Homeಅಂತರಾಷ್ಟ್ರೀಯಭಾರತದ ರಾಷ್ಟ್ರ ಭಾಷೆ ಯಾವುದು?...ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

- Advertisement -
- Advertisement -

ಭಾರತದ ರಾಷ್ಟ್ರ ಭಾಷೆ ಯಾವುದು? ಎಂಬ ಪ್ರಶ್ನೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದೆ ಕನಿಮೋಳಿ ನೀಡಿರುವ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಯೋತ್ಪಾದನೆ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗಗಳು ವಿವಿಧ ರಾಷ್ಟ್ರಗಳಿಗೆ ತೆರಳಿದೆ. ಸ್ಪೇನ್‌ಗೆ ತೆರಳಿರುವ ನಿಯೋಗದಲ್ಲಿ ಸಂಸದೆ ಕನಿಮೋಳಿ ಇದ್ದಾರೆ. ಸ್ಪೇನ್‌ನ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಅನಿವಾಸಿ ಭಾರತೀಯ ಜೊತೆ ಆಯೋಜಿಸಿದ್ದ ಸಂವಾದಲ್ಲಿ ಕನಿಮೋಳಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು “ಭಾರತದ ರಾಷ್ಟ್ರ ಭಾಷೆ ಯಾವುದು?” ಎಂದು ಕನಿಮೋಳಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಕನಿಮೋಳಿ ” ಭಾರತದ ರಾಷ್ಟ್ರ ಭಾಷೆ ವಿವಿಧತೆಯಲ್ಲಿ ಏಕತೆ” ಎಂದಿದ್ದಾರೆ. ಈ ಉತ್ತರ ಎಲ್ಲೆಡೆ ವೈರಲ್ ಆಗಿದೆ.

“ಭಾರತದ ರಾಷ್ಟ್ರೀಯ ಭಾಷೆ ವಿವಿಧತೆಯಲ್ಲಿ ಏಕತೆ. ಈ ನಿಯೋಗವು ಜಗತ್ತಿಗೆ ಕೊಡುವ ಸಂದೇಶವೂ ಅದೇ. ಅದು ಇಂದಿನ ಅತ್ಯಂತ ಮುಖ್ಯವಾದ ವಿಷಯ” ಎಂದು ಕನಿಮೋಳಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ), ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಇತ್ಯಾದಿ ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಗಳ ನಡುವೆ ತಿಕ್ಕಾಟ ಏರ್ಪಟ್ಟಿರುವ ಕನಿಮೋಳಿ ಅವರು ನೀಡಿರುವ ಉತ್ತರ ಮಹತ್ವವೆನಿಸಿಕೊಂಡಿದೆ.

ಭಯೋತ್ಪಾದನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಕನಿಮೋಳಿ ಅವರು “ನಮ್ಮ ದೇಶದಲ್ಲಿ ಬಹಳಷ್ಟನ್ನು ಮಾಡಬೇಕಾಗಿದೆ ಮತ್ತು ನಾವು ಅದನ್ನೇ ಮಾಡಲು ಬಯಸುತ್ತೇವೆ. ದುರದೃಷ್ಟವಶಾತ್, ನಮ್ಮನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ. ನಾವು ಭಯೋತ್ಪಾದನೆಯನ್ನು ಎದುರಿಸಬೇಕಾಗಿದೆ, ಯುದ್ಧವು ಸಂಪೂರ್ಣವಾಗಿ ಅನಗತ್ಯ” ಎಂದು ಒತ್ತಿ ಹೇಳಿದ್ದಾರೆ. ಭಾರತ ಸುರಕ್ಷಿತ ಸ್ಥಳವಾಗಿದ್ದು, ಕಾಶ್ಮೀರ ಸುರಕ್ಷಿತವಾಗಿದೆ ಎಂದು ಸರ್ಕಾರ ಈ ಮೂಲಕ ಖಚಿತಪಡಿಸುತ್ತದೆ ಎಂದು ಎಂದಿದ್ದಾರೆ.

“ಭಾರತೀಯರಾಗಿ, ಭಾರತ ಸುರಕ್ಷಿತವಾಗಿದೆ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸ್ಪಷ್ಟಪಡಿಸಬೇಕು. ಅವರು (ಭಯೋತ್ಪಾದಕರು) ಏನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಅವರು ನಮ್ಮನ್ನು ಹಳಿತಪ್ಪಿಸಲು ಸಾಧ್ಯವಿಲ್ಲ. ಕಾಶ್ಮೀರ ಸುರಕ್ಷಿತ ಸ್ಥಳವಾಗಿ ಉಳಿಯುವಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಕನಿಮೋಳಿ ನೇತೃತ್ವದ ನಿಯೋಗದ ಐದು ರಾಷ್ಟ್ರಗಳ ಭೇಟಿಯ ಕೊನೆಯ ದೇಶ ಸ್ಪೇನ್ ಆಗಿತ್ತು. ಮೇ 31ರಂದು  ಅಲ್ಲಿಗೆ ತಲುಪಿದ ನಿಯೋಗ, ಜೂನ್ 2ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿತ್ತು. ನಿಯೋಗದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ಕುಮಾರ್ ರೈ, ಬಿಜೆಪಿಯ ಬ್ರಿಜೇಶ್ ಚೌಟ, ಎಎಪಿಯ ಅಶೋಕ್ ಮಿತ್ತಲ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಮಾಜಿ ರಾಜತಾಂತ್ರಿಕ ಮಂಜೀವ್ ಸಿಂಗ್ ಪುರಿ ಇದ್ದರು.

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...