Homeಎಲೆಮರೆಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ

- Advertisement -
- Advertisement -

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅದರ ಅರ್ಥ ವ್ಯವಸ್ಥಾದ ಬಗ್ಗೆ ಮಾತಾಡೋ ಮುಂದ ಅದು ಹಣದುಬ್ಬರ ಅಂತ ಅರ್ಥ.

ಅಂದರ ಏನು? ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.

ಖರೇ ಹೇಳಬೇಕಂದರ ಆ ಕಾಲ ಸೋವಿ ಕಾಲ ಅಲ್ಲ. ಅದು ಗಟ್ಟಿ ಕಾಲ. ಈಗಿನ ಕಾಲನೇ ಸೋವಿ.

ಈ ವಾರದ ರಿಸರ್ವ್ ಬ್ಯಾಂಕಿನ ವರದಿ ಪ್ರಕಾರ ಭಾರತದ ಉಬ್ಬರದ ಪ್ರಮಾಣ 7.35 ಆಗೇದಂತ. ಹಂಗಂದರ ಏನು?

ಅಂದರ- ಹಿಂದಿನ ಯಾವುದೋ ಒಂದು ವರ್ಷವನ್ನು ಮೂಲ ಅಳತೆಯ ವರ್ಷ ಅಂತ ಹಿಡಕೊಂಡರ ಆ ಲೆಕ್ಕದ ಮ್ಯಾಲೆ ಈ ವರ್ಷ ಕೆಲವು ನಿರ್ದಿಷ್ಟ ಸಾಮಾನುಗಳ ಬೆಲೆ ಎಷ್ಟು ಹೆಚ್ಚಾಗೇದ ಅಂತ.

ಪಂತ ಪ್ರಧಾನ ನರೇಂದ್ರ ಮೋದಿ ಅವರ ಸರಕಾರ ಬರೋ ಮುಂಚೆ ಇದು 1999 ಆಗಿತ್ತು. ಈಗ ಅದು ಬದಲಾಗಿ ಬದಲಾಗಿ ಈಗ 2017- 18 ಆಗೇದ. ಅಂದರ ಒಂದು ವರ್ಷದಾಗ ವಸ್ತುಗಳ ಬೆಲೆ 7.35 ಶೇಕಡಾ ಆಗೇದ ಅಂತ ಅರ್ಥ.

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ.

ಹಂಗಾರ 10 ವರ್ಷದ ಉಬ್ಬರದ ಪ್ರಮಾಣ ಎಷ್ಟು ಅಂತ ನೀವು ಕೇಳಿದರ ಶಾಕ್ ಆಗ್ತೀರಿ. ಅದು ಸುಮಾರು 105 ಶೇ. ಅಂದರ ಹತ್ತು ವರ್ಷದ ಹಿಂದ ನೂರು ರೂಪಾಯಿಗೆ ಇದ್ದ ಬೆಲೆ ಈಗ 205 ರೂಪಾಯಿಗೆ.

ಹಂಗಂತ ನಿರ್ಮಲಾ ಸೀತಾರಾಮನ್ ಅವರ ಕಾಲಕ್ಕೆ ಮಾತ್ರ ಆಪತ್ಕಾಲ ಅಂತ ಅಲ್ಲ. ಹಿಂದಿನವರೂ ಹಿಂಗ ಇದ್ದರು. ನಮ್ಮ ದೇಶದಾಗ ಶೇಕಡಾ 10 ಕ್ಕಿಂತ ಹೆಚ್ಚು ಉಬ್ಬರ ಇದ್ದ ವರ್ಷಗಳು- 1983, 1990, 1996, 1998, 2009 ಹಾಗೂ 2012. ಮತ್ತು ಅತ್ಯಂತ ಹೆಚ್ಚು ಉಬ್ಬರ ಇದ್ದ ವರ್ಷಗಳು 1974 – (25 ಶೇ). 1973 -(21. ಶೇ).

ಈ ವರ್ಷ ಅಮೆರಿಕೆ ಉಬ್ಬರ ಶೇ. 2.1 ಇದ್ದರ ಚೈನಾದ್ದು 2 ಅದ. ಜಪಾನಿನದು 0.9 ಅದ. ಅತ್ಯಂತ ಹೆಚ್ಚು ಇರೋದು ವಿಶ್ವ ಸುಂದರಿಗಳ ನಾಡಾದ ವೆನೆಜೂವೆಲಾದಾಗ ಶೇ. 255 ಅದ. ನಂತರ ಸ್ಥಾನ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕಾದ ದೇಶಗಳದು. ನಾವು ಸದ್ಯ ಈ ಬಡ ದೇಶಗಳ ಜೊತೆ ಸ್ಪರ್ಧೆ ಮಾಡಲಿಕ್ಕೆ ಹತ್ತೇವಿ.

ಇದರ ದುಷ್ಪರಿಣಾಮ ಏನಪಾ ಅಂದರ ರೂಪಾಯಿಯ ಬೆಲೆ ಕಮ್ಮಿ ಆದಂತೆಲ್ಲಾ ಜನಸಾಮಾನ್ಯರ ಖರೀದಿಸುವ ಶಕ್ತಿ ಕಮ್ಮಿ ಆಗತದ. ಇದು ದೇಶದ ಆರ್ಥಿಕ ವ್ಯವಸ್ಥೆಯ ಮ್ಯಾಲೆ ಕೆಟ್ಟ ಪರಿಣಾಮ ಬೀರತದ.

ಅದು ಹೆಂಗಂತ ಹೇಳತೇನಿ. ಇಡೀ ಜಗತ್ತಿನ್ಯಾಗ ಮೂರು ರೀತಿ ಜನ ಇರತಾರ. ಉತ್ಪಾದಕರು, ಮಾರಾಟಗಾರರು ಹಾಗೂ ಬಳಕೆದಾರರು. ಇನ್ನು ಉತ್ಪಾದಕರು ಅಂದರ ರೈತರ ಹಂಗ ಆಹಾರ ಉತ್ಪಾದಕರು ಇರಬಹುದು, ಯಂತ್ರ ತಯಾರಿಸೋ ಉದ್ದಿಮೆದಾರರು ಇರಬಹುದು. ಇವೆರಡೂ ಇರದ ಸೇವೆ ನೀಡುವವರು ಇರಬಹುದು. ನಮ್ಮ ಮನಿಗೆ ಬರೋ ನೀರು ಸರಕು ಅಂತ ಆದರ, ಆ ನೀರು ಬಿಡೋ ನೀರುಗಂಟಿ ಸೇವೆ ಪೂರೈಕೆದಾರ. ಇವರ ಪ್ರಯತ್ನಕ್ಕ ನಾವು ಹಣದೊಳಗ ಬೆಲೆ ಕಟ್ಟತೇವಿ. ಅದು ಅವರ ವರಮಾನ. ಅದನ್ನು ಅವರು ತಮಗ ಬೇಕಾದ್ದನ್ನ ತೊಗೊಳ್ಳಲಿಕ್ಕೆ ಬಳಸಿಕೊಳ್ಳತಾರ.

ಇನ್ನು ವ್ಯಾಪಾರಸ್ಥರು ಏನನ್ನೂ ಉತ್ಪಾದಿಸದಿದ್ದರೂ ಎಲ್ಲಾನೂ ಮಾರಾಟ ಮಾಡತಾರ. ಅವರಿಗೆ ತಮ್ಮ ಬಂಡವಾಳ ಬಿಟ್ಟು ಮಿಕ್ಕೊ ಹಣನ ಲಾಭ. ಅದನ್ನು ಬಳಸಿ ಅವರು ಸರಕನ್ನೋ, ಸೇವೆಯನ್ನೋ ಖರೀದಿ ಮಾಡತಾರ. ಕೆಲವರ ಸೇವೆ ಸೋವಿಯಾಗಿ, ಇನ್ನು ಕೆಲವರದು ತುಟ್ಟಿಯಾಗಿ ಇರತದ. ಇದ ಸಮಸ್ಯೆ.

ಹಂಗಂತ ಇದು ಉಳ್ಳವರಿಗೆ ಒಳ್ಳೆಯದು. ಯಾಕಂದರ ಅವರ ಹತ್ತರ ಆಸ್ತಿ ಇರತದ. ಉಳ್ಳವರಿಗೆ ಇರಂಗಿಲ್ಲ. ಅವರ ಹತ್ತಿರ ಇರೋ ರೂಪಾಯಿಯ ಬೆಲೆ ಸವಿಸಿಗೋತ ಹೋಗತದ. ಆಸ್ತಿ ಸವಿಯಂಗಿಲ್ಲ. ಅದು ಯಾವಾಗಲೂ ಸವಿ -ಸವಿಯಾಗೇ ಇರತದ.

ಉಬ್ಬರದ ಕಾರಣಗಳು ಹಲವು ಅದರಾಗ ಬೇಡಿಕೆ ಎಳೆಯುವಿಕೆ, ಬೆಲೆ ತಳ್ಳುವಿಕೆ ಹಾಗೂ ಸಾಂಸ್ಥಿಕ ಅಂತ ಮೂರು ಪ್ರಮುಖ. ಆ ಅರೇಬಿಯಾದ ಮಹಾರಾಜರೆಲ್ಲ ವರ್ಷಕ್ಕೊಮ್ಮೆ ಸಭೆ ಸೇರಿ ತಮ್ಮ ಪೆಟ್ರೊಲ್ – ಡೀಸಲ್ ಉತ್ಪನ್ನ ಕಮ್ಮಿ ಮಾಡಿ ಅದರ ಬೆಲೆ ಜಾಸ್ತಿ ಮಾಡತಾರಲ್ಲ, ಅದು ಬೇಡಿಕೆ ಎಳೆಯುವಿಕೆ ಉದಾಹರಣೆ. ಇನ್ನೊಂದು ಉದಾಹರಣೆ ಅಂದರ ಇಂಟರ ನೆಟ್ಟಿನ್ಯಾಗ ಹೊಸಾ ಮೊಬೈಲ್ ಫೋನ್ ಮಾರಾಟಕ್ಕ ಬಂದಾಗ ಹತ್ತು ಸೆಕೆಂಡಿನ್ಯಾಗ ಖಾಲಿ ಆಗಿ ಮುಂದಿನ ಬಾರಿ ಅದರ ಬೆಲೆ ಹೆಚ್ಚಾಗತದಲ್ಲಾ ಅದು.

ಬೆಲೆ ತಳ್ಳುವಿಕೆ ಅಂದರ ಯಾವುದೇ ವಸ್ತು ಅಥವಾ ಸೇವೆಯ ಬೇಡಿಕೆ ಕಮ್ಮಿ ಇದ್ದರೂ ಬೆಲೆ ಯಾವುದೇ ಕಾರಣಕ್ಕೆ ಹೆಚ್ಚಾಗುವುದು. ಕುಶಲಿ ವೈದ್ಯರೊಬ್ಬರು ಹೃದಯ ಚಿಕಿತ್ಸೆಗೆ ಜಾಸ್ತಿ ಹಣ ತೊಗೊಳ್ಳೋದು, ಯಾರೂ ಕೊಳ್ಳದೇ ಇದ್ದರೂ ಪ್ಲಾಟಿನಂ ಉಂಗುರದ ಬೆಲೆ ಹೆಚ್ಚಾಗೋದು, ಇದಕ್ಕೆ ಉದಾಹರಣೆ.

ಇನ್ನು ಸಾಂಸ್ಥಿಕ ಅಂದರ, ಒಂದು ದೇಶ ಅಭಿವೃದ್ಧಿ ಹೊಂದಿದಂತೆ ಅಲ್ಲಿನ ಕುಶಲ ಕೂಲಿ ಹಾಗೂ ಕೌಶಲ್ಯ ರಹಿತ ಕೂಲಿ ಹೆಚ್ಚಾಗುವುದು. ಇದನ್ನು ಅರ್ಥ ಶಾಸ್ತ್ರಜ್ಞರು ಆರೋಗ್ಯವಂತ ಉಬ್ಬರ ಅಂತ ಕರೀತಾರ. ಉದಾಹರಣೆಗೆ ಭಾರತದಾಗ ಮನೆ ಕೆಲಸ ಮಾಡೋರಿಗೆ ತಿಂಗಳಿಗೆ ಐನೂರೋ , ಸಾವಿರನೋ ಕೊಟ್ಟರೆ ಅದೇ ಕೆಲಸಕ್ಕೆ ಅಮೆರಿಕಾದಾಗ ತಾಸಿಗೆ ಏಳು ನೂರು ರೂಪಾಯಿ ಕೊಡೋದು. ಉಳಿದ ಎರಡೂ ಥರದ ಉಬ್ಬರಗಳು ಆರೋಗ್ಯಕರ ಅಲ್ಲ.

ಜಗತ್ತಿನಾದ್ಯಂತ ತಜ್ಞರು ಶಿಫಾರಸು ಮಾಡುವ ಉಬ್ಬರದ ಪ್ರಮಾಣ ಶೇ. 2- 4. ಇದರಿಂದ ಜನ ಉಳಿಕೆ ಮಾಡೋಕಿಂತಾ ಖರೀದಿ ಮಾಡಲಿಕ್ಕೆ ಆಸಕ್ತಿ ತೋರಸತಾರ. ಆದರ ಭಾರತದ ಅಭಿವೃದ್ಧಿ ದರ ಶೇ. 5 ಇದ್ದು, ಉಬ್ಬರ 7.35 ಇದ್ದರ ಅದರ ಅರ್ಥ ದೇಶ ಹಿಮ್ಮುಖವಾಗಿ ನಡದದ ಅಂತ. ಇದು ಒಳ್ಳೆಯದಲ್ಲ ಅಂತ ಕೆಲವರು ಹೇಳತಾರ.

ಒಂದು ದೇಶದ ಕೇಂದ್ರ ಬ್ಯಾಂಕು ಸರಕಾರ ಇ‌ಷ್ಟೇ ನೋಟು ಪ್ರಿಂಟು ಮಾಡಬೇಕು. ಇದಕ್ಕಿಂತ ಹೆಚ್ಚು ಮಾಡಿದರ ಅದು ಉಬ್ಬರಕ್ಕ ಕಾರಣವಾಗಿ ರೂಪಾಯಿಯ ಬೆಲೆ ಕಮ್ಮಿ ಆಗತದ ಅಂತ ಸಲಹೆ ಕೊಡತದ. ಬಡವರ ಖರೀದಿ ಶಕ್ತಿ ಹೆಚ್ಚುವಂತಹಾ ಇನ್ನೂ ಕೆಲವು ಕ್ರಮಗಳನ್ನೂ ಕೈಕೊಳ್ಳಬೇಕು.

ಆದರ ಈಗ ನಮ್ಮ ದೇಶದಾಗ ಸರಕಾರಕ್ಕ ಸಲಹೆ ಕೊಡೋವಷ್ಟು ಧೈರ್ಯವಂತರು ಯಾರಿಲ್ಲ. ಅವರು ಕೊಡೋ ಸ್ವಲ್ಪ ಸಲಹೆಯನ್ನೂ ಕೇಳೋ ಕಿವಿಗಳೂ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...