Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...