Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...