Homeಕರ್ನಾಟಕಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

ಕಾಂಗ್ರೆಸ್‌ ತೆರೆದಿರುವ ‘40ಪರ್ಸೆಂಟ್‌ಸರ್ಕಾರ.ಕಾಂ’ ವೆಬ್‌ಸೈಟ್‌ನಲ್ಲಿ ಏನೇನಿದೆ?

- Advertisement -
- Advertisement -

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...