Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...