Homeಮುಖಪುಟಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಎಎಪಿ) ನಡುವಿನ ಆಂತರಿಕ ಕಲಹವೇ ಕಾರಣ ಎಂದು ಶಿವಸೇನೆ (ಯುಬಿಟಿ) ಸೋಮವಾರ ಕಿಡಿಕಾರಿದೆ.

ಬಿಜೆಪಿ ವಿರುದ್ದ ಒಂದಾಗುವ ಬದಲು ಪರಸ್ಪರ ಕಿತ್ತಾಡಿಕೊಂಡರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಎಂದು ಶಿವಸೇನೆ (ಯುಬಿಟಿ) ನಾಯಕರಾದ ಉದ್ದವ್ ಠಾಕ್ರೆ ಮತ್ತು ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

“ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ನಡುವಿನ ಕಿತ್ತಾಟ ಬಿಜೆಪಿಯ ಗೆಲುವಿಗೆ ನೇರವಾಗಿ ಸಹಾಯ ಮಾಡಿತು. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ನಾಶಮಾಡಲು ಹೊರಟವು. ಇದರಿಂದಾಗಿ ಬಿಜೆಪಿಗೆ ಗೆಲುವು ಸುಲಭವಾಯಿತು. ಇದೇ ಮುಂದುವರಿದರೆ ಮೈತ್ರಿ ಮಾಡಿಕೊಳ್ಳುವುದಾದರೂ ಏಕೆ? ನಿಮ್ಮ ಹೃದಯಕ್ಕೆ ತೃಪ್ತಿಯಾಗುವವರೆಗೆ ಹೋರಾಡಿ, ನಿಮ್ಮ ನಡುವೆಯೇ ಹೋರಾಡುತ್ತಲೇ ಇರಿ” ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಇಬ್ಬರು ನಾಯಕರು ಬರೆದಿದ್ದಾರೆ.

“ಈ ಸಮೀಕ್ಷೆಗಳು ಮತ್ತು ಅದರ ಫಲಿತಾಂಶಗಳಿಂದ ಯಾರೂ ಪಾಠ ಕಲಿಯಲು ಸಾಧ್ಯವಾಗದಿದ್ದರೆ, ನಿರಂಕುಶ ಪ್ರಭುತ್ವ ಅಧಿಕಾರ ಪಡೆಯಲು ಸಹಾಯ ಮಾಡಿದ್ದಕ್ಕಾಗಿ ಈ ಜನರು ಶ್ರೇಯಸ್ಸನ್ನು ಪಡೆಯಬೇಕು. ಅಂತಹ ಉದಾತ್ತ ಕೆಲಸವನ್ನು ಮಾಡಲು ಗಂಗಾ ನದಿಯಲ್ಲಿ ಸ್ನಾನ ಮಾಡುವ ಅಗತ್ಯವಿಲ್ಲ” ಎಂದು ಸಂಪಾದಕೀಯ ಹೇಳಿದೆ.

ಇಂಡಿಯಾ ಒಕ್ಕೂಟ ಎನ್ನುವುದು ಸಂಸತ್ತಿನ ಒಳಗೆ ಮಾತ್ರ ಕಂಡು ಬರುತ್ತಿದೆ, ಹೊರಗಡೆ ಇಲ್ಲ. ಈಗ ಸಂಸತ್ತಿನ ಹೊರಗಡೆಯೂ ಪರಸ್ಪರ ಒಗ್ಗಟ್ಟು ಪ್ರದರ್ಶಿಸಬೇಕಾದ ಅಗತ್ಯತೆ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳ ಸಂದರ್ಭಗಳಲ್ಲಿ ಇಂಡಿಯಾ ಒಕ್ಕೂಟದಲ್ಲಿ ಸ್ಪಷ್ಟವಾಗಿ ಕಂಡು ಬಂದ ಭಿನ್ನಾಭಿಪ್ರಾಯಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಬಿಜೆಪಿಯನ್ನು ಬಲಪಡಿಸಿದೆ ಎಂದು ಸಾಮ್ನಾ ಸಂಪಾದಕೀಯ ಒತ್ತಿ ಹೇಳಿದೆ.

ದೆಹಲಿಯಲ್ಲಿ ಕನಿಷ್ಠ 14 ಕ್ಷೇತ್ರಗಳಲ್ಲಿ ಎಎಪಿಯ ಸೋಲಿಗೆ ಕಾಂಗ್ರೆಸ್ ಸಕ್ರಿಯವಾಗಿ ಕೊಡುಗೆ ನೀಡಿದೆ. ಕಳೆದ ವರ್ಷ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಇದೇ ರೀತಿಯ ಸನ್ನಿವೇಶ ಉಂಟಾಗಿತ್ತು. ಅಲ್ಲಿಯೂ ಬಿಜೆಪಿಗೆ ಗೆದ್ದಿದೆ ಎಂದಿದೆ. ಕಾಂಗ್ರೆಸ್‌ನೊಳಗಿನ ಆಂತರಿಕ ಬಣಗಳು ರಾಹುಲ್ ಗಾಂಧಿಯವರ ನಾಯಕತ್ವವನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿವೆಯೇ ಎಂದು ಸಂಪಾದಕೀಯ ಪ್ರಶ್ನಿಸಿದೆ.

“ದೆಹಲಿ ಚುನಾವಣೆಗಳಲ್ಲಿನ ಸೋಲುಗಳು ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಮಹಾರಾಷ್ಟ್ರದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆಗಳನ್ನು ಕೊನೆಯ ಕ್ಷಣದವರೆಗೂ ಮುಂದುವರಿಸಿದ್ದರು. ಇದು ಅವ್ಯವಸ್ಥೆಯ ಪರಿಸ್ಥಿತಿಗೆ ಕಾರಣವಾಯಿತು” ಎಂದು ಸಾಮ್ನಾ ಸಂಪಾದಕೀಯ ಹೇಳಿದೆ.

ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿಕೊಳ್ಳಬೇಕು

ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್, ಎಲ್ಲಾ ಮೈತ್ರಿ ಪಾಲುದಾರರೊಂದಿಗೆ ಸುಗಮ ಸಮನ್ವಯ ಸಾಧಿಸಲು ಜವಾಬ್ದಾರಿ ತೆಗೆದುಕೊಳ್ಳಬೇಕು. ಸೀಟು ಹಂಚಿಕೆ ಮಾತುಕತೆಗಳ ಸಮಯದಲ್ಲಿ ಕಾಂಗ್ರೆಸ್ ಕೇವಲ ತೋಳುಗಳನ್ನು ಎತ್ತುವ ಬದಲು ಸಂಚಾಲಕರಾಗಿ ಕಾರ್ಯನಿರ್ವಹಿಸಬೇಕು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಒತ್ತಿ ಹೇಳಿದ್ದಾರೆ. ಆದಾಗ್ಯೂ, ದೆಹಲಿ ಸೋಲಿಗೆ ಎಎಪಿ ಕಾಂಗ್ರೆಸ್‌ನಂತೆಯೇ ಹೊಣೆಗಾರ ಎಂದಿದ್ದಾರೆ. ಮೈತ್ರಿ ರಾಜಕೀಯವು ಯಾವುದೇ ಅಹಂಕಾರವನ್ನು ಒಳಗೊಂಡಿರಬಾರದು ಎಂದು ಸಲಹೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಇಂಡಿಯಾದ ಒಕ್ಕೂಟದ ಮಿತ್ರಪಕ್ಷಗಳು ನಿಯಮಿತವಾಗಿ ಸಭೆಗಳು ಮತ್ತು ಚರ್ಚೆಗಳನ್ನು ನಡೆಸುತ್ತಿದ್ದವು. ಆದರೆ, ರಾಜ್ಯಗಳ ಚುನಾವಣೆಗಳ ಸಮಯದಲ್ಲಿ ಅದು ಆಗಲಿಲ್ಲ. ವಿರೋಧ ಪಕ್ಷಗಳು ಚುನಾವಣೆಗಳಲ್ಲಿ ಸ್ಪರ್ಧಿಸಲು ಮಾತ್ರವೇ? ಅಥವಾ ಎಲ್ಲಾ ಸಮಯದಲ್ಲೂ ಒಗ್ಗಟ್ಟಿನ ರಂಗವಾಗಿರಲು ಉದ್ದೇಶಿಸಿವೆಯೇ? ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅನಿಶ್ಚಿತತೆ ಮತ್ತು ಗೊಂದಲವಿದೆ ಎಂದು ರಾವತ್ ಹೇಳಿದ್ದಾರೆ.

“ವಿರೋಧ ಪಕ್ಷಗಳ ಕರ್ತವ್ಯವೆಂದರೆ ವಿಧಾನಸಭೆ ಮತ್ತು ಲೋಕಸಭೆ ಸೇರಿದಂತೆ ಎಲ್ಲಾ ಸಂದರ್ಭಗಳಲ್ಲಿ ಬೀದಿಗಿಳಿಯುವುದು. ಇಂಡಿಯಾ ಒಕ್ಕೂಟ ಸಂಸತ್ತಿನಲ್ಲಿ ಮಾತ್ರ ಗೋಚರಿಸುತ್ತಿದೆ. ಸಂಸತ್ತಿನ ಹೊರಗೆಯೂ ಒಗ್ಗಟ್ಟಾಗಿರುವುದು ಅಗತ್ಯ. ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಉದ್ಧವ್ ಠಾಕ್ರೆ, ಶರದ್ ಪವಾರ್, ಅಖಿಲೇಶ್ ಯಾದವ್, ತೇಜಸ್ವಿ ಯಾದವ್ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ದೊಡ್ಡ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟವು ಬಲವಾಗಿ ಮತ್ತು ಒಗ್ಗಟ್ಟಿನಿಂದ ಇರಬೇಕು. ಚುನಾವಣೆಗಳಲ್ಲಿ ಸ್ಪರ್ಧಿಸಲು ಮಾತ್ರ ಇಂಡಿಯಾ ಒಕ್ಕೂಟವೇ ಅಥವಾ ಮಹಾ ವಿಕಾಸ್ ಅಘಾಡಿ (ಎಂವಿಎ)ಯೇ? ಇದು ಜನರ ಮನಸ್ಸಿನಲ್ಲಿರುವ ಪ್ರಶ್ನೆ” ಎಂದು ರಾವತ್ ಬರೆದಿದ್ದಾರೆ.

“100 (99) ಸಂಸದರನ್ನು ಹೊಂದಿರುವ ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಇಂಡಿಯಾ ಬಣದಲ್ಲಿ ಪ್ರಬಲ ಶಕ್ತಿಯಾಗಿದೆ. ಅದು 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ನಾವೆಲ್ಲರೂ ಒಗ್ಗೂಡಿ ಹೋರಾಡಿದರೆ ಮಾತ್ರ ಇದು ಸಾಧ್ಯ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ನಾವು ಈ ಯಶಸ್ಸನ್ನು ಕಂಡಿದ್ದೇವೆ. ಕಾಂಗ್ರೆಸ್ ಪ್ರತಿಯೊಂದು ಅಂಶದಲ್ಲೂ ನಾಯಕತ್ವದ ಪಾತ್ರವನ್ನು ವಹಿಸಬೇಕಾಗಿದೆ. ‘ದೊಡ್ಡಣ್ಣ’ ಆಗಿರುವುದು ಸೀಟು ಹಂಚಿಕೆಗೆ ಸೀಮಿತವಾಗಿರಬಾರದು; ಇದು ಸಮನ್ವಯದ ಜವಾಬ್ದಾರಿಯನ್ನು ಸಹ ಒಳಗೊಂಡಿದೆ” ಎಂದು ರಾವತ್ ಹೇಳಿದ್ದಾರೆ.

’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...