Homeಮುಖಪುಟವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

- Advertisement -
- Advertisement -

“ಒಂದು ಸಮಯದಲ್ಲಿ ಪಾರಿವಾಳಗಳನ್ನು ಬಿಡುತ್ತಿದ್ದರು. ಈಗ ನಾವು ಚೀತಾಗಳನ್ನು ಬಿಡುತ್ತಿದ್ದೇವೆ”- ಹೀಗೆ ಪ್ರಧಾನಿ ನರೇಂದ್ರ ಮೋದಿಯವರ ಅನುಯಾಯಿಯೊಬ್ಬರು ಇತ್ತೀಚೆಗೆ ಟ್ವೀಟ್ ಮಾಡಿದ್ದಾರೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ಪಾರಿವಾಳವನ್ನು ಹಾರಿಬಿಡುತ್ತಿರುವ ಫೋಟೋವನ್ನು, ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನರೇಂದ್ರ ಮೋದಿಯವರು ಚೀತಾಗಳನ್ನು ಬಿಡುತ್ತಿರುವುದನ್ನು ವಿಡಿಯೊವನ್ನು ಸೇರಿಸಿ ಎಡಿಟ್ ಮಾಡಿ ಪೋಸ್ಟ್ ಮಾಡಲಾಗಿದೆ. ಯಾವುದೇ ವಿದ್ಯಮಾನವನ್ನು ರಾಜಕೀಯಗೊಳಿಸುವ ವಿಚಿತ್ರ ಕಾಲಘಟ್ಟದಲ್ಲಿ ಭಾರತೀಯರು ಇರುವುದರಿಂದ ‘ಚೀತಾ’ ರಾಜಕಾರಣವೂ ನಡೆಯುತ್ತಿದೆ. ಈ ಚೀತಾಗಳನ್ನು ಭಾರತಕ್ಕೆ ತರುವಲ್ಲಿ ಕಾಂಗ್ರೆಸ್‌ ಕೂಡ ಯತ್ನಿಸಿತ್ತು. ಎರಡು ಪಕ್ಷಗಳೂ ‘ಚೀತಾ ರಾಜಕಾರಣ’ ಮಾಡುತ್ತಿವೆಯಾದರೂ ವನ್ಯಜೀವಿತಜ್ಞರು ಭಿನ್ನ ಅಭಿಪ್ರಾಯಗಳನ್ನು ತಾಳುತ್ತಿದ್ದಾರೆ.

“ನೂರಕ್ಕೆ ನೂರರಷ್ಟು ಈ ಚೀತಾ ಯೋಜನೆ ವಿಫಲವಾದದ್ದು. ರಾಜಕೀಯವಾಗಿ ಇವರಿಗೆ ಒಂದಿಷ್ಟು ಉಪಯೋಗವಾಗುವುದು ಬಿಟ್ಟರೆ ಚೀತಾಗಳಿಗಾಗಲೀ, ಕುನೋ ರಾಷ್ಟ್ರೀಯ ಉದ್ಯಾನಕ್ಕಾಗಲೀ ಯಾವುದೇ ಪ್ರಯೋಜನವಿಲ್ಲ” ಎನ್ನುತ್ತಾರೆ ವನ್ಯಜೀವಿತಜ್ಞರಾದ ಕೃಪಾಕರ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಈ ಯೋಜನೆಯಿಂದಾಗಿ ಸುಮಾರು ನೂರು ಕೋಟಿ ರೂಪಾಯಿಗಳನ್ನೂ ಗೊತ್ತಿದ್ದೂ ಕಳೆದುಕೊಳ್ಳುತ್ತಿದ್ದೇವೆ. ತಿಳಿವಳಿಕೆ ಇದ್ದವರು ಯಾರಾದರೂ ಇದನ್ನು ಒಪ್ಪುವುದಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

“ಈ ಚೀತಾ ಕಾರ್ಯಕ್ರಮದಲ್ಲಿ ಯಾವುದೇ ಒಳನೋಟ ಕಾಣುತ್ತಿಲ್ಲ. ಈಗ ನಮೀಬಿಯಾದಿಂದ ತಂದಿರುವ ಚೀತಾಗಳು ಈ ನೆಲಕ್ಕೆ ಸಂಬಂಧಪಟ್ಟಿರುವ ಪ್ರಾಣಿಗಳು. ನಮ್ಮ ದೇಶದಲ್ಲಿ ಹಿಂದೆ ಇದ್ದದ್ದು ಏಷ್ಯಾ ಖಂಡದ ಚೀತಾಗಳು. ಈಗ ಪ್ರಧಾನಿಯವರು ಇಲ್ಲಿಗೆ ಆಫ್ರಿಕಾ ಚೀತಾಗಳನ್ನು ತಂದಿದ್ದಾರೆ. ಯಾವುದೇ ಒಂದು ಜೀವಿ ಬದುಕಲು ಒಂದು ಜೀವಪರಿಸರ ಮುಖ್ಯವಾಗುತ್ತದೆ. ವಿಜ್ಞಾನದ ಮೂಲ ತತ್ವವಿದು. ಇಲ್ಲವಾದರೆ ಇಂತಹ ಪ್ರಯೋಜನಗಳು ಹೆಚ್ಚು ಕಾಲ ಉಳಿಯುವುದಿಲ್ಲ” ಎಂದು ಭವಿಷ್ಯ ನುಡಿದರು.

ಬಾಗಿಲಿಗೆ ಬಂದ ನವಿಲು | Prajavani
ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ

“ಇಲ್ಲಿನ ಜೀವ ವೈವಿಧ್ಯತೆಯನ್ನು, ಘಟ್ಟ ಪ್ರದೇಶಗಳನ್ನು ಉಳಿಸುವುದು ಯಾವುದೇ ಸರ್ಕಾರದ ಮೂಲಭೂತ ಕಾಳಜಿಯಾಗಬೇಕು. ದುರಾದೃಷ್ಟವಶಾತ್‌ ಈ ಕೆಲಸ ಶೇ. 1ರಷ್ಟೂ ಆಗಿಲ್ಲ. ಆ ದಿಕ್ಕಿನಲ್ಲಿ ಯೋಚನೆಯನ್ನೂ ಮಾಡುತ್ತಿಲ್ಲ. ಘಟ್ಟ ಪ್ರದೇಶದಲ್ಲಿ ರೈಲು ಮಾರ್ಗ ನಿರ್ಮಾಣ, ಗಣಿಗಾರಿಕೆ ನಡೆಯುತ್ತಲೇ ಇದೆ. ಇದೆಲ್ಲವೂ ವನ್ಯಜೀವಿ ಉಳಿವಿಗೆ ಅಪಾಯಕಾರಿ ನಡೆ” ಎಂದು ಎಚ್ಚರಿಸಿದರು.

ನಮೀಬಿಯಾದಿಂದ ಚೀತಾಗಳನ್ನು ತಂದಿರುವ ಹಿನ್ನೆಲೆಯಲ್ಲಿ ಬರಹವೊಂದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪರಸರತಜ್ಞ ನಾಗೇಶ ಹೆಗಡೆಯವರು, “ಭಾರತದ ವನ್ಯಜೀವಿ ಮಂಡಳಿಗೆ ಪ್ರಧಾನಿಯೇ ಅಧ್ಯಕ್ಷರು. ಆದರೆ ಮೋದಿಯವರು ಪ್ರಧಾನಿಯಾದ ಈ ಎಂಟು ವರ್ಷಗಳಿಂದ ಒಮ್ಮೆಯೂ ಈ ಮಂಡಳಿ ಸಭೆ ಸೇರಿಲ್ಲ” ಎಂದು ದೂರಿದ್ದಾರೆ.

“ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ” ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಅವರು ಪೋಸ್ಟ್ ಮಾಡಿದ್ದು, “ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ. ಭಾರತದ ವನ್ಯಜೀವಿ ಮಂಡಳಿಗೆ ಪ್ರಧಾನಿಯೇ ಅಧ್ಯಕ್ಷರು. ಆದರೆ ಮೋದಿಯವರು ಪ್ರಧಾನಿಯಾದ ಈ ಎಂಟು ವರ್ಷಗಳಿಂದ ಒಮ್ಮೆಯೂ ಈ ಮಂಡಳಿ ಸಭೆ ಸೇರಿಲ್ಲ. ಈ ಅವಧಿಯಲ್ಲಿ ಭಾರತದ ವನ್ಯಜೀವಿಗಳ ಸ್ಥಿತಿಗತಿ ಇನ್ನಷ್ಟು ದಾರುಣವಾಗಿದೆ. ಉದ್ಯಮ ವಲಯದ ಬೆಳವಣಿಗೆಗೆ ಅರಣ್ಯ ರಕ್ಷಣಾ ಕಾನೂನುಗಳು ಅಡ್ಡಿ ಒಡ್ಡುತ್ತಿವೆ ಎಂದು ಹೇಳಿ ಪರಿಸರ ರಕ್ಷಣಾ ಕಾನೂನು(ಇಐಎ)ಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದೆ” ಎಂದಿದ್ದಾರೆ.

“ಅದು ಸಾಲದೆಂಬಂತೆ ವನ್ಯ ಸಂರಕ್ಷಣಾ ಸಂಸ್ಥೆಗಳಿಗೆ ಅನುದಾನವನ್ನು ಕಡಿತಗೊಳಿಸಲಾಗುತ್ತಿದೆ. ʼನಿಮಗೆ ಬೇಕಿದ್ದ ಹಣವನ್ನು ನೀವೇ ಹೊಂದಿಸಿಕೊಳ್ಳಿʼ ಎಂದು ಅವಕ್ಕೆ ತಾಕೀತು ಮಾಡಲಾಗುತ್ತಿದೆ. ಈ ಸಂಸ್ಥೆಗಳು ಪ್ರವಾಸೋದ್ಯಮ ಯೋಜನೆಗಳಿಗೆ, ಉದ್ಯಮಿಗಳ ಪ್ರಾಯೋಜಕತ್ವಕ್ಕೆ ಅಂತ ಅದೂ ಇದೂ ಏನೇನೋ ಕಸರತ್ತು ಮಾಡಿ ವನ್ಯ ಸಂರಕ್ಷಣೆಗೆ ಹಣವನ್ನು ಹೊಂದಿಸಬೇಕಾಗಿದೆ” ಎಂದು ವಿಷಾದಿಸಿದ್ದಾರೆ.

Nagesh Hegde (@nageshstweets) / Twitter
ಪರಿಸರತಜ್ಞರಾದ ನಾಗೇಶ ಹೆಗಡೆ

“ಅದೆಷ್ಟೊ ಬಗೆಯ ಪ್ರಾಣಿಪಕ್ಷಿಗಳು ಅವಸಾನದ ಅಂಚಿಗೆ ಬಂದಿವೆ. ನಮ್ಮ ಸಿಂಹಬಾಲದ ಲಂಗೂರಗಳು, ಬಸ್ಟಾರ್ಡ್‌ ಪಕ್ಷಿಗಳು (ದೊರೆವಾಯನ ಹಕ್ಕಿ), ಕಾಝಿರಂಗಾದ ಒಂಟಿಕೊಂಬಿನ ಘೇಂಡಾಗಳು, ಬೆಂಗಾಲ್‌ ಫ್ಲೋರಿಕನ್‌ ಪಕ್ಷಿ ಇವೆಲ್ಲವುಗಳ ಸಂತತಿ ಕ್ಷೀಣಿಸುತ್ತಿದೆ. ಅವುಗಳ ವಾಸಸ್ಥಾನ ಕಿರಿದಾಗುತ್ತಿದೆ. ಇಂಥ ಸಂಗತಿಗಳತ್ತ ಪ್ರಧಾನಿಯವರ ಗಮನ ಸೆಳೆಯುವ ಬದಲು ಅವರನ್ನು ವನ್ಯರಕ್ಷಣಾ ಧುರಂಧರ ಎಂದು ಬಿಂಬಿಸಿದ್ದು ಸರಿಯೆ?” ಎಂದು ಪ್ರಶ್ನಿಸಿದ್ದಾರೆ.

“ಸಿವಂಗಿಗಳಿಗೆ (ಚೀತಾಗಳಿಗೆ) ವಿಶಾಲ ಹುಲ್ಲುಗಾವಲು ಬೇಕು. ಅಲ್ಲಿ ಚಿರತೆ, ಕಿರುಬ (ಹೈನಾ)ದಂಥ ಪ್ರಾಣಿಗಳು ಜಾಸ್ತಿ ಇರಬಾರದು. ಕುನೋದಲ್ಲಿನ ಕುರುಚಲು ಕಾಡನ್ನು ಹುಲ್ಲುಗಾವಲನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಅಥವಾ ಚಿರತೆ, ಹೈನಾಗಳನ್ನು ದೂರ ಸಾಗಿಸಲೂ ಅವಕಾಶ ಇಲ್ಲ. ಇಲ್ಲಿ ಸಿವಂಗಿಗಳಿಗೆ ಬೇಕಾದ ಚುಕ್ಕಿಜಿಂಕೆ, ಚಿಂಕಾರಾ/ ಕೃಷ್ಣ ಮೃಗ, ಸಾಂಬಾರ್‌ ಜಿಂಕೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತಂದು ಸಾಕೋಣವೆಂದರೆ, ಅವಕ್ಕೂ ಹುಲ್ಲುಗಾವಲು ಬೇಕಲ್ಲ? ಈಗಿರುವ ಕುರುಚಲು ಅರಣ್ಯದಲ್ಲೇ ಅವು ಬದುಕಲು ಕಲಿತರೂ ಅವು ಸಿವಂಗಿ ದಾಳಿಯ ಸೂಕ್ಷ್ಮ ಅರಿತು ಪೊದೆಯೊಳಗೆ ಅವಿತು ಕಣ್ಮರೆಯಾದರೆ ಅವನ್ನು ಸಿವಂಗಿ ಅಟ್ಟಾಡಿಸಿ ಹಿಡಿಯಲಾರದು. ಹಾಗಾಗಿ ಇಂಥ ಗೊರಸು ಪ್ರಾಣಿಗಳೆಲ್ಲ ಚಿರತೆಗಳ ಪಾಲಾಗಿ, ಚಿರತೆ ಸಂತತಿ ಬಲುಶೀಘ್ರ ಜಾಸ್ತಿಯಾಗಬಹುದು. ಅವುಗಳ ಜೊತೆ ಸಿವಂಗಿಗಳು ಹೋರಾಡಿ ಗೆಲ್ಲುವುದು ಕಷ್ಟ. ಚಿರತೆ ಮತ್ತು ಕಿರುಬಗಳು ಸೇರಿ ಸಿವಂಗಿಗಳನ್ನು ಹಿಡಿದು ಕೊಂದೇ ಹಾಕಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಕುನೋ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ, ಗಿರಿಜನರ ಸುಮಾರು 150 ಹಳ್ಳಿಗಳಿವೆ. ಮೋದಿಯವರ ಈ ಯೋಜನೆಗೆ ಭರ್ಜರಿ ಜಯ ಸಿಗಬೇಕೆಂಬ ಉದ್ದೇಶದಿಂದ ಸಿವಂಗಿಗಳ ಓಡಾಟಕ್ಕೆ ಜಾಗ ಮಾಡಬೇಕೆಂಬ ರಣೋತ್ಸಾಹದಲ್ಲಿ ಅವರನ್ನೆಲ್ಲ ಅವಸರದಲ್ಲಿ ಎತ್ತಂಗಡಿ ಮಾಡಲು ಹೋದರೆ ಪ್ರತಿಭಟನೆ, ಹೋರಾಟ ಎಲ್ಲ ಹೆಚ್ಚಾಗಬಹುದು. ಮರುವಸತಿಗೆ ಒಪ್ಪಿದರೆ ನಿಮ್ಮ ಬದುಕು ಈಗಿಗಿಂತ ಒಳ್ಳೆಯದಾಗುತ್ತದೆಂದು ಅವರನ್ನು ನಂಬಿಸಬೇಕು. ಅಂಥ ಮಾದರಿಯನ್ನು ಅವರಿಗೆ ತೋರಿಸಬೇಕು. ಎಲ್ಲಿದೆ ಅಂಥ ಮಾದರಿ?” ಎಂದು ಕೇಳಿದ್ದಾರೆ.

“ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಸಿವಂಗಿಗಳು ಬರಲಿವೆ. ಹೀಗೆ ಈ ಯೋಜನೆ ಇನ್ನೂ 13 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಪ್ರಶ್ನೆ ಏನೆಂದರೆ, ನಮ್ಮಲ್ಲಿ ಅಳಿವಿನಂಚಿನಲ್ಲಿರುವ ಅನೇಕ ಪ್ರಾಣಿ-ಪಕ್ಷಿಗಳು ಸರಕಾರಿ ನೆರವಿಗೆ ಕಾದು ಕೂತಿವೆ. ಗಣಿಗಾರಿಕೆಯ ಅಬ್ಬರ, ನದಿಮೂಲಗಳ ನಾಶ, ಹೆದ್ದಾರಿಗಳ ವಿಸ್ತರಣೆ, ದಟ್ಟ ಅರಣ್ಯವನ್ನು ಸೀಳಿ ಹುಬ್ಬಳ್ಳಿ- ಅಂಕೋಲಾದಂಥ ನಿಷ್ಪ್ರಯೋಜಕ ರೈಲುಮಾರ್ಗ ಯೋಜನೆಗೆ ಸಿದ್ಧತೆ ಎಗ್ಗಿಲ್ಲದೆ ನಡೆಯುತ್ತಿವೆ. ಪ್ರಧಾನಿ ಮೋದಿಯವರಿಗೆ ವನ್ಯಜೀವಿ ಮಂಡಳಿಯ ಸಭೆ ಕರೆಯಲು ಪುರುಸೊತ್ತೇ ಆಗಿಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Isn’t it is a shame to India?,while Limpi Virus has killed our cattles and daily death rate are at hike. Farmers and dairy farmers are loosing thier income. Getting 8 cheethas will solve the issue? Modi should start eating rice than Chinese mashroom, so he understands Indian Problems.
    It’s we citizens keeping quite at prime ministers baseless investment out of Tax Payers. Only poor pay tax, big high rich ppl are exempted from paying tax.”Sala manna”( karza Maaf)..
    Don’t waste public tax money on unimportant things.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...