Homeಕರ್ನಾಟಕಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

ಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

- Advertisement -
- Advertisement -

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...