HomeಮುಖಪುಟCloud Seeding: ಮೋಡ ಬಿತ್ತನೆ ಎಂದರೇನು? ಇದು ನಿಜಕ್ಕೂ ಕೆಲಸ ಮಾಡುತ್ತದೆಯೇ? ದುಷ್ಪರಿಣಾಮಗಳೇನು?

Cloud Seeding: ಮೋಡ ಬಿತ್ತನೆ ಎಂದರೇನು? ಇದು ನಿಜಕ್ಕೂ ಕೆಲಸ ಮಾಡುತ್ತದೆಯೇ? ದುಷ್ಪರಿಣಾಮಗಳೇನು?

ತೀವ್ರ ಬರದಿಂದ ತತ್ತರಿಸಿದ್ದ ಥೈಲೆಂಡ್ ದೇಶದ ರಾಜ 1955ರಲ್ಲಿ ರಾಯಲ್ ರೈನ್‌ಮೇಕಿಂಗ್ ಪ್ರಾಜೆಕ್ಟ್ ಶುರು ಮಾಡಿದರು. 1983ರಲ್ಲಿ ಭಾರತವು ಮೋಡಬಿತ್ತನೆಗೆ ಮುಂದಾಯಿತು.

- Advertisement -
- Advertisement -

ಕರ್ನಾಟಕದಲ್ಲಿ ಮುಂಗಾಳು ವಿಳಂಬವಾಗಿದೆ. ಜೂನ್ ಮೊದಲ ವಾರದಲ್ಲಿಯೇ ಸುರಿಯಬೇಕಿದ್ದ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದೆ. ರಾಜ್ಯದ ಜಲಾಶಯಗಳು ಬರಿದಾಗುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಈ ಸಮಸ್ಯೆಗೆ ಪರಿಹಾರ ಹುಡುಕಲು ಸರ್ಕಾರ ಮೋಡ ಬಿತ್ತನೆಯ ಮೊರೆ ಹೋಗಲು ನಿರ್ಧರಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಮೋಡ ಬಿತ್ತನೆಯ ಮಾತುಗಳನ್ನಾಡಿದ್ದಾರೆ. ನಿಜಕ್ಕೂ ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ? ಮೋಡ ಬಿತ್ತನೆ ಮಾಡಿ ಮಳೆ ಬರಿಸುವುದಾದರೆ ಇಷ್ಟು ದಿನ ಬರ ಇದ್ದಾಗ ಏಕೆ ಮಾಡಲಿಲ್ಲ? ಮನುಷ್ಯರಿಗೆ ಪ್ರಕೃತಿಯನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಮೂಡುತ್ತವೆ. ಹಾಗಾದರೆ ಮೋಡ ಬಿತ್ತನೆ (Cloud Seeding) ಎಂದರೇನು? ಇದು ನಿಜಕ್ಕೂ ಕೆಲಸ ಮಾಡುತ್ತದೆಯೇ? ಇದರ ದುಷ್ಪರಿಣಾಮಗಳೇನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.

ಮೋಡಗಳು

ನಾವು ಮೋಡ ಬಿತ್ತನೆ ಬಗ್ಗೆ ತಿಳಿದುಕೊಳ್ಳುವ ಮುನ್ನ ಮೋಡ ಮತ್ತು ಮಳೆಯ ಬಗ್ಗೆ ತಿಳಿದುಕೊಳ್ಳೋಣ. ನಮ್ಮ ಭೂಮಿಯ ಮೇಲೆ ನೀರು ಮೂರು ರೀತಿಯಲ್ಲಿ ಅಸ್ತಿತ್ವದಲ್ಲಿದೆ. ಆವಿಯ (Vapor) ರೂಪದಲ್ಲಿ, ನೀರಿನ (Water) ರೂಪದಲ್ಲಿ ಮತ್ತು ಮಂಜುಗೆಡ್ಡೆಯ (Ice) ರೂಪದಲ್ಲಿ ನೀರು ಇರುತ್ತದೆ. ವಾತಾವರಣದಲ್ಲಿನ ಆವಿಯು ನಿಧಾನವಾಗಿ ಮೇಲಕ್ಕೆ ಚಲಿಸುತ್ತಿರುತ್ತದೆ. ಅದು ಭೂಮಿಯಿಂದ ಮೇಲು ಮೇಲಕ್ಕೆ ಚಲಿಸುದಂತೆ ತಂಪಾದ ವಾತಾವರಣದ ಕಾರಣಕ್ಕೆ ಘನೀಕರಣಗೊಂಡು (Condensation) ಆವಿಯು ಸಣ್ಣ ಸಣ್ಣ ನೀರಿನ ಕಣಗಳಾಗಿ ಬದಲಾಗುತ್ತದೆ. ಆ ನೀರಿನ ಕಣಗಳು ಒಂದಕ್ಕೊಂದು ಸೇರಿ ಕೋಟ್ಯಾಂತರ ಕಣಗಳಾಗಿ ಮೋಡಗಳಾಗುತ್ತವೆ. ಈ ಮೋಡಗಳು ಮತ್ತಷ್ಟು ಮೇಲಕ್ಕೆ ಹೋದಂತೆ ಮತ್ತಷ್ಟು ತಂಪಾದ ವಾತವಾರಣ ಇರುವುದರಿಂದ ಮತ್ತುಷ್ಟು ಗಟ್ಟಿಯಾಗಿ (freeze) ಸಣ್ಣ ಸಣ್ಣ ಮಂಜುಗೆಡ್ಡೆಯ ಹರಳುಗಳಾಗಿ ಪರಿವರ್ತನೆಯಾಗುತ್ತವೆ. ಇವು ಎತ್ತರದಲ್ಲಿರುವ ಮೋಡಗಳಾಗಿವೆ.

ಮಳೆ ಹೇಗೆ ಬರುತ್ತದೆ?

ಮೋಡಗಳಲ್ಲಿ ಸಣ್ಣ ಸಣ್ಣ ನೀರಿನ ಹನಿಗಳು ಸೇರಿ ದೊಡ್ಡ ಹನಿಗಳಾಗುತ್ತವೆ. ಅವು ಮತ್ತಷ್ಟು ಮೇಲೆ ಹೋದಾಗ ತಂಪಾದ ವಾತಾವರಣದಿಂದಾಗಿ ಘನೀಕರಿಸಿ ಮಂಜುಗೆಡ್ಡೆಯ ಹರಳುಗಳಾಗುತ್ತವೆ. ಸಣ್ಣ ಸಣ್ಣ ಮಂಜಿನ ಹರಳುಗಳು ಸೇರಿ ದೊಡ್ಡ ಹರಳುಗಳಾಗುತ್ತವೆ. ಈ ಪ್ರಕ್ರಿಯೆ ಮುಂದುವರಿದಂತೆ ಅವುಗಳ ಭಾರ ತುಂಬಾ ಹೆಚ್ಚಾಗಿ ಭೂಮಿಗೆ ಬೀಳಲು ಆರಂಭಿಸುತ್ತವೆ. ಆ ಸಂದರ್ಭದಲ್ಲಿ ಭೂಮಿಯ ತಾಪಮಾನ ತಂಪಾಗಿದ್ದರೆ ಹಿಮದ ರೀತಿ ಬೀಳುತ್ತವೆ. ಉಷ್ಣಾಂಶ ಹೆಚ್ಚಾಗಿದ್ದರೆ ಕರಗಿ ನೀರಾಗಿ ಬೀಳುತ್ತದೆ. ಈ ರೀತಿಯಾಗಿ ಮಳೆ ಬರುವುದನ್ನು ನಾವು ಕಾಣಬಹುದು. ಭೂಮಿಯ ಉಷ್ಣಾಂಶ ತೀರಾ ಕಡಿಮೆಯಿದ್ದಾಗ ನಾವು ಆಲೀಕಲ್ಲು (ಮಂಜು ಕರಗದೆ) ಬೀಳುವುದನ್ನು ಸಹ ನೋಡಬಹುದು.

ಮೋಡ ಬಿತ್ತನೆ

ನಮ್ಮ ಬಾಯಿಂದ ಚಳಿಗಾಲದಲ್ಲಿ ಆವಿ ಬರುವುದನ್ನು ನೀವು ಗಮನಿಸಿರಬಹುದು. ಅವು ಘನೀಕರಿಸಿ ಸಣ್ಣ ಸಣ್ಣ ಕಣ್ಣಿಗೆ ಕಾಣದ ನೀರಿನ ಕಣಕಗಳಾಗುತ್ತವೆ. 1943ರಲ್ಲಿ ಅಮೆರಿಕದ ವಿಜ್ಞಾನಿ ಡಾ.ವಿನ್ಸಂಟ್ ಶೇಫರ್ ಎಂಬುವವರು ಒಂದು ಪ್ರಯೋಗ ಮಾಡಿದರು. ತಮ್ಮ ಮನೆಯ ಪ್ರಿಡ್ಜ್‌ನಂತಹ ಉಪಕರಣದಲ್ಲಿ ಆಕಸ್ಮಿಕವಾಗಿ ಬಾಯಿಯಿಂದ ಆವಿಯನ್ನು ಊದಿದಾಗಿ ಅಲ್ಲಿನ ತಂಪಾದ ವಾತವಾರಣಕ್ಕೆ ಅವು ಬೇಗ ಘನೀಕರಿಸಿ ನೀರು ಆಗುವುದನ್ನು ಅವರು ಗಮನಿಸಿದರು. ಮತ್ತಷ್ಟು ತಂಪು ಮಾಡಿದರೆ ಆದಷ್ಟು ಬೇಗ ಮಂಜುಗೆಡ್ಡೆಯಾಗುತ್ತದೆ ಎಂಬುದನ್ನು ಕಂಡುಕೊಂಡರು. ಅದೇ ಸೂತ್ರವನ್ನು ಮೋಡಗಳು ಮೇಲೂ ಪ್ರಯೋಗಿಸಿದರೆ ಅಂದರೆ ಅವುಗಳನ್ನು ಆದಷ್ಟು ಬೇಗ ತಂಪಿನಿಂದ ಘನೀಕರಿಸಿದರೆ ನೀರಿನ ಕಣಗಳು ಬೇಗ ಮಂಜುಗೆಡ್ಡೆಯಾಗಿ ಪರಿವರ್ತನೆಯಾಗಿ ಭಾರ ತಡೆಯಲಾರದೆ ಮಳೆಯಾಗಿ ಸುರಿಯುತ್ತದೆ ಎಂಬುದನ್ನು ಕಂಡುಕೊಂಡರು.

ಅಂದರೆ ಮಳೆ ಬರುವುದು ಈ ಸರಣಿಯ ಕೊನೆಯ ಪ್ರಕ್ರಿಯೆಯ ಭಾಗ. ಹಾಗಾಗಿ ಡ್ರೈ ಐಸ್ (ಕಾರ್ಬನ್ ಡೈ ಆಕ್ಸೈಡ್‌ನ ಘನ ರೂಪ, ಇದನ್ನು ಫ್ರಿಡ್ಜ್‌ಗಳಲ್ಲಿ ಬಳಸುತ್ತಾರೆ) ಬಳಸಿದರೆ ಈ ಪ್ರಕ್ರಿಯೆ ಬೇಗ ಆಗುತ್ತದೆ ಎಂದು ಡಾ. ವಿನ್ಸಂಟ್ ಶೇಫರ್ ಗ್ರಹಿಸಿದರು. ಹಾಗಾಗಿ ಅವರು ಹತ್ತಿರದಲ್ಲಿರುವ ಮೋಡಗಳನ್ನು ಡ್ರೈ ಐಸ್ ಬಳಸಿ ಮತ್ತುಷ್ಟು ತಂಪುಕರೀಸಿದರೆ ನೀರಿನ ಕಣಗಳು ಒಟ್ಟುಗೂಡಿ ಬೇಗನೇ ಮಂಜುಗೆಡ್ಡೆಗಳಾಗಿ ಬದಲಾಗಿ ಮಳೆಯಾಗಿ ಸುರಿಯುತ್ತದೆ ಎಂಬುದನ್ನು ಅವರು 13 ನವೆಂಬರ್ 1946ರಂದು ಪ್ರಯೋಗ ಮಾಡಿದರು. ಅವರು 2.5 ಕೆಜಿಯ ಡ್ರೈ ಐಸ್‌ಅನ್ನು ವಿಮಾನದಲ್ಲಿ ಹೊಯ್ದು ನ್ಯೂಯಾರ್ಕ್‌ನ ಮೌಂಟ್ ಗ್ರೇಲಾಕ್ ಎಂಬಲ್ಲಿ ಮೋಡಗಳ ಮೇಲೆ ಐಸ್‌ ಅನ್ನು ಪುಡಿ ಮಾಡಿ ಎಸೆದರು. ಆಗ ಮೋಡಗಳು ಘನೀಕರಿಸಿ ಸ್ವಲ್ಪ ಹೊತ್ತಿನಲ್ಲೇ ಮಳೆ ಸುರಿಸಿದವು! ಈ ರೀತಿಯಾಗಿ ಡಾ.ವಿನ್ಸಂಟ್ ಮೋಡಬಿತ್ತನೆಯನ್ನು ಮೊದಲ ಬಾರಿಗೆ ಕಂಡು ಹಿಡಿದರು.

ಅವರ ನಂತರ ಮತ್ತೊಬ್ಬ ವಿಜ್ಞಾನಿ ಡಾ.ಬೇರ್ಹಾಡ್ ವೋಂಗೌಟ್ ಎಂಬುವವರು ಮತ್ತೊಂದು ದೃಷ್ಟಿಕೋನದಲ್ಲಿ ಮೋಡಬಿತ್ತನೆ ಮೇಲೆ ಕೆಲಸ ಮಾಡಿದರು. ಅವರು ಆವಿಯು ನೀರಿನ ಕಣಗಳಾಗಿ ಬದಲಾಗಲು ಒಂದು ಮೇಲ್ಮೈ ಬೇಕು ಎಂಬುದನ್ನು ನಿರೂಪಿಸಿದರು. ಭೂಮಿಯ ಮೇಲಿನ ಧೂಳಿನ ಕಣಗಳು ಮೇಲಕ್ಕೆ ಚಲಿಸಿ ಮೇಲ್ಮೈ ರೀತಿ ವರ್ತಿಸಿ ನೀರು ಘನೀಕರಿಸಲು ಸಹಾಯ ಮಾಡುತ್ತವೆ ಎಂಬುದನ್ನು ಕಂಡುಕೊಂಡರು. ಹಾಗಾಗಿ ಅದಕ್ಕಿಂತ ಉತ್ತಮ ರೀತಿಯ ಮೇಲ್ಮೈಯನ್ನು ರೂಪಿಸಿದ್ದಲ್ಲಿ ಆದಷ್ಟು ಬೇಗ ಘನೀಕರಿಸಿ ಮಳೆ ಬರಿಸಬಹುದು ಎಂಬುದು ಇವರ ವಾದವಾಗಿತ್ತು. (ಸ್ನಾನದ ಮನೆಯಲ್ಲಿ ಸುತ್ತಲೂ ಗ್ಲಾಸ್‌ ಇದ್ದಲ್ಲಿ ಬಿಸಿ ನೀರಿನ ಸ್ನಾನದ ಸಮಯದಲ್ಲಿ ಸುತ್ತಲೂ ಆವಿಯು ಘನೀಕರಿಸುವುದನ್ನು, ಕನ್ನಡಿ ಇದ್ದಲ್ಲಿ ಅಲ್ಲಿ ನೀರು ಹರಿಯುವುದನ್ನು ನಾವು ಗಮನಿಸಿದ್ದೇವೆ).

ಡಾ.ಬೇರ್ಹಾಡ್ ವೋಂಗೌಟ್ ಸಿಲ್ವರ್ ಅಯೋಡೈಡ್ ಅನ್ನು ಮೋಡಗಳ ಮೇಲೆ ಸೇರಿಸಿ ಆ ಮೇಲ್ಮೈಯನ್ನು ಸೃಷ್ಟಿಸಬಹುದು ಎಂಬುದನ್ನು ಕಂಡು ಹಿಡಿದರು. ಅದು ಆವಿಯನ್ನು ಬೇಗ ಆಕರ್ಷಿಸುವುದಲ್ಲದೇ ಅದನ್ನು ಶೀಘ್ರವಾಗಿ ನೀರಿನ ಕಣಗಳಾಗಿ ಬದಲಿಸುತ್ತದೆ. ಕಣಗಳು ಬೇಗ ಮಂಜಾಗುತ್ತವೆ. ಹಾಗಾಗಿ ಸಿಲ್ವರ್ ಅಯೋಡೈಡ್ ಅನ್ನು ಮೋಡಗಳ ಮೇಲೆ ಸಿಂಪಡಿಸಿದರೆ ಅದು ಮೇಲ್ಮೈಯಾಗಿ ಕೆಲಸ ಮಾಡಿ ನೀರಿನ ಕಣಗಳನ್ನು ಆಕರ್ಷಿಸಿ ಮಳೆ ಸುರಿಸುತ್ತದೆ ಎಂದು ಕಂಡು ಹಿಡಿದರು ಮತ್ತು ಪ್ರಯೋಗ ಮಾಡಿದರು.

ಆದರೆ ಈ ಮೇಲಿನ ಎರಡು ವಿಧಾನಗಳು ಸಹ ಬಹಳ ಖರ್ಚುದಾಯಕವಾದವು. ರಾಕೆಟ್ ಉಡಾಯಿಸಿ ಮಳೆ ಬರಿಸುವ ಪ್ರಯೋಗಗಳೂ ನಡೆದಿವೆ. ತೀವ್ರ ಬರದಿಂದ ತತ್ತರಿಸಿದ್ದ ಥೈಲೆಂಡ್ ದೇಶದ ರಾಜ 1955ರಲ್ಲಿ ರಾಯಲ್ ರೈನ್‌ಮೇಕಿಂಗ್ ಪ್ರಾಜೆಕ್ಟ್ ಶುರು ಮಾಡಿದರು. 1983ರಲ್ಲಿ ಭಾರತವು ಮೋಡಬಿತ್ತನೆಗೆ ಮುಂದಾಯಿತು. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಈ ಪ್ರಯೋಗ ನಡೆಸಿವೆ.

ಮಳೆ ಬಾರದಂತೆ ತಡೆಯಬಹುದು!

ಮೋಡ ಬಿತ್ತನೆಯನ್ನು ಮಳೆ ತರಿಸಲು ಮಾಡುವುದಾದರೆ, ಮಳೆ ಬಾರದಂತೆ ತಡೆಯಲು ಸಹ ಮೋಡಬಿತ್ತನೆ ಮಾಡುವುದುಂಟು! ಇದೇಗಪ್ಪ ಅಂದರೆ ನಾವೀಗಾಗಲೇ ಮಳೆ ತರಿಸುವ ವಿಧಾನ ಕಂಡುಕೊಂಡಿದ್ದೇವೆ. ಮೋಡಗಳಲ್ಲಿನ ನೀರಿನ ಕಣಗಳು ಬೇಗ ಘನೀಕರಿಸಿ ಮಳೆಯಾಗಿ ಬೀಳಿಸುವುದು. ಅದೇ ಮಾದರಿಯಲ್ಲಿ ಇಂತಹ ನಿಗಧಿತ ದಿನ ಮಳೆ ಬಾರದಂತೆ ತಡೆಯಬೇಕಾದರೆ ಅದಕ್ಕೂ ಒಂದಷ್ಟು ದಿನಗಳ ಮೊದಲೇ ಮೋಡಗಳ ಮೇಲೆ ಸಿಲ್ವರ್ ಅಯೋಡೈಡ್ ಸುರಿದು ಮಳೆ ಬರಿಸುವಂತೆ ಮಾಡಿ ಎಲ್ಲಾ ಮೋಡಗಳನ್ನು ಖಾಲಿ ಮಾಡಿಬಿಟ್ಟರೆ ನಂತರ ನಾವು ಬಯಸಿದ ದಿನ ಮಳೆ ಬರುವುದಿಲ್ಲ ಎಂಬುದೇ ಈ ಐಡಿಯಾ ಆಗಿದೆ. 2008ರಲ್ಲಿ ಚೀನಾ ದೇಶವು ಬೀಜಿಂಗ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದ ದಿನ ಮಳೆ ಬಾರದಂತೆ ತಡೆಯಲು ಅದಕ್ಕೂ ಮೊದಲೇ ಮೋಡ ಬಿತ್ತನೆ ಮಾಡಿ ಮಳೆ ಸುರಿಸಿತ್ತು!

ದುಷ್ಪರಿಣಾಮಗಳು

ಇದರಿಂದ ನಮ್ಮ ಹವಾಮಾನದ ಮೇಲೆ ದೂರಗಾಮಿ ಪರಿಣಾಮಗಳೇನು ಎಂಬ ಪ್ರಶ್ನೆ ಎದುರಾಗುತ್ತದೆ. ಆಶ್ಚರ್ಯವೆಂದರೆ ಈ ಮೋಡ ಬಿತ್ತನೆಯಿಂದ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ! ಏಕೆಂದರೆ ನಾವು ಈ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ನಾವು ಇರುವ ಮೋಡಗಳನ್ನೇ ಬೇಗ ಘನೀಕರಿಸಿ ಶೀಘ್ರ ಮಳೆಯಾಗುವಂತೆ ಮಾಡುತ್ತಿದ್ದೇವೆ ಅಷ್ಟೇ ಹೊರತು ನಾವೇ ಮೋಡಗಳನ್ನು ಸೃಷ್ಟಿಸುತ್ತಿಲ್ಲ. ಅಂದರೆ ನಾಳೆ ಅಥವಾ ಒಂದು ವಾರಕ್ಕೆ ಮಳೆಯಾಗುವುದನ್ನು ಇಂದೇ ಸುರಿಯವಂತೆ ಮಾಡುತ್ತಿದ್ದೇವೆ. ಇನ್ನೊಂದು ರೀತಿಯಲ್ಲಿ ದಾವಣಗೆರೆಯಲ್ಲಿ ಸುರಿಯುವ ಮಳೆಯನ್ನು ಬೆಂಗಳೂರಿನಲ್ಲಿಯೇ ಸುರಿಯವಂತೆ ಮಾಡಬಹುದಾಗಿದೆ.

ಆದರೆ ಮನುಷ್ಯರೇ ಮೋಡಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ವಾತಾವರಣದಲ್ಲಿ ಸ್ವಾಭಾವಿಕವಾಗಿ ನೀರಿನ ಆವಿ ಇದ್ದರೆ ಮಾತ್ರ ಅದು ಮೋಡವಾಗಲು ಸಾಧ್ಯ. ಮೋಡಗಳಿದ್ದರೆ ಮಾತ್ರ ಮಳೆ ಸುರಿಸಲು ಸಾಧ್ಯ. ಹಾಗಾಗಿ ಬಹಳಷ್ಟು ಜನರು ಈ ಮೋಡಬಿತ್ತನೆ ಎಂಬುದು ಕೆಲಸ ಮಾಡುವುದಿಲ್ಲ ಎಂದು ಅಭಿಪ್ರಾಯಪಡುತ್ತಾರೆ. ಅಂದರೆ ಒಟ್ಟು ಮೋಡಗಳ ಸಂಖ್ಯೆಯನ್ನು ಹೆಚ್ಚು ಮಾಡಲು ಸಾಧ್ಯವಿಲ್ಲ. ಹಾಗಾಗಿ ಈ ಮೋಡಬಿತ್ತನೆ ಯಶಸ್ವಿಯಾಗಿದೆಯೇ ಇಲ್ಲವೇ ಎಂಬುದನ್ನು ನಾವು ತೀರ್ಮಾನಿಸುವಷ್ಟು ನಿಖರ ದಾಖಲೆಗಳು ಲಭ್ಯವಿಲ್ಲ. ಇನ್ನು ಮಳೆ ತರಿಸಲು ಬಳಸುವ ಸಿಲ್ವರ್ ಅಯೋಡೈಡ್ ಪ್ರಮಾಣವು ಅತ್ಯಲ್ಪವಾಗಿರುವುದರಿಂದ ಪರಿಸರಕ್ಕೆ ನಾಶವಾಗುತ್ತದೆ ಎಂದು ಸಹ ಹೇಳಲು ಬರುವುದಿಲ್ಲ.

ಈ ತಂತ್ರಜ್ಞಾನದ ಮಿತಿ

ನಮ್ಮ ಭಾರತದಲ್ಲಿ ಮಳೆಗಾಲದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಮಾರುತಗಳು ಬೀಸುತ್ತವೆ. ಅಂದರೆ ಕೇರಳ-ಕರ್ನಾಟಕದಲ್ಲಿನ ಮೋಡಗಳು ದಿಲ್ಲಿ, ಕಾಶ್ಮಿರದವರೆಗೂ ಚಲಿಸುತ್ತವೆ. ಹಾಗಾಗಿ ನಾವು ಮೋಡಬಿತ್ತನೆಯ ತಂತ್ರಜ್ಞಾನ ಬಳಸಿ ಇಲ್ಲಿನ ಮೋಡಗಳು ಇಲ್ಲಿಯೇ ಮಳೆ ಸುರಿಸುವಂತೆ ಮಾಡಬಹುದು. ಇಲ್ಲದಿದ್ದರೆ ಅದು ಉತ್ತರ ಪ್ರದೇಶದಲ್ಲಿಯೋ ಅಥವಾ ದೆಹಲಿಯಲ್ಲಿಯೋ ಮಳೆ ಆಗಿಯೇ ಆಗುತ್ತದೆ. ಹಾಗಾಗಿ ನಾವು ಈ ತಂತ್ರಜ್ಞಾನ ಬಳಸಿ ಇಂದೇ ಮಳೆಯಾಗುವಂತೆ, ಇಲ್ಲಿಯೇ ಮಳೆಯಾಗುವಂತೆ ಕೆಲ ಮೋಡಗಳ ಮೇಲೆ ನಿಯಂತ್ರಣ ಸಾಧಿಸಬಹುದಷ್ಟೇ. ಆದರೆ ಕರ್ನಾಟಕದಲ್ಲಿ ಮೋಡಗಳೆ ಇಲ್ಲದಿದ್ದರೆ ಮೋಡ ಸೃಷ್ಟಿಸಲು ನಮಗೆ ಸಾಧ್ಯವಿಲ್ಲ.

ಹೊಸ ತಂತ್ರಜ್ಞಾನಗಳು

ಸಿಲ್ವರ್ ಅಯೋಡೈಡ್ ಬದಲಿಗೆ ಮೋಡಗಳ ಮೇಲೆ ವಿದ್ಯುತ್ ಹರಿಸಿ ನೀರಿನ ಹನಿಗಳು ಘನೀಕರಿಸಿ ಮಳೆ ಬರುವಂತೆ ಮಾಡುವ ತಂತ್ರಜ್ಞಾನವನ್ನು ಯುಎಇ ದೇಶ ಪ್ರಯೋಗಿಸುತ್ತಿದೆ. ಇದನ್ನು ಕ್ಲೌಡ್ ಜಾಪಿಂಗ್ ಎಂದು ಕರೆಯುತ್ತಾರೆ. ಕೆಲ ದೇಶಗಳು ಸಿಲ್ವರ್ ಅಯೋಡೈಡ್ ಮತ್ತು ವಿದ್ಯುತ್ ಎರಡನ್ನೂ ಏಕಕಾಲಕ್ಕೆ ಪ್ರಯೋಗಿಸುವ ಪ್ರಯತ್ನ ಮಾಡುತ್ತಿವೆ. ಆಗ ಬೇಗ ಮಳೆ ಬರುತ್ತದೆ ಎನ್ನಲಾಗಿದೆ. ಇನ್ನು ಈ ಮೋಡ ಬಿತ್ತನೆ ತಂತ್ರಜ್ಞಾನವನ್ನು ಅಮೆರಿಕ ದೇಶವು 1970ರ ದಶಕದಲ್ಲಿ ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪಗಳಿವೆ. ವಿಯೆಟ್ನಾಂ ಯುದ್ಧದ ಸಂದರ್ಭದಲ್ಲಿ ಅಮೆರಿಕದ ಏರ್‌ಫೋರ್ಸ್‌ ವಿಯೆಟ್ನಾಂನಲ್ಲಿ ಮೋಡಬಿತ್ತನೆ ಮಾಡಿ ಹೆಚ್ಚು ಮಳೆ ಬರುವಂತೆ ಮಾಡಿ ವಿಯೆಟ್ನಾಂ ಮಿಲಿಟರಿ ವಿಚಲಿತವಾಗುವಂತೆ ಮಾಡಿತ್ತು. ಆದರೆ ಆನಂತರ ಈ ರೀತಿಯ ದುರ್ಬಳಕೆಯಾದ ಉದಾಹರಣೆಗಳಿಲ್ಲ.

ಇನ್ನು ಬರ ಹೋಗಲಾಡಿಸಲು, ಹವಾಮಾನ ವೈಪರಿತ್ಯ ತಡೆಯಲು ಈ ಮೋಡಬಿತ್ತನೆ ತಂತ್ರಜ್ಞಾನ ಉಪಯೋಗವಾಗುತ್ತದೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಒಟ್ಟಾರೆಯಾಗಿ ಇದೊಂದು ಸೀಮಿತ ತಂತ್ರಜ್ಞಾನವಾಗಿದೆ ಎಂದು ಹೇಳಬಹುದು.

ಮೂಲ – ಧ್ರುವ್‌ರಾಠೀ

ಕನ್ನಡಕ್ಕೆ: ಮುತ್ತುರಾಜು

ಇದನ್ನೂ ಓದಿ; ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಅಭಿವೃದ್ಧಿ ಕುಂಠಿತವಾಗುತ್ತದೆಂಬುದು ಸತ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...