Homeಅಂತರಾಷ್ಟ್ರೀಯಹಮಾಸ್ ಎಂದರೆ ಯಾರು? ಪ್ಯಾಲೆಸ್ತೀನ್‌ನ ಸಶಸ್ತ್ರ ಗುಂಪಿನ ಬಗ್ಗೆ ಇಲ್ಲಿದೆ ಮಾಹಿತಿ

ಹಮಾಸ್ ಎಂದರೆ ಯಾರು? ಪ್ಯಾಲೆಸ್ತೀನ್‌ನ ಸಶಸ್ತ್ರ ಗುಂಪಿನ ಬಗ್ಗೆ ಇಲ್ಲಿದೆ ಮಾಹಿತಿ

- Advertisement -
- Advertisement -

ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಸಶಸ್ತ್ರ ಗುಂಪು ಹಮಾಸ್ ನಡುವೆ ಕದನ ನಡೆಯುತ್ತಿದ್ದು ಕಳೆದ 48 ಗಂಟೆಗಳಲ್ಲಿ ಸುಮಾರು 1,100 ಜನರು ಯದ್ಧದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಶನಿವಾರ ಹಮಾಸ್ ಇಸ್ರೇಲ್ ಮೇಲೆ ಸರಣಿ ರಾಕೆಟ್‌ ದಾಳಿಯನ್ನು ನಡೆಸಿದೆ. ಭೂ, ವಾಯು, ನೌಕಾ ಮಾರ್ಗದಲ್ಲಿ ಹಮಾಸ್ ಇಸ್ರೇಲ್‌ ಮೇಲೆ 5,000ಕ್ಕೂ ಅಧಿಕ ರಾಕೆಟ್‌ಗಳ ದಾಳಿಯನ್ನು ನಡೆಸಿತ್ತು.

ಇದರ ಬೆನ್ನಲ್ಲೇ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ದೀರ್ಘ ಮತ್ತು ಕಠಿಣವಾದ ಯುದ್ಧವನ್ನು ಘೋಷಿಸಿದ್ದಾರೆ. ಇಸ್ರೇಲ್ ಜೆಟ್‌ಗಳು ಗಾಜಾ ಪಟ್ಟಿಯ ಮೇಲೆ ಬಾಂಬ್ ದಾಳಿ ಮಾಡುತ್ತಿವೆ. ಅಮೆರಿಕ ಇಸ್ರೇಲ್‌ಗೆ ಯುದ್ಧನೌಕೆ ಸೇರಿದಂತೆ ನೆರವನ್ನು ನೀಡುತ್ತಿದೆ.

ವರದಿಯ ಪ್ರಕಾರ ಇಸ್ರೇಲ್‌ನಲ್ಲಿ 700 ಮಂದಿಯನ್ನು ಹಮಾಸ್‌ ಸಶಸ್ತ್ರ ಗುಂಪು ಹತ್ಯೆ ಮಾಡಿದೆ. 400ಮಂದಿ ಪ್ಯಾಲೆಸ್ತೀನಿಯರು ಕೂಡ ಇಸ್ರೇಲ್ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದೆ.

ಹಮಾಸ್ ಎಂದರೆ ಯಾರು?

ಹಮಾಸ್ ಎಂದರೆ ಇಸ್ಲಾಮಿಕ್ ಪ್ರತಿರೋಧ ಚಳುವಳಿ ಮತ್ತು ಅರೇಬಿಕ್ ಭಾಷೆಯಲ್ಲಿ ಹಮಾಸ್‌ ಎಂದರೆ “ಉತ್ಸಾಹ” ಎಂಬ ಅರ್ಥವನ್ನು ಹೇಳುತ್ತದೆ. ಹಮಾಸ್ (Hamas) ವಿಸ್ತೃತ ರೂಪ ಹರಕತ್ ಅಲ್- ಮುಕವಾಮಹ್ ಅಲ್ ಇಸ್ಲಾಮಿಯ್ಯಾ.

ಹಮಾಸ್‌ ರಾಜಕೀಯವಾಗಿ ಗಾಜಾ ಪಟ್ಟಿಯನ್ನು ನಿಯಂತ್ರಿಸುತ್ತದೆ. ಗಾಜಾ ಪಟ್ಟಿ ಸುಮಾರು 365 ಚದರ ಕಿಮೀ ಪ್ರದೇಶವನ್ನು ಹೊಂದಿದೆ. ಇದು ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ.

ಫೆಲೆಸ್ತೀನ್ ಅಥಾರಿಟಿ ಮತ್ತು ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್ (PLO) ಮುಖ್ಯಸ್ಥರಾದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ನಿಷ್ಠರಾಗಿರುವ ಫತಾಹ್ ಪಡೆಗಳ ವಿರುದ್ಧ ಸಂಕ್ಷಿಪ್ತ ಯುದ್ಧದ ನಂತರ 2007ರಿಂದ ಹಮಾಸ್ ಗಾಜಾ ಪಟ್ಟಿಯಲ್ಲಿ ಅಧಿಕಾರದಲ್ಲಿದೆ.

ಹಮಾಸ್ ಸಶಸ್ತ್ರ ಗುಂಪು ಒಂದು ಕಡೆಯಾದರೆ ಇನ್ನೊಂದು ಕಡೆ ಪ್ಯಾಲೆಸ್ತೀನ್ ರಾಜಕಾರಣದಲ್ಲಿ ಯಾಸಿರ್ ಅರಾಫತ್ ಸ್ಥಾಪಿಸಿ ಮುನ್ನಡೆಸಿದ ಫತಾಹ್ ಗುಂಪು ಇದೆ. 1990ರಲ್ಲಿ ಅರೆ ಸೇನಾ ಸಂಘಟನೆಯಾಗಿ ಸ್ಥಾಪನೆಯಾದ ಫತಾಹ್, ಬಳಿಕ ತನ್ನ ಸಶಸ್ತ್ರ ಹೋರಾಟವನ್ನು ಕೈಬಿಟ್ಟಿತು. ಇಸ್ರೇಲ್ ದೇಶದೊಂದಿಗಿನ 1967ರ ಗಡಿ ಒಪ್ಪಂದಕ್ಕೆ ಅನುಗುಣವಾಗಿ ಪ್ಯಾಲೆಸ್ತೀನ್ ದೇಶವನ್ನು ನಿರ್ಮಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಕ್ಕೆ ಬೆಂಬಲ ಸೂಚಿಸಿತ್ತು.

2007ರಲ್ಲಿ ಸಂಘಟನೆಯು ಫತಾಹ್ ಮತ್ತು ಹಮಾಸ್‌ ಜೊತೆಗೆ ಕದನದ ಬಳಿಕ ಗಾಜಾ ಪಟ್ಟಿಯನ್ನು ಹಮಾಸ್‌ ನಿಯಂತ್ರಣಕ್ಕೆ ಪಡೆದುಕೊಂಡಿದೆ. ಫತಾಹ್ ವೆಸ್ಟ್ ಬ್ಯಾಂಕ್‌ನ್ನು ತನ್ನ ಸುಪರ್ದಿಯಲ್ಲಿ ಇರಿಸಿಕೊಂಡಿತ್ತು.

ಹಮಾಸ್‌ ಸ್ಥಾಪನೆಯಾಗಿದ್ದು ಯಾವಾಗ?

ಹಮಾಸ್ ಚಳುವಳಿಯನ್ನು 1987ರಲ್ಲಿ ಇಮಾಮ್ ಶೇಖ್ ಅಹ್ಮದ್ ಯಾಸಿನ್ ಮತ್ತು ಅವರ ಸಹಾಯಕ ಅಬ್ದುಲ್ ಅಜೀಜ್ ಅಲ್-ರಾಂಟಿಸ್ಸಿ ಅವರು ಪ್ಯಾಲೇಸ್ತೀನ್‌ ಪ್ರದೇಶಗಳನ್ನು ಆಕ್ರಮಣ ಮಾಡಿದ ಇಸ್ರೇಲ್ ವಿರುದ್ಧದ ಮೊದಲ ದಂಗೆಯ ವೇಳೆ ಗಾಜಾದಲ್ಲಿ ಸ್ಥಾಪಿಸಿದ್ದಾರೆ.

ಆಂದೋಲನವು ಈಜಿಪ್ಟ್‌ನಲ್ಲಿನ ಮುಸ್ಲಿಂ ಬ್ರದರ್‌ಹುಡ್‌ನ ಅಂಗಸಂಸ್ಥೆಯಾಗಿ ಪ್ರಾರಂಭವಾಗಿತ್ತು. ಐತಿಹಾಸಿಕ ಪ್ಯಾಲೆಸ್ತೀನ್‌ನ್ನು ವಿಮೋಚನೆ ಮಾಡುವ ಉದ್ದೇಶದಿಂದ ಇಸ್ರೇಲ್ ವಿರುದ್ಧ ಸಶಸ್ತ್ರ ಹೋರಾಟವನ್ನು ನಡೆಸಲು ಇಜ್ ಅಲ್-ದಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಎಂಬ ಮಿಲಿಟರಿ ವಿಭಾಗವನ್ನು ರಚಿಸಿತ್ತು.

ಒತ್ತಡಗಳು ಏನೇ ಇರಲಿ ಮತ್ತು ಎಷ್ಟು ಸಮಯವಾದರೂ ನಾವು ಪ್ಯಾಲೇಸ್ತೀನ್‌  ಮಣ್ಣಿನ ಒಂದು ಇಂಚಿನನ್ನೂ ಬಿಟ್ಟುಕೊಡುವುದಿಲ್ಲಎಂದು ಪ್ಯಾಲೆಸ್ತೀನ್‌ ನಾಯಕ ಖಲೀದ್ ಮೆಶಾಲ್ 2017ರಲ್ಲಿ ಹೇಳಿದ್ದರು.

1990ರ ದಶಕದ ಮಧ್ಯಭಾಗದಲ್ಲಿ ಇಸ್ರೇಲ್ ಮತ್ತು ಪ್ಯಾಲೇಸ್ತೀನ್‌ನ PLO ಮಾತುಕತೆ ನಡೆಸಿದ ಓಸ್ಲೋ ಶಾಂತಿ ಒಪ್ಪಂದಗಳನ್ನು ಹಮಾಸ್ ವಿರೋಧಿಸುತ್ತದೆ. ಇಸ್ರೇಲ್‌ ಆಕ್ರಮಿತ ಪ್ಯಾಲೇಸ್ತೀನ್‌ನಲ್ಲಿನ ಇಸ್ರೇಲ್‌ ಸೈನಿಕರು, ವಸಾಹತುಗಾರರು ಮತ್ತು ನಾಗರಿಕರ ಮೇಲೆ ಹಮಾಸ್‌ ದಾಳಿ ನಡೆಸಿದೆ.

ಹಮಾಸ್‌ನ್ನು ಇಸ್ರೇಲ್, ಅಮೆರಿಕ, ಯುರೋಪಿಯನ್ ಯೂನಿಯನ್, ಕೆನಡಾ, ಈಜಿಪ್ಟ್ ಮತ್ತು ಜಪಾನ್‌ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಹಮಾಸ್ ಪ್ರಾದೇಶಿಕ ಮೈತ್ರಿಯನ್ನು ಹೊಂದಿದ್ದು ಇರಾನ್, ಸಿರಿಯಾ ಮತ್ತು ಲೆಬನಾನ್‌ನಲ್ಲಿರುವ ಹಿಜ್ಬೊಲ್ಲಾ ಒಳಗೊಂಡ ಒಕ್ಕೂಟದ ಭಾಗವಾಗಿದೆ. ಇದು  ಅಮೆರಿಕದ ನೀತಿಗಳನ್ನು ವಿರೋಧಿಸುತ್ತದೆ.

ಇಸ್ರೇಲ್ ಮೇಲೆ ಶನಿವಾರದ ದಾಳಿಗೆ ಪ್ರೇರೇಪಣೆ ಏನು?

ಹಮಾಸ್ ವಕ್ತಾರ ಖಲೀದ್ ಕಡೋಮಿ ಅಲ್ ಜಜೀರಾ ಜೊತೆ ಮಾತನಾಡಿ, ದಶಕಗಳಿಂದ ಪ್ಯಾಲೆಸ್ತೀನಿಯರು ಎದುರಿಸುತ್ತಿರುವ ದೌರ್ಜನ್ಯಗಳಿಗೆ ಪ್ರತಿಕ್ರಿಯೆಯಾಗಿ ಹಮಾಸ್‌ ಸಶಸ್ತ್ರ ಗುಂಪು ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಮತ್ತು ನಮ್ಮ ಪವಿತ್ರ ಸ್ಥಳ ಅಲ್-ಅಕ್ಸಾ ಮಸೀದಿಯಲ್ಲಿ ಪ್ಯಾಲೇಸ್ತೀನ್ ಜನರ ಮೇಲೆ ದೌರ್ಜನ್ಯಗಳನ್ನು ನಡೆಸುವುದನ್ನು ನಿಲ್ಲಿಸಬೇಕೆಂದು ನಾವು  ಬಯಸುತ್ತೇವೆ. ಈ ಎಲ್ಲಾ ಸಂಗತಿಗಳು ಈ ಯುದ್ಧವನ್ನು ಪ್ರಾರಂಭಿಸಲು ಕಾರಣವಾಗಿವೆ ಎಂದು ಖಲೀದ್ ಕಡೋಮಿ ಹೇಳಿದ್ದಾರೆ.

ಹಮಾಸ್ ಇತರ ಗುಂಪುಗಳಿಗೆ ಹೋರಾಟದಲ್ಲಿ ಸೇರಲು ಕರೆ ನೀಡಿದೆ. ಶನಿವಾರದ ದಾಳಿಗಳು ಕೇವಲ ಪ್ರಾರಂಭವಾಗಿದೆ ಎಂದು ಹೇಳಿದೆ.

ಹಮಾಸ್‌ನ ಹಿರಿಯ ವಕ್ತಾರ ಒಸಾಮಾ ಹಮ್ದಾನ್ ಅಲ್ ಜಜೀರಾ ಜೊತೆ ಮಾತನಾಡಿದ್ದು, ಶನಿವಾರದ ಹೋರಾಟದ ಸಮಯದಲ್ಲಿ ವಿಡಿಯೊಗಳು ವಯಸ್ಸಾದ ಇಸ್ರೇಲಿಗಳನ್ನು ಒತ್ತೆಯಾಳಾಗಿ ತೆಗೆದುಕೊಂಡಿರುವುದನ್ನು ತೋರಿಸಿದ್ದರೂ ಕೂಡ ಹಮಾಸ್‌ ನಾಗರಿಕರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ನಾವು ಉದ್ದೇಶಪೂರ್ವಕವಾಗಿ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ. ನಾವು ವಸಾಹತುಗಾರರನ್ನು ಆಕ್ರಮಣದ ಭಾಗವೆಂದು ಘೋಷಿಸಿದ್ದೇವೆ ಅವರು ಇಸ್ರೇಲ್‌ನ ಸಶಸ್ತ್ರ  ಪಡೆಯ ಭಾಗವಾಗಿದ್ದಾರೆ ಅವರು ನಾಗರಿಕರಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...