಾಗಿದ್ದ. ಒಟ್ಟು ೧೬೫೦ ಸುತ್ತುಗಳಷ್ಟು ಗುಂಡಿನ ಮಳೆ ಕರೆಯಿಸಿದ್ದ ಅವನು ಹೆಮ್ಮೆಯಿಂದ ಹೇಳಿಕೊಂಡದ್ದು ಇದು “ಒಂದೇ ಒಂದು ಗುಂಡು ಸಹ ದಂಡವಾಗಲಿಲ್ಲ”. ಅಂದು ಪ್ರಾಣ ಕಳೆದುಕೊಂಡವರ ಸಂಖ್ಯೆ ಇದನ್ನು ಖಚಿತಗೊಳಿಸಿತ್ತು.

ಜಲಿಯನ್‌ ವಾಲಾಬಾಗಿನ ರಕ್ತಸಿಕ್ತವಾಗಿದ್ದ ಮಣ್ಣನ್ನು ನಿಧಿಯಂತೆ ಕಾಪಾಡಿಕೊಂಡು ಬಂದಿದ್ದ ಬಾಲಕ ಭಗತ್‌ಸಿಂಗ್‌ ಮುಂದೆ ತನ್ನ ಕ್ರಾಂತಿಕಾರಿ ಗುಂಪಿನ ಸಹಾಯದಿಂದ ಬ್ರಿಟಿಷ್‌ ಸರ್ಕಾರದ ವಿರುದ್ಧ ತನ್ನ ಸೇಡನ್ನು
ತೀರಿಸಿಕೊಳ್ಳುತ್ತಾನೆ. ಇದರ ಫಲವಾಗಿ ಮರಣ ದಂಡನೆಗೆ ಈಡಾಗಿ ತನ್ನ ಸಹಚರರಾದ ಸುಖ್‌ದೇವ್‌, ರಾಜ್‌ಗುರು, ಭಟುಕೇಶ್ವರ ದತ್ತರೊಂದಿಗೆ ಹಸನ್ಮುಖಿಯಾಗಿ ತಾಯಿ ಭಾರತಾಂಬೆಯ ಸ್ವಾತಂತ್ರ್ಯದ ಹಣತೆಗೆ ತೈಲವೆಂಬಂತೆ ವೀರಯೋಧನಾಗಿ ಅಮರನಾದನು.

ಇಂಕ್ವಿಲಾಬ್‌ ಜಿಂದಾಬಾದ್‌…!

ಕೃತಿಕಾರರ ಪರಿಚಯ

ಡಾ. ಜಿ. ರಾಮಕೃಷ್ಣ : ಗಂಪಲಹಳ್ಳಿ ರಾಮಕೃಷ್ಣರವರು ಕ್ರಿ.ಶ. ೧೯೩೯ರಲ್ಲಿ ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿಯ ಕೆಂಪಸಾಗರದಲ್ಲಿ ಜನಿಸಿದರು. ಮಹಾರಾಷ್ಟ್ರದ ಅಂಬೇಡ್ಕರ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ದೇವಿಪ್ರಸಾದ್‌ ಮತ್ತು ಲೋಕಾಯತ ದರ್ಶನ, ಭಗತ್‌ಸಿಂಗ್‌, ಭೂಪೇಶಸುಪ್ತ, ಚೆಗೆವಾರ, ಲೆನಿನ್‌, ಅನುವಾದ – ಬಾ ನೊಣವೇ, ವಾನರನಿಂದ ಮಾನವ ದರ್ಶನ ಮತ್ತು ಹಲವಾರು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಪ್ರಸ್ತುತ ಪಾಠವನ್ನು ಜಿ. ರಾಮಕೃಷ್ಣರ ‘ಭಗತ್‌ಸಿಂಗ್‌’ ಎಂಬ ಜೀವನ ಚರಿತ್ರೆಯಿಂದ ಆರಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...