Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...