Homeಮುಖಪುಟಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಎಎಪಿ) ನಡುವಿನ ಆಂತರಿಕ ಕಲಹವೇ ಕಾರಣ ಎಂದು ಶಿವಸೇನೆ (ಯುಬಿಟಿ) ಸೋಮವಾರ ಕಿಡಿಕಾರಿದೆ.

ಬಿಜೆಪಿ ವಿರುದ್ದ ಒಂದಾಗುವ ಬದಲು ಪರಸ್ಪರ ಕಿತ್ತಾಡಿಕೊಂಡರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಎಂದು ಶಿವಸೇನೆ (ಯುಬಿಟಿ) ನಾಯಕರಾದ ಉದ್ದವ್ ಠಾಕ್ರೆ ಮತ್ತು ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

“ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ನಡುವಿನ ಕಿತ್ತಾಟ ಬಿಜೆಪಿಯ ಗೆಲುವಿಗೆ ನೇರವಾಗಿ ಸಹಾಯ ಮಾಡಿತು. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ನಾಶಮಾಡಲು ಹೊರಟವು. ಇದರಿಂದಾಗಿ ಬಿಜೆಪಿಗೆ ಗೆಲುವು ಸುಲಭವಾಯಿತು. ಇದೇ ಮುಂದುವರಿದರೆ ಮೈತ್ರಿ ಮಾಡಿಕೊಳ್ಳುವುದಾದರೂ ಏಕೆ? ನಿಮ್ಮ ಹೃದಯಕ್ಕೆ ತೃಪ್ತಿಯಾಗುವವರೆಗೆ ಹೋರಾಡಿ, ನಿಮ್ಮ ನಡುವೆಯೇ ಹೋರಾಡುತ್ತಲೇ ಇರಿ” ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಇಬ್ಬರು ನಾಯಕರು ಬರೆದಿದ್ದಾರೆ.

“ಈ ಸಮೀಕ್ಷೆಗಳು ಮತ್ತು ಅದರ ಫಲಿತಾಂಶಗಳಿಂದ ಯಾರೂ ಪಾಠ ಕಲಿಯಲು ಸಾಧ್ಯವಾಗದಿದ್ದರೆ, ನಿರಂಕುಶ ಪ್ರಭುತ್ವ ಅಧಿಕಾರ ಪಡೆಯಲು ಸಹಾಯ ಮಾಡಿದ್ದಕ್ಕಾಗಿ ಈ ಜನರು ಶ್ರೇಯಸ್ಸನ್ನು ಪಡೆಯಬೇಕು. ಅಂತಹ ಉದಾತ್ತ ಕೆಲಸವನ್ನು ಮಾಡಲು ಗಂಗಾ ನದಿಯಲ್ಲಿ ಸ್ನಾನ ಮಾಡುವ ಅಗತ್ಯವಿಲ್ಲ” ಎಂದು ಸಂಪಾದಕೀಯ ಹೇಳಿದೆ.

ಇಂಡಿಯಾ ಒಕ್ಕೂಟ ಎನ್ನುವುದು ಸಂಸತ್ತಿನ ಒಳಗೆ ಮಾತ್ರ ಕಂಡು ಬರುತ್ತಿದೆ, ಹೊರಗಡೆ ಇಲ್ಲ. ಈಗ ಸಂಸತ್ತಿನ ಹೊರಗಡೆಯೂ ಪರಸ್ಪರ ಒಗ್ಗಟ್ಟು ಪ್ರದರ್ಶಿಸಬೇಕಾದ ಅಗತ್ಯತೆ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳ ಸಂದರ್ಭಗಳಲ್ಲಿ ಇಂಡಿಯಾ ಒಕ್ಕೂಟದಲ್ಲಿ ಸ್ಪಷ್ಟವಾಗಿ ಕಂಡು ಬಂದ ಭಿನ್ನಾಭಿಪ್ರಾಯಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಬಿಜೆಪಿಯನ್ನು ಬಲಪಡಿಸಿದೆ ಎಂದು ಸಾಮ್ನಾ ಸಂಪಾದಕೀಯ ಒತ್ತಿ ಹೇಳಿದೆ.

ದೆಹಲಿಯಲ್ಲಿ ಕನಿಷ್ಠ 14 ಕ್ಷೇತ್ರಗಳಲ್ಲಿ ಎಎಪಿಯ ಸೋಲಿಗೆ ಕಾಂಗ್ರೆಸ್ ಸಕ್ರಿಯವಾಗಿ ಕೊಡುಗೆ ನೀಡಿದೆ. ಕಳೆದ ವರ್ಷ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಇದೇ ರೀತಿಯ ಸನ್ನಿವೇಶ ಉಂಟಾಗಿತ್ತು. ಅಲ್ಲಿಯೂ ಬಿಜೆಪಿಗೆ ಗೆದ್ದಿದೆ ಎಂದಿದೆ. ಕಾಂಗ್ರೆಸ್‌ನೊಳಗಿನ ಆಂತರಿಕ ಬಣಗಳು ರಾಹುಲ್ ಗಾಂಧಿಯವರ ನಾಯಕತ್ವವನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿವೆಯೇ ಎಂದು ಸಂಪಾದಕೀಯ ಪ್ರಶ್ನಿಸಿದೆ.

“ದೆಹಲಿ ಚುನಾವಣೆಗಳಲ್ಲಿನ ಸೋಲುಗಳು ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಮಹಾರಾಷ್ಟ್ರದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆಗಳನ್ನು ಕೊನೆಯ ಕ್ಷಣದವರೆಗೂ ಮುಂದುವರಿಸಿದ್ದರು. ಇದು ಅವ್ಯವಸ್ಥೆಯ ಪರಿಸ್ಥಿತಿಗೆ ಕಾರಣವಾಯಿತು” ಎಂದು ಸಾಮ್ನಾ ಸಂಪಾದಕೀಯ ಹೇಳಿದೆ.

ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿಕೊಳ್ಳಬೇಕು

ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್, ಎಲ್ಲಾ ಮೈತ್ರಿ ಪಾಲುದಾರರೊಂದಿಗೆ ಸುಗಮ ಸಮನ್ವಯ ಸಾಧಿಸಲು ಜವಾಬ್ದಾರಿ ತೆಗೆದುಕೊಳ್ಳಬೇಕು. ಸೀಟು ಹಂಚಿಕೆ ಮಾತುಕತೆಗಳ ಸಮಯದಲ್ಲಿ ಕಾಂಗ್ರೆಸ್ ಕೇವಲ ತೋಳುಗಳನ್ನು ಎತ್ತುವ ಬದಲು ಸಂಚಾಲಕರಾಗಿ ಕಾರ್ಯನಿರ್ವಹಿಸಬೇಕು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಒತ್ತಿ ಹೇಳಿದ್ದಾರೆ. ಆದಾಗ್ಯೂ, ದೆಹಲಿ ಸೋಲಿಗೆ ಎಎಪಿ ಕಾಂಗ್ರೆಸ್‌ನಂತೆಯೇ ಹೊಣೆಗಾರ ಎಂದಿದ್ದಾರೆ. ಮೈತ್ರಿ ರಾಜಕೀಯವು ಯಾವುದೇ ಅಹಂಕಾರವನ್ನು ಒಳಗೊಂಡಿರಬಾರದು ಎಂದು ಸಲಹೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಇಂಡಿಯಾದ ಒಕ್ಕೂಟದ ಮಿತ್ರಪಕ್ಷಗಳು ನಿಯಮಿತವಾಗಿ ಸಭೆಗಳು ಮತ್ತು ಚರ್ಚೆಗಳನ್ನು ನಡೆಸುತ್ತಿದ್ದವು. ಆದರೆ, ರಾಜ್ಯಗಳ ಚುನಾವಣೆಗಳ ಸಮಯದಲ್ಲಿ ಅದು ಆಗಲಿಲ್ಲ. ವಿರೋಧ ಪಕ್ಷಗಳು ಚುನಾವಣೆಗಳಲ್ಲಿ ಸ್ಪರ್ಧಿಸಲು ಮಾತ್ರವೇ? ಅಥವಾ ಎಲ್ಲಾ ಸಮಯದಲ್ಲೂ ಒಗ್ಗಟ್ಟಿನ ರಂಗವಾಗಿರಲು ಉದ್ದೇಶಿಸಿವೆಯೇ? ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅನಿಶ್ಚಿತತೆ ಮತ್ತು ಗೊಂದಲವಿದೆ ಎಂದು ರಾವತ್ ಹೇಳಿದ್ದಾರೆ.

“ವಿರೋಧ ಪಕ್ಷಗಳ ಕರ್ತವ್ಯವೆಂದರೆ ವಿಧಾನಸಭೆ ಮತ್ತು ಲೋಕಸಭೆ ಸೇರಿದಂತೆ ಎಲ್ಲಾ ಸಂದರ್ಭಗಳಲ್ಲಿ ಬೀದಿಗಿಳಿಯುವುದು. ಇಂಡಿಯಾ ಒಕ್ಕೂಟ ಸಂಸತ್ತಿನಲ್ಲಿ ಮಾತ್ರ ಗೋಚರಿಸುತ್ತಿದೆ. ಸಂಸತ್ತಿನ ಹೊರಗೆಯೂ ಒಗ್ಗಟ್ಟಾಗಿರುವುದು ಅಗತ್ಯ. ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಉದ್ಧವ್ ಠಾಕ್ರೆ, ಶರದ್ ಪವಾರ್, ಅಖಿಲೇಶ್ ಯಾದವ್, ತೇಜಸ್ವಿ ಯಾದವ್ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ದೊಡ್ಡ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟವು ಬಲವಾಗಿ ಮತ್ತು ಒಗ್ಗಟ್ಟಿನಿಂದ ಇರಬೇಕು. ಚುನಾವಣೆಗಳಲ್ಲಿ ಸ್ಪರ್ಧಿಸಲು ಮಾತ್ರ ಇಂಡಿಯಾ ಒಕ್ಕೂಟವೇ ಅಥವಾ ಮಹಾ ವಿಕಾಸ್ ಅಘಾಡಿ (ಎಂವಿಎ)ಯೇ? ಇದು ಜನರ ಮನಸ್ಸಿನಲ್ಲಿರುವ ಪ್ರಶ್ನೆ” ಎಂದು ರಾವತ್ ಬರೆದಿದ್ದಾರೆ.

“100 (99) ಸಂಸದರನ್ನು ಹೊಂದಿರುವ ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಇಂಡಿಯಾ ಬಣದಲ್ಲಿ ಪ್ರಬಲ ಶಕ್ತಿಯಾಗಿದೆ. ಅದು 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ನಾವೆಲ್ಲರೂ ಒಗ್ಗೂಡಿ ಹೋರಾಡಿದರೆ ಮಾತ್ರ ಇದು ಸಾಧ್ಯ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ನಾವು ಈ ಯಶಸ್ಸನ್ನು ಕಂಡಿದ್ದೇವೆ. ಕಾಂಗ್ರೆಸ್ ಪ್ರತಿಯೊಂದು ಅಂಶದಲ್ಲೂ ನಾಯಕತ್ವದ ಪಾತ್ರವನ್ನು ವಹಿಸಬೇಕಾಗಿದೆ. ‘ದೊಡ್ಡಣ್ಣ’ ಆಗಿರುವುದು ಸೀಟು ಹಂಚಿಕೆಗೆ ಸೀಮಿತವಾಗಿರಬಾರದು; ಇದು ಸಮನ್ವಯದ ಜವಾಬ್ದಾರಿಯನ್ನು ಸಹ ಒಳಗೊಂಡಿದೆ” ಎಂದು ರಾವತ್ ಹೇಳಿದ್ದಾರೆ.

’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...