Homeಕರ್ನಾಟಕಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

ಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

- Advertisement -
- Advertisement -

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....