Homeಅಂತರಾಷ್ಟ್ರೀಯಭಾರತದ ರಾಷ್ಟ್ರ ಭಾಷೆ ಯಾವುದು?...ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

- Advertisement -
- Advertisement -

ಭಾರತದ ರಾಷ್ಟ್ರ ಭಾಷೆ ಯಾವುದು? ಎಂಬ ಪ್ರಶ್ನೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದೆ ಕನಿಮೋಳಿ ನೀಡಿರುವ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಯೋತ್ಪಾದನೆ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗಗಳು ವಿವಿಧ ರಾಷ್ಟ್ರಗಳಿಗೆ ತೆರಳಿದೆ. ಸ್ಪೇನ್‌ಗೆ ತೆರಳಿರುವ ನಿಯೋಗದಲ್ಲಿ ಸಂಸದೆ ಕನಿಮೋಳಿ ಇದ್ದಾರೆ. ಸ್ಪೇನ್‌ನ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಅನಿವಾಸಿ ಭಾರತೀಯ ಜೊತೆ ಆಯೋಜಿಸಿದ್ದ ಸಂವಾದಲ್ಲಿ ಕನಿಮೋಳಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು “ಭಾರತದ ರಾಷ್ಟ್ರ ಭಾಷೆ ಯಾವುದು?” ಎಂದು ಕನಿಮೋಳಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಕನಿಮೋಳಿ ” ಭಾರತದ ರಾಷ್ಟ್ರ ಭಾಷೆ ವಿವಿಧತೆಯಲ್ಲಿ ಏಕತೆ” ಎಂದಿದ್ದಾರೆ. ಈ ಉತ್ತರ ಎಲ್ಲೆಡೆ ವೈರಲ್ ಆಗಿದೆ.

“ಭಾರತದ ರಾಷ್ಟ್ರೀಯ ಭಾಷೆ ವಿವಿಧತೆಯಲ್ಲಿ ಏಕತೆ. ಈ ನಿಯೋಗವು ಜಗತ್ತಿಗೆ ಕೊಡುವ ಸಂದೇಶವೂ ಅದೇ. ಅದು ಇಂದಿನ ಅತ್ಯಂತ ಮುಖ್ಯವಾದ ವಿಷಯ” ಎಂದು ಕನಿಮೋಳಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ), ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಇತ್ಯಾದಿ ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಗಳ ನಡುವೆ ತಿಕ್ಕಾಟ ಏರ್ಪಟ್ಟಿರುವ ಕನಿಮೋಳಿ ಅವರು ನೀಡಿರುವ ಉತ್ತರ ಮಹತ್ವವೆನಿಸಿಕೊಂಡಿದೆ.

ಭಯೋತ್ಪಾದನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಕನಿಮೋಳಿ ಅವರು “ನಮ್ಮ ದೇಶದಲ್ಲಿ ಬಹಳಷ್ಟನ್ನು ಮಾಡಬೇಕಾಗಿದೆ ಮತ್ತು ನಾವು ಅದನ್ನೇ ಮಾಡಲು ಬಯಸುತ್ತೇವೆ. ದುರದೃಷ್ಟವಶಾತ್, ನಮ್ಮನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ. ನಾವು ಭಯೋತ್ಪಾದನೆಯನ್ನು ಎದುರಿಸಬೇಕಾಗಿದೆ, ಯುದ್ಧವು ಸಂಪೂರ್ಣವಾಗಿ ಅನಗತ್ಯ” ಎಂದು ಒತ್ತಿ ಹೇಳಿದ್ದಾರೆ. ಭಾರತ ಸುರಕ್ಷಿತ ಸ್ಥಳವಾಗಿದ್ದು, ಕಾಶ್ಮೀರ ಸುರಕ್ಷಿತವಾಗಿದೆ ಎಂದು ಸರ್ಕಾರ ಈ ಮೂಲಕ ಖಚಿತಪಡಿಸುತ್ತದೆ ಎಂದು ಎಂದಿದ್ದಾರೆ.

“ಭಾರತೀಯರಾಗಿ, ಭಾರತ ಸುರಕ್ಷಿತವಾಗಿದೆ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸ್ಪಷ್ಟಪಡಿಸಬೇಕು. ಅವರು (ಭಯೋತ್ಪಾದಕರು) ಏನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಅವರು ನಮ್ಮನ್ನು ಹಳಿತಪ್ಪಿಸಲು ಸಾಧ್ಯವಿಲ್ಲ. ಕಾಶ್ಮೀರ ಸುರಕ್ಷಿತ ಸ್ಥಳವಾಗಿ ಉಳಿಯುವಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಕನಿಮೋಳಿ ನೇತೃತ್ವದ ನಿಯೋಗದ ಐದು ರಾಷ್ಟ್ರಗಳ ಭೇಟಿಯ ಕೊನೆಯ ದೇಶ ಸ್ಪೇನ್ ಆಗಿತ್ತು. ಮೇ 31ರಂದು  ಅಲ್ಲಿಗೆ ತಲುಪಿದ ನಿಯೋಗ, ಜೂನ್ 2ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿತ್ತು. ನಿಯೋಗದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ಕುಮಾರ್ ರೈ, ಬಿಜೆಪಿಯ ಬ್ರಿಜೇಶ್ ಚೌಟ, ಎಎಪಿಯ ಅಶೋಕ್ ಮಿತ್ತಲ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಮಾಜಿ ರಾಜತಾಂತ್ರಿಕ ಮಂಜೀವ್ ಸಿಂಗ್ ಪುರಿ ಇದ್ದರು.

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...