Homeಕರ್ನಾಟಕಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

ಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

- Advertisement -
- Advertisement -

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...