Homeಅಂತರಾಷ್ಟ್ರೀಯಭಾರತದ ರಾಷ್ಟ್ರ ಭಾಷೆ ಯಾವುದು?...ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

- Advertisement -
- Advertisement -

ಭಾರತದ ರಾಷ್ಟ್ರ ಭಾಷೆ ಯಾವುದು? ಎಂಬ ಪ್ರಶ್ನೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದೆ ಕನಿಮೋಳಿ ನೀಡಿರುವ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಯೋತ್ಪಾದನೆ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗಗಳು ವಿವಿಧ ರಾಷ್ಟ್ರಗಳಿಗೆ ತೆರಳಿದೆ. ಸ್ಪೇನ್‌ಗೆ ತೆರಳಿರುವ ನಿಯೋಗದಲ್ಲಿ ಸಂಸದೆ ಕನಿಮೋಳಿ ಇದ್ದಾರೆ. ಸ್ಪೇನ್‌ನ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಅನಿವಾಸಿ ಭಾರತೀಯ ಜೊತೆ ಆಯೋಜಿಸಿದ್ದ ಸಂವಾದಲ್ಲಿ ಕನಿಮೋಳಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು “ಭಾರತದ ರಾಷ್ಟ್ರ ಭಾಷೆ ಯಾವುದು?” ಎಂದು ಕನಿಮೋಳಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಕನಿಮೋಳಿ ” ಭಾರತದ ರಾಷ್ಟ್ರ ಭಾಷೆ ವಿವಿಧತೆಯಲ್ಲಿ ಏಕತೆ” ಎಂದಿದ್ದಾರೆ. ಈ ಉತ್ತರ ಎಲ್ಲೆಡೆ ವೈರಲ್ ಆಗಿದೆ.

“ಭಾರತದ ರಾಷ್ಟ್ರೀಯ ಭಾಷೆ ವಿವಿಧತೆಯಲ್ಲಿ ಏಕತೆ. ಈ ನಿಯೋಗವು ಜಗತ್ತಿಗೆ ಕೊಡುವ ಸಂದೇಶವೂ ಅದೇ. ಅದು ಇಂದಿನ ಅತ್ಯಂತ ಮುಖ್ಯವಾದ ವಿಷಯ” ಎಂದು ಕನಿಮೋಳಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ), ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಇತ್ಯಾದಿ ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಗಳ ನಡುವೆ ತಿಕ್ಕಾಟ ಏರ್ಪಟ್ಟಿರುವ ಕನಿಮೋಳಿ ಅವರು ನೀಡಿರುವ ಉತ್ತರ ಮಹತ್ವವೆನಿಸಿಕೊಂಡಿದೆ.

ಭಯೋತ್ಪಾದನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಕನಿಮೋಳಿ ಅವರು “ನಮ್ಮ ದೇಶದಲ್ಲಿ ಬಹಳಷ್ಟನ್ನು ಮಾಡಬೇಕಾಗಿದೆ ಮತ್ತು ನಾವು ಅದನ್ನೇ ಮಾಡಲು ಬಯಸುತ್ತೇವೆ. ದುರದೃಷ್ಟವಶಾತ್, ನಮ್ಮನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ. ನಾವು ಭಯೋತ್ಪಾದನೆಯನ್ನು ಎದುರಿಸಬೇಕಾಗಿದೆ, ಯುದ್ಧವು ಸಂಪೂರ್ಣವಾಗಿ ಅನಗತ್ಯ” ಎಂದು ಒತ್ತಿ ಹೇಳಿದ್ದಾರೆ. ಭಾರತ ಸುರಕ್ಷಿತ ಸ್ಥಳವಾಗಿದ್ದು, ಕಾಶ್ಮೀರ ಸುರಕ್ಷಿತವಾಗಿದೆ ಎಂದು ಸರ್ಕಾರ ಈ ಮೂಲಕ ಖಚಿತಪಡಿಸುತ್ತದೆ ಎಂದು ಎಂದಿದ್ದಾರೆ.

“ಭಾರತೀಯರಾಗಿ, ಭಾರತ ಸುರಕ್ಷಿತವಾಗಿದೆ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸ್ಪಷ್ಟಪಡಿಸಬೇಕು. ಅವರು (ಭಯೋತ್ಪಾದಕರು) ಏನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಅವರು ನಮ್ಮನ್ನು ಹಳಿತಪ್ಪಿಸಲು ಸಾಧ್ಯವಿಲ್ಲ. ಕಾಶ್ಮೀರ ಸುರಕ್ಷಿತ ಸ್ಥಳವಾಗಿ ಉಳಿಯುವಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಕನಿಮೋಳಿ ನೇತೃತ್ವದ ನಿಯೋಗದ ಐದು ರಾಷ್ಟ್ರಗಳ ಭೇಟಿಯ ಕೊನೆಯ ದೇಶ ಸ್ಪೇನ್ ಆಗಿತ್ತು. ಮೇ 31ರಂದು  ಅಲ್ಲಿಗೆ ತಲುಪಿದ ನಿಯೋಗ, ಜೂನ್ 2ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿತ್ತು. ನಿಯೋಗದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ಕುಮಾರ್ ರೈ, ಬಿಜೆಪಿಯ ಬ್ರಿಜೇಶ್ ಚೌಟ, ಎಎಪಿಯ ಅಶೋಕ್ ಮಿತ್ತಲ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಮಾಜಿ ರಾಜತಾಂತ್ರಿಕ ಮಂಜೀವ್ ಸಿಂಗ್ ಪುರಿ ಇದ್ದರು.

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...