Homeಎಲೆಮರೆಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ

- Advertisement -
- Advertisement -

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅದರ ಅರ್ಥ ವ್ಯವಸ್ಥಾದ ಬಗ್ಗೆ ಮಾತಾಡೋ ಮುಂದ ಅದು ಹಣದುಬ್ಬರ ಅಂತ ಅರ್ಥ.

ಅಂದರ ಏನು? ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.

ಖರೇ ಹೇಳಬೇಕಂದರ ಆ ಕಾಲ ಸೋವಿ ಕಾಲ ಅಲ್ಲ. ಅದು ಗಟ್ಟಿ ಕಾಲ. ಈಗಿನ ಕಾಲನೇ ಸೋವಿ.

ಈ ವಾರದ ರಿಸರ್ವ್ ಬ್ಯಾಂಕಿನ ವರದಿ ಪ್ರಕಾರ ಭಾರತದ ಉಬ್ಬರದ ಪ್ರಮಾಣ 7.35 ಆಗೇದಂತ. ಹಂಗಂದರ ಏನು?

ಅಂದರ- ಹಿಂದಿನ ಯಾವುದೋ ಒಂದು ವರ್ಷವನ್ನು ಮೂಲ ಅಳತೆಯ ವರ್ಷ ಅಂತ ಹಿಡಕೊಂಡರ ಆ ಲೆಕ್ಕದ ಮ್ಯಾಲೆ ಈ ವರ್ಷ ಕೆಲವು ನಿರ್ದಿಷ್ಟ ಸಾಮಾನುಗಳ ಬೆಲೆ ಎಷ್ಟು ಹೆಚ್ಚಾಗೇದ ಅಂತ.

ಪಂತ ಪ್ರಧಾನ ನರೇಂದ್ರ ಮೋದಿ ಅವರ ಸರಕಾರ ಬರೋ ಮುಂಚೆ ಇದು 1999 ಆಗಿತ್ತು. ಈಗ ಅದು ಬದಲಾಗಿ ಬದಲಾಗಿ ಈಗ 2017- 18 ಆಗೇದ. ಅಂದರ ಒಂದು ವರ್ಷದಾಗ ವಸ್ತುಗಳ ಬೆಲೆ 7.35 ಶೇಕಡಾ ಆಗೇದ ಅಂತ ಅರ್ಥ.

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ.

ಹಂಗಾರ 10 ವರ್ಷದ ಉಬ್ಬರದ ಪ್ರಮಾಣ ಎಷ್ಟು ಅಂತ ನೀವು ಕೇಳಿದರ ಶಾಕ್ ಆಗ್ತೀರಿ. ಅದು ಸುಮಾರು 105 ಶೇ. ಅಂದರ ಹತ್ತು ವರ್ಷದ ಹಿಂದ ನೂರು ರೂಪಾಯಿಗೆ ಇದ್ದ ಬೆಲೆ ಈಗ 205 ರೂಪಾಯಿಗೆ.

ಹಂಗಂತ ನಿರ್ಮಲಾ ಸೀತಾರಾಮನ್ ಅವರ ಕಾಲಕ್ಕೆ ಮಾತ್ರ ಆಪತ್ಕಾಲ ಅಂತ ಅಲ್ಲ. ಹಿಂದಿನವರೂ ಹಿಂಗ ಇದ್ದರು. ನಮ್ಮ ದೇಶದಾಗ ಶೇಕಡಾ 10 ಕ್ಕಿಂತ ಹೆಚ್ಚು ಉಬ್ಬರ ಇದ್ದ ವರ್ಷಗಳು- 1983, 1990, 1996, 1998, 2009 ಹಾಗೂ 2012. ಮತ್ತು ಅತ್ಯಂತ ಹೆಚ್ಚು ಉಬ್ಬರ ಇದ್ದ ವರ್ಷಗಳು 1974 – (25 ಶೇ). 1973 -(21. ಶೇ).

ಈ ವರ್ಷ ಅಮೆರಿಕೆ ಉಬ್ಬರ ಶೇ. 2.1 ಇದ್ದರ ಚೈನಾದ್ದು 2 ಅದ. ಜಪಾನಿನದು 0.9 ಅದ. ಅತ್ಯಂತ ಹೆಚ್ಚು ಇರೋದು ವಿಶ್ವ ಸುಂದರಿಗಳ ನಾಡಾದ ವೆನೆಜೂವೆಲಾದಾಗ ಶೇ. 255 ಅದ. ನಂತರ ಸ್ಥಾನ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕಾದ ದೇಶಗಳದು. ನಾವು ಸದ್ಯ ಈ ಬಡ ದೇಶಗಳ ಜೊತೆ ಸ್ಪರ್ಧೆ ಮಾಡಲಿಕ್ಕೆ ಹತ್ತೇವಿ.

ಇದರ ದುಷ್ಪರಿಣಾಮ ಏನಪಾ ಅಂದರ ರೂಪಾಯಿಯ ಬೆಲೆ ಕಮ್ಮಿ ಆದಂತೆಲ್ಲಾ ಜನಸಾಮಾನ್ಯರ ಖರೀದಿಸುವ ಶಕ್ತಿ ಕಮ್ಮಿ ಆಗತದ. ಇದು ದೇಶದ ಆರ್ಥಿಕ ವ್ಯವಸ್ಥೆಯ ಮ್ಯಾಲೆ ಕೆಟ್ಟ ಪರಿಣಾಮ ಬೀರತದ.

ಅದು ಹೆಂಗಂತ ಹೇಳತೇನಿ. ಇಡೀ ಜಗತ್ತಿನ್ಯಾಗ ಮೂರು ರೀತಿ ಜನ ಇರತಾರ. ಉತ್ಪಾದಕರು, ಮಾರಾಟಗಾರರು ಹಾಗೂ ಬಳಕೆದಾರರು. ಇನ್ನು ಉತ್ಪಾದಕರು ಅಂದರ ರೈತರ ಹಂಗ ಆಹಾರ ಉತ್ಪಾದಕರು ಇರಬಹುದು, ಯಂತ್ರ ತಯಾರಿಸೋ ಉದ್ದಿಮೆದಾರರು ಇರಬಹುದು. ಇವೆರಡೂ ಇರದ ಸೇವೆ ನೀಡುವವರು ಇರಬಹುದು. ನಮ್ಮ ಮನಿಗೆ ಬರೋ ನೀರು ಸರಕು ಅಂತ ಆದರ, ಆ ನೀರು ಬಿಡೋ ನೀರುಗಂಟಿ ಸೇವೆ ಪೂರೈಕೆದಾರ. ಇವರ ಪ್ರಯತ್ನಕ್ಕ ನಾವು ಹಣದೊಳಗ ಬೆಲೆ ಕಟ್ಟತೇವಿ. ಅದು ಅವರ ವರಮಾನ. ಅದನ್ನು ಅವರು ತಮಗ ಬೇಕಾದ್ದನ್ನ ತೊಗೊಳ್ಳಲಿಕ್ಕೆ ಬಳಸಿಕೊಳ್ಳತಾರ.

ಇನ್ನು ವ್ಯಾಪಾರಸ್ಥರು ಏನನ್ನೂ ಉತ್ಪಾದಿಸದಿದ್ದರೂ ಎಲ್ಲಾನೂ ಮಾರಾಟ ಮಾಡತಾರ. ಅವರಿಗೆ ತಮ್ಮ ಬಂಡವಾಳ ಬಿಟ್ಟು ಮಿಕ್ಕೊ ಹಣನ ಲಾಭ. ಅದನ್ನು ಬಳಸಿ ಅವರು ಸರಕನ್ನೋ, ಸೇವೆಯನ್ನೋ ಖರೀದಿ ಮಾಡತಾರ. ಕೆಲವರ ಸೇವೆ ಸೋವಿಯಾಗಿ, ಇನ್ನು ಕೆಲವರದು ತುಟ್ಟಿಯಾಗಿ ಇರತದ. ಇದ ಸಮಸ್ಯೆ.

ಹಂಗಂತ ಇದು ಉಳ್ಳವರಿಗೆ ಒಳ್ಳೆಯದು. ಯಾಕಂದರ ಅವರ ಹತ್ತರ ಆಸ್ತಿ ಇರತದ. ಉಳ್ಳವರಿಗೆ ಇರಂಗಿಲ್ಲ. ಅವರ ಹತ್ತಿರ ಇರೋ ರೂಪಾಯಿಯ ಬೆಲೆ ಸವಿಸಿಗೋತ ಹೋಗತದ. ಆಸ್ತಿ ಸವಿಯಂಗಿಲ್ಲ. ಅದು ಯಾವಾಗಲೂ ಸವಿ -ಸವಿಯಾಗೇ ಇರತದ.

ಉಬ್ಬರದ ಕಾರಣಗಳು ಹಲವು ಅದರಾಗ ಬೇಡಿಕೆ ಎಳೆಯುವಿಕೆ, ಬೆಲೆ ತಳ್ಳುವಿಕೆ ಹಾಗೂ ಸಾಂಸ್ಥಿಕ ಅಂತ ಮೂರು ಪ್ರಮುಖ. ಆ ಅರೇಬಿಯಾದ ಮಹಾರಾಜರೆಲ್ಲ ವರ್ಷಕ್ಕೊಮ್ಮೆ ಸಭೆ ಸೇರಿ ತಮ್ಮ ಪೆಟ್ರೊಲ್ – ಡೀಸಲ್ ಉತ್ಪನ್ನ ಕಮ್ಮಿ ಮಾಡಿ ಅದರ ಬೆಲೆ ಜಾಸ್ತಿ ಮಾಡತಾರಲ್ಲ, ಅದು ಬೇಡಿಕೆ ಎಳೆಯುವಿಕೆ ಉದಾಹರಣೆ. ಇನ್ನೊಂದು ಉದಾಹರಣೆ ಅಂದರ ಇಂಟರ ನೆಟ್ಟಿನ್ಯಾಗ ಹೊಸಾ ಮೊಬೈಲ್ ಫೋನ್ ಮಾರಾಟಕ್ಕ ಬಂದಾಗ ಹತ್ತು ಸೆಕೆಂಡಿನ್ಯಾಗ ಖಾಲಿ ಆಗಿ ಮುಂದಿನ ಬಾರಿ ಅದರ ಬೆಲೆ ಹೆಚ್ಚಾಗತದಲ್ಲಾ ಅದು.

ಬೆಲೆ ತಳ್ಳುವಿಕೆ ಅಂದರ ಯಾವುದೇ ವಸ್ತು ಅಥವಾ ಸೇವೆಯ ಬೇಡಿಕೆ ಕಮ್ಮಿ ಇದ್ದರೂ ಬೆಲೆ ಯಾವುದೇ ಕಾರಣಕ್ಕೆ ಹೆಚ್ಚಾಗುವುದು. ಕುಶಲಿ ವೈದ್ಯರೊಬ್ಬರು ಹೃದಯ ಚಿಕಿತ್ಸೆಗೆ ಜಾಸ್ತಿ ಹಣ ತೊಗೊಳ್ಳೋದು, ಯಾರೂ ಕೊಳ್ಳದೇ ಇದ್ದರೂ ಪ್ಲಾಟಿನಂ ಉಂಗುರದ ಬೆಲೆ ಹೆಚ್ಚಾಗೋದು, ಇದಕ್ಕೆ ಉದಾಹರಣೆ.

ಇನ್ನು ಸಾಂಸ್ಥಿಕ ಅಂದರ, ಒಂದು ದೇಶ ಅಭಿವೃದ್ಧಿ ಹೊಂದಿದಂತೆ ಅಲ್ಲಿನ ಕುಶಲ ಕೂಲಿ ಹಾಗೂ ಕೌಶಲ್ಯ ರಹಿತ ಕೂಲಿ ಹೆಚ್ಚಾಗುವುದು. ಇದನ್ನು ಅರ್ಥ ಶಾಸ್ತ್ರಜ್ಞರು ಆರೋಗ್ಯವಂತ ಉಬ್ಬರ ಅಂತ ಕರೀತಾರ. ಉದಾಹರಣೆಗೆ ಭಾರತದಾಗ ಮನೆ ಕೆಲಸ ಮಾಡೋರಿಗೆ ತಿಂಗಳಿಗೆ ಐನೂರೋ , ಸಾವಿರನೋ ಕೊಟ್ಟರೆ ಅದೇ ಕೆಲಸಕ್ಕೆ ಅಮೆರಿಕಾದಾಗ ತಾಸಿಗೆ ಏಳು ನೂರು ರೂಪಾಯಿ ಕೊಡೋದು. ಉಳಿದ ಎರಡೂ ಥರದ ಉಬ್ಬರಗಳು ಆರೋಗ್ಯಕರ ಅಲ್ಲ.

ಜಗತ್ತಿನಾದ್ಯಂತ ತಜ್ಞರು ಶಿಫಾರಸು ಮಾಡುವ ಉಬ್ಬರದ ಪ್ರಮಾಣ ಶೇ. 2- 4. ಇದರಿಂದ ಜನ ಉಳಿಕೆ ಮಾಡೋಕಿಂತಾ ಖರೀದಿ ಮಾಡಲಿಕ್ಕೆ ಆಸಕ್ತಿ ತೋರಸತಾರ. ಆದರ ಭಾರತದ ಅಭಿವೃದ್ಧಿ ದರ ಶೇ. 5 ಇದ್ದು, ಉಬ್ಬರ 7.35 ಇದ್ದರ ಅದರ ಅರ್ಥ ದೇಶ ಹಿಮ್ಮುಖವಾಗಿ ನಡದದ ಅಂತ. ಇದು ಒಳ್ಳೆಯದಲ್ಲ ಅಂತ ಕೆಲವರು ಹೇಳತಾರ.

ಒಂದು ದೇಶದ ಕೇಂದ್ರ ಬ್ಯಾಂಕು ಸರಕಾರ ಇ‌ಷ್ಟೇ ನೋಟು ಪ್ರಿಂಟು ಮಾಡಬೇಕು. ಇದಕ್ಕಿಂತ ಹೆಚ್ಚು ಮಾಡಿದರ ಅದು ಉಬ್ಬರಕ್ಕ ಕಾರಣವಾಗಿ ರೂಪಾಯಿಯ ಬೆಲೆ ಕಮ್ಮಿ ಆಗತದ ಅಂತ ಸಲಹೆ ಕೊಡತದ. ಬಡವರ ಖರೀದಿ ಶಕ್ತಿ ಹೆಚ್ಚುವಂತಹಾ ಇನ್ನೂ ಕೆಲವು ಕ್ರಮಗಳನ್ನೂ ಕೈಕೊಳ್ಳಬೇಕು.

ಆದರ ಈಗ ನಮ್ಮ ದೇಶದಾಗ ಸರಕಾರಕ್ಕ ಸಲಹೆ ಕೊಡೋವಷ್ಟು ಧೈರ್ಯವಂತರು ಯಾರಿಲ್ಲ. ಅವರು ಕೊಡೋ ಸ್ವಲ್ಪ ಸಲಹೆಯನ್ನೂ ಕೇಳೋ ಕಿವಿಗಳೂ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...