Homeಎಲೆಮರೆಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ

- Advertisement -
- Advertisement -

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅದರ ಅರ್ಥ ವ್ಯವಸ್ಥಾದ ಬಗ್ಗೆ ಮಾತಾಡೋ ಮುಂದ ಅದು ಹಣದುಬ್ಬರ ಅಂತ ಅರ್ಥ.

ಅಂದರ ಏನು? ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.

ಖರೇ ಹೇಳಬೇಕಂದರ ಆ ಕಾಲ ಸೋವಿ ಕಾಲ ಅಲ್ಲ. ಅದು ಗಟ್ಟಿ ಕಾಲ. ಈಗಿನ ಕಾಲನೇ ಸೋವಿ.

ಈ ವಾರದ ರಿಸರ್ವ್ ಬ್ಯಾಂಕಿನ ವರದಿ ಪ್ರಕಾರ ಭಾರತದ ಉಬ್ಬರದ ಪ್ರಮಾಣ 7.35 ಆಗೇದಂತ. ಹಂಗಂದರ ಏನು?

ಅಂದರ- ಹಿಂದಿನ ಯಾವುದೋ ಒಂದು ವರ್ಷವನ್ನು ಮೂಲ ಅಳತೆಯ ವರ್ಷ ಅಂತ ಹಿಡಕೊಂಡರ ಆ ಲೆಕ್ಕದ ಮ್ಯಾಲೆ ಈ ವರ್ಷ ಕೆಲವು ನಿರ್ದಿಷ್ಟ ಸಾಮಾನುಗಳ ಬೆಲೆ ಎಷ್ಟು ಹೆಚ್ಚಾಗೇದ ಅಂತ.

ಪಂತ ಪ್ರಧಾನ ನರೇಂದ್ರ ಮೋದಿ ಅವರ ಸರಕಾರ ಬರೋ ಮುಂಚೆ ಇದು 1999 ಆಗಿತ್ತು. ಈಗ ಅದು ಬದಲಾಗಿ ಬದಲಾಗಿ ಈಗ 2017- 18 ಆಗೇದ. ಅಂದರ ಒಂದು ವರ್ಷದಾಗ ವಸ್ತುಗಳ ಬೆಲೆ 7.35 ಶೇಕಡಾ ಆಗೇದ ಅಂತ ಅರ್ಥ.

ಅಂದರ ಒಂದು ವರ್ಷದ ಹಿಂದೆ ಯಲ್ಲಪ್ಪ ಅನ್ನೋ ಮನಿಷಾ ಒಂದು ನೂರು ರೂಪಾಯಿಗೆ ಯಾವ ವಸ್ತು ಖರೀದಿ ಮಾಡತಿದ್ದನೋ ಅದನ್ನು ಖರೀದಿಸಲಿಕ್ಕೆ ಈಗ ಅವನಿಗೆ 107.35 ರೂಪಾಯಿ ಬೇಕಾಗತದ.

ಹಂಗಾರ 10 ವರ್ಷದ ಉಬ್ಬರದ ಪ್ರಮಾಣ ಎಷ್ಟು ಅಂತ ನೀವು ಕೇಳಿದರ ಶಾಕ್ ಆಗ್ತೀರಿ. ಅದು ಸುಮಾರು 105 ಶೇ. ಅಂದರ ಹತ್ತು ವರ್ಷದ ಹಿಂದ ನೂರು ರೂಪಾಯಿಗೆ ಇದ್ದ ಬೆಲೆ ಈಗ 205 ರೂಪಾಯಿಗೆ.

ಹಂಗಂತ ನಿರ್ಮಲಾ ಸೀತಾರಾಮನ್ ಅವರ ಕಾಲಕ್ಕೆ ಮಾತ್ರ ಆಪತ್ಕಾಲ ಅಂತ ಅಲ್ಲ. ಹಿಂದಿನವರೂ ಹಿಂಗ ಇದ್ದರು. ನಮ್ಮ ದೇಶದಾಗ ಶೇಕಡಾ 10 ಕ್ಕಿಂತ ಹೆಚ್ಚು ಉಬ್ಬರ ಇದ್ದ ವರ್ಷಗಳು- 1983, 1990, 1996, 1998, 2009 ಹಾಗೂ 2012. ಮತ್ತು ಅತ್ಯಂತ ಹೆಚ್ಚು ಉಬ್ಬರ ಇದ್ದ ವರ್ಷಗಳು 1974 – (25 ಶೇ). 1973 -(21. ಶೇ).

ಈ ವರ್ಷ ಅಮೆರಿಕೆ ಉಬ್ಬರ ಶೇ. 2.1 ಇದ್ದರ ಚೈನಾದ್ದು 2 ಅದ. ಜಪಾನಿನದು 0.9 ಅದ. ಅತ್ಯಂತ ಹೆಚ್ಚು ಇರೋದು ವಿಶ್ವ ಸುಂದರಿಗಳ ನಾಡಾದ ವೆನೆಜೂವೆಲಾದಾಗ ಶೇ. 255 ಅದ. ನಂತರ ಸ್ಥಾನ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕಾದ ದೇಶಗಳದು. ನಾವು ಸದ್ಯ ಈ ಬಡ ದೇಶಗಳ ಜೊತೆ ಸ್ಪರ್ಧೆ ಮಾಡಲಿಕ್ಕೆ ಹತ್ತೇವಿ.

ಇದರ ದುಷ್ಪರಿಣಾಮ ಏನಪಾ ಅಂದರ ರೂಪಾಯಿಯ ಬೆಲೆ ಕಮ್ಮಿ ಆದಂತೆಲ್ಲಾ ಜನಸಾಮಾನ್ಯರ ಖರೀದಿಸುವ ಶಕ್ತಿ ಕಮ್ಮಿ ಆಗತದ. ಇದು ದೇಶದ ಆರ್ಥಿಕ ವ್ಯವಸ್ಥೆಯ ಮ್ಯಾಲೆ ಕೆಟ್ಟ ಪರಿಣಾಮ ಬೀರತದ.

ಅದು ಹೆಂಗಂತ ಹೇಳತೇನಿ. ಇಡೀ ಜಗತ್ತಿನ್ಯಾಗ ಮೂರು ರೀತಿ ಜನ ಇರತಾರ. ಉತ್ಪಾದಕರು, ಮಾರಾಟಗಾರರು ಹಾಗೂ ಬಳಕೆದಾರರು. ಇನ್ನು ಉತ್ಪಾದಕರು ಅಂದರ ರೈತರ ಹಂಗ ಆಹಾರ ಉತ್ಪಾದಕರು ಇರಬಹುದು, ಯಂತ್ರ ತಯಾರಿಸೋ ಉದ್ದಿಮೆದಾರರು ಇರಬಹುದು. ಇವೆರಡೂ ಇರದ ಸೇವೆ ನೀಡುವವರು ಇರಬಹುದು. ನಮ್ಮ ಮನಿಗೆ ಬರೋ ನೀರು ಸರಕು ಅಂತ ಆದರ, ಆ ನೀರು ಬಿಡೋ ನೀರುಗಂಟಿ ಸೇವೆ ಪೂರೈಕೆದಾರ. ಇವರ ಪ್ರಯತ್ನಕ್ಕ ನಾವು ಹಣದೊಳಗ ಬೆಲೆ ಕಟ್ಟತೇವಿ. ಅದು ಅವರ ವರಮಾನ. ಅದನ್ನು ಅವರು ತಮಗ ಬೇಕಾದ್ದನ್ನ ತೊಗೊಳ್ಳಲಿಕ್ಕೆ ಬಳಸಿಕೊಳ್ಳತಾರ.

ಇನ್ನು ವ್ಯಾಪಾರಸ್ಥರು ಏನನ್ನೂ ಉತ್ಪಾದಿಸದಿದ್ದರೂ ಎಲ್ಲಾನೂ ಮಾರಾಟ ಮಾಡತಾರ. ಅವರಿಗೆ ತಮ್ಮ ಬಂಡವಾಳ ಬಿಟ್ಟು ಮಿಕ್ಕೊ ಹಣನ ಲಾಭ. ಅದನ್ನು ಬಳಸಿ ಅವರು ಸರಕನ್ನೋ, ಸೇವೆಯನ್ನೋ ಖರೀದಿ ಮಾಡತಾರ. ಕೆಲವರ ಸೇವೆ ಸೋವಿಯಾಗಿ, ಇನ್ನು ಕೆಲವರದು ತುಟ್ಟಿಯಾಗಿ ಇರತದ. ಇದ ಸಮಸ್ಯೆ.

ಹಂಗಂತ ಇದು ಉಳ್ಳವರಿಗೆ ಒಳ್ಳೆಯದು. ಯಾಕಂದರ ಅವರ ಹತ್ತರ ಆಸ್ತಿ ಇರತದ. ಉಳ್ಳವರಿಗೆ ಇರಂಗಿಲ್ಲ. ಅವರ ಹತ್ತಿರ ಇರೋ ರೂಪಾಯಿಯ ಬೆಲೆ ಸವಿಸಿಗೋತ ಹೋಗತದ. ಆಸ್ತಿ ಸವಿಯಂಗಿಲ್ಲ. ಅದು ಯಾವಾಗಲೂ ಸವಿ -ಸವಿಯಾಗೇ ಇರತದ.

ಉಬ್ಬರದ ಕಾರಣಗಳು ಹಲವು ಅದರಾಗ ಬೇಡಿಕೆ ಎಳೆಯುವಿಕೆ, ಬೆಲೆ ತಳ್ಳುವಿಕೆ ಹಾಗೂ ಸಾಂಸ್ಥಿಕ ಅಂತ ಮೂರು ಪ್ರಮುಖ. ಆ ಅರೇಬಿಯಾದ ಮಹಾರಾಜರೆಲ್ಲ ವರ್ಷಕ್ಕೊಮ್ಮೆ ಸಭೆ ಸೇರಿ ತಮ್ಮ ಪೆಟ್ರೊಲ್ – ಡೀಸಲ್ ಉತ್ಪನ್ನ ಕಮ್ಮಿ ಮಾಡಿ ಅದರ ಬೆಲೆ ಜಾಸ್ತಿ ಮಾಡತಾರಲ್ಲ, ಅದು ಬೇಡಿಕೆ ಎಳೆಯುವಿಕೆ ಉದಾಹರಣೆ. ಇನ್ನೊಂದು ಉದಾಹರಣೆ ಅಂದರ ಇಂಟರ ನೆಟ್ಟಿನ್ಯಾಗ ಹೊಸಾ ಮೊಬೈಲ್ ಫೋನ್ ಮಾರಾಟಕ್ಕ ಬಂದಾಗ ಹತ್ತು ಸೆಕೆಂಡಿನ್ಯಾಗ ಖಾಲಿ ಆಗಿ ಮುಂದಿನ ಬಾರಿ ಅದರ ಬೆಲೆ ಹೆಚ್ಚಾಗತದಲ್ಲಾ ಅದು.

ಬೆಲೆ ತಳ್ಳುವಿಕೆ ಅಂದರ ಯಾವುದೇ ವಸ್ತು ಅಥವಾ ಸೇವೆಯ ಬೇಡಿಕೆ ಕಮ್ಮಿ ಇದ್ದರೂ ಬೆಲೆ ಯಾವುದೇ ಕಾರಣಕ್ಕೆ ಹೆಚ್ಚಾಗುವುದು. ಕುಶಲಿ ವೈದ್ಯರೊಬ್ಬರು ಹೃದಯ ಚಿಕಿತ್ಸೆಗೆ ಜಾಸ್ತಿ ಹಣ ತೊಗೊಳ್ಳೋದು, ಯಾರೂ ಕೊಳ್ಳದೇ ಇದ್ದರೂ ಪ್ಲಾಟಿನಂ ಉಂಗುರದ ಬೆಲೆ ಹೆಚ್ಚಾಗೋದು, ಇದಕ್ಕೆ ಉದಾಹರಣೆ.

ಇನ್ನು ಸಾಂಸ್ಥಿಕ ಅಂದರ, ಒಂದು ದೇಶ ಅಭಿವೃದ್ಧಿ ಹೊಂದಿದಂತೆ ಅಲ್ಲಿನ ಕುಶಲ ಕೂಲಿ ಹಾಗೂ ಕೌಶಲ್ಯ ರಹಿತ ಕೂಲಿ ಹೆಚ್ಚಾಗುವುದು. ಇದನ್ನು ಅರ್ಥ ಶಾಸ್ತ್ರಜ್ಞರು ಆರೋಗ್ಯವಂತ ಉಬ್ಬರ ಅಂತ ಕರೀತಾರ. ಉದಾಹರಣೆಗೆ ಭಾರತದಾಗ ಮನೆ ಕೆಲಸ ಮಾಡೋರಿಗೆ ತಿಂಗಳಿಗೆ ಐನೂರೋ , ಸಾವಿರನೋ ಕೊಟ್ಟರೆ ಅದೇ ಕೆಲಸಕ್ಕೆ ಅಮೆರಿಕಾದಾಗ ತಾಸಿಗೆ ಏಳು ನೂರು ರೂಪಾಯಿ ಕೊಡೋದು. ಉಳಿದ ಎರಡೂ ಥರದ ಉಬ್ಬರಗಳು ಆರೋಗ್ಯಕರ ಅಲ್ಲ.

ಜಗತ್ತಿನಾದ್ಯಂತ ತಜ್ಞರು ಶಿಫಾರಸು ಮಾಡುವ ಉಬ್ಬರದ ಪ್ರಮಾಣ ಶೇ. 2- 4. ಇದರಿಂದ ಜನ ಉಳಿಕೆ ಮಾಡೋಕಿಂತಾ ಖರೀದಿ ಮಾಡಲಿಕ್ಕೆ ಆಸಕ್ತಿ ತೋರಸತಾರ. ಆದರ ಭಾರತದ ಅಭಿವೃದ್ಧಿ ದರ ಶೇ. 5 ಇದ್ದು, ಉಬ್ಬರ 7.35 ಇದ್ದರ ಅದರ ಅರ್ಥ ದೇಶ ಹಿಮ್ಮುಖವಾಗಿ ನಡದದ ಅಂತ. ಇದು ಒಳ್ಳೆಯದಲ್ಲ ಅಂತ ಕೆಲವರು ಹೇಳತಾರ.

ಒಂದು ದೇಶದ ಕೇಂದ್ರ ಬ್ಯಾಂಕು ಸರಕಾರ ಇ‌ಷ್ಟೇ ನೋಟು ಪ್ರಿಂಟು ಮಾಡಬೇಕು. ಇದಕ್ಕಿಂತ ಹೆಚ್ಚು ಮಾಡಿದರ ಅದು ಉಬ್ಬರಕ್ಕ ಕಾರಣವಾಗಿ ರೂಪಾಯಿಯ ಬೆಲೆ ಕಮ್ಮಿ ಆಗತದ ಅಂತ ಸಲಹೆ ಕೊಡತದ. ಬಡವರ ಖರೀದಿ ಶಕ್ತಿ ಹೆಚ್ಚುವಂತಹಾ ಇನ್ನೂ ಕೆಲವು ಕ್ರಮಗಳನ್ನೂ ಕೈಕೊಳ್ಳಬೇಕು.

ಆದರ ಈಗ ನಮ್ಮ ದೇಶದಾಗ ಸರಕಾರಕ್ಕ ಸಲಹೆ ಕೊಡೋವಷ್ಟು ಧೈರ್ಯವಂತರು ಯಾರಿಲ್ಲ. ಅವರು ಕೊಡೋ ಸ್ವಲ್ಪ ಸಲಹೆಯನ್ನೂ ಕೇಳೋ ಕಿವಿಗಳೂ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...