Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...